
CHITRADURGA NEWS | 06 JUNE 2024
ಚಿತ್ರದುರ್ಗ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ್ದ ವಿದ್ಯಾರ್ಥಿ ಇದೀಗ ಮರು ಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನಗಳಿಸಿದ್ದಾನೆ.
ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆ ವಿದ್ಯಾರ್ಥಿ ಸಿ.ಐ.ಅಭಯ್ 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 623 ಅಂಕ ಪಡೆದು ರಾಜ್ಯಕ್ಕೆ 3ನೇ ಸ್ಥಾನಗಳಿಸಿದ್ದಾನೆ.
ಕ್ಲಿಕ್ ಮಾಡಿ ಓದಿ: ಆಗ್ನೇಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ | ಕುತೂಹಲ ಮೂಡಿಸಿದ ಫಲಿತಾಂಶ

ಈ ಹಿಂದೆ 625ಕ್ಕೆ 620 ಅಂಕಗಳನ್ನುಗಳಿಸಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ್ದನು. ಆದರೆ ಮರು ಮೌಲ್ಯಮಾಪನದಲ್ಲಿ 3 ಅಂಕಗಳನ್ನು ಹೆಚ್ಚುಗಳಿಸಿ 623 ಅಂಕಗಳೊಂದಿಗೆ ರಾಜ್ಯಕ್ಕೆ ಮೂರನೇ ಸ್ಥಾನಗಳಿಸಿದ್ದಾನೆ. ವಿದ್ಥಾರ್ಥಿ ಸಾಧನಗೆ ಶಾಲಾ ಆಡಳಿತ ಮಂಡಳಿ ಹಾಗು ಶಿಕ್ಷಕ ವೃಂದ ಸಂತಸ ವ್ಯಕ್ತಪಡಿಸಿದೆ ಎಂದು ಸಂಸ್ಥೆ ಮುಖ್ಯಶಿಕ್ಷಕ ಎನ್.ಜಿ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
