CHITRADURGA NEWS | 26 DECEMBER 2024
ಹೊಳಲ್ಕೆರೆ: ತಾಲ್ಲೂಕು ಚಿಕ್ಕಜಾಜೂರಿನಿಂದ ಚಿಕ್ಕಂದವಾಡಿ ಮೂಲಕ ಅಮೃತಾಪುರ ಹೋಗುವ 12 ಕಿ.ಮೀ. ರಿಂದ 16.50 ಕಿ.ಮೀ ವರೆಗಿನ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ರಸ್ತೆಯ ಕಾಂಕ್ರಿಟ್ ಕಾಮಗಾರಿ ಪ್ರಗತಿಯಲ್ಲಿದ್ದು, ಕ್ಯೂರಿಂಗ್ ಅವಧಿ ಮುಗಿಯುವವರೆಗೂ ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಜನವರಿ ಮೊದಲ ವಾರದಲ್ಲಿ ವಿವಿ ಸಾಗರ ಕೋಡಿ

ಚಿಕ್ಕಂದವಾಡಿ ಮತ್ತು ಅರಸನಘಟ್ಟಗೆ ಹೋಗುವ ವಾಹನಗಳು, ಚಿಕ್ಕಜಾಜೂರು ಗ್ರಾಮದ ಮಾರುಕಟ್ಟೆ ಪ್ರಾಂಗಣದ ಮುಂಭಾಗದಿಂದ ಚನ್ನಪಟ್ಟಣ ಹೋಗುವ ರಸ್ತೆಯನ್ನು ಬಳಸಿಕೊಂಡು ಅಪ್ಪರಸನಹಳ್ಳಿ ಮೂಲಕ ಚಿಕ್ಕಂದವಾಡಿ ಕೆರೆಯ ಸಮೀಪ ಸೇರುವುದು. ಅಲ್ಲಿಂದ ಮುಂದೆ ಅಪ್ಪರಸನಹಳ್ಳಿ ಮೂಲಕ ಅರಸನಘಟ್ಟ ಗ್ರಾಮ ಸೇರಬಹುದು.
ಹೊಳಲ್ಕೆರೆ ಪಟ್ಟಣಕ್ಕೆ ಹೋಗುವ ವಾಹನಗಳು ಚಿಕ್ಕಂದನವಾಡಿ ಮತ್ತು ಅರಸನಘಟ್ಟ ಗ್ರಾಮದಿಂದ ಅಪ್ಪರಸನಹಳ್ಳಿ ಹೋಗುವ ರಸ್ತೆಯನ್ನು ಬಳಸಿಕೊಂಡು, ಪಾಡಿಗಟ್ಟೆ ಅಥವಾ ಆಡನೂರು ರಸ್ತೆಯ ಮೂಲಕ ಹೊಳಲ್ಕೆರೆ ಪಟ್ಟಣ ಸೇರಬಹುದು ಎಂದು ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
