CHITRADURGA NEWS | 05 NOVEMBER 2024
ಹೊಸದುರ್ಗ: ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಂಗಳೂರಿನ ಡಾ.ರೊನಾಲ್ಡ್ ಕೊಲಾಸ್ ಸಾಮರಸ್ಯ ಪ್ರಶಸ್ತಿಗೆ(Ronald Colas Harmony Award) ಪುರಸ್ಕೃತರಾಗಿದ್ದಾರೆ.
ಕ್ಲಿಕ್ ಮಾಡಿ ಓದಿ: APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
1 ಲಕ್ಷ ರೂಪಾಯಿ ನಗದು, ಸ್ಮರಣಿಕೆ ಒಳಗೊಂಡ ಪ್ರಶಸ್ತಿ ಪ್ರಧಾನ ಸಮಾರಂಭ ನವೆಂಬರ್ 10 ರಂದು ಸಂಜೆ 4 ಗಂಟೆಗೆ ಮಂಗಳೂರಿನ ನೀರುಮಾರ್ಗದ ಕೊಲರೈ ಚರ್ಚ್ನಲ್ಲಿ ನಡೆಯಲಿದೆ.
ಕ್ರೈಸ್ತ ಸಮುದಾಯದ ಮುಖಂಡ ಡಾ.ರೊನಾಲ್ಡ್ ಕೊಲಾಸ್ ಅವರು ಅನೇಕ ಚರ್ಚ್ಗಳನ್ನು, ದೇವಾಲಯಗಳನ್ನು ಕಟ್ಟಿಸಿಕೊಟ್ಟಿದ್ದು, ಅವರ ಹೆಸರಿನ ಪ್ರಶಸ್ತಿಯನ್ನು ಆಮಿ ಆನಿ ಆಮ್ಚಿಂ (ನಾವು ಮತ್ತು ನಮ್ಮವರು) ಸಂಸ್ಥೆಯು ಈ ವರ್ಷದಿಂದ ಆರಂಭಿಸಿದೆ.
ಕ್ಲಿಕ್ ಮಾಡಿ ಓದಿ: Folk Academy: ಜಾನಪದ ಅಕಾಡೆಮಿ ಪ್ರಶಸ್ತಿ ಘೋಷಣೆ | ಎಲಗಟ್ಟೆ ಗೊಲ್ಲರಹಟ್ಟಿ ಸಿರಿಯಮ್ಮ ಆಯ್ಕೆ
ಮೊದಲ ಬಾರಿಯ ಪ್ರಶಸ್ತಿಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಭಾಜನರಾಗಿದ್ದಾರೆ ಎಂದು ಆಮಿ ಆನಿ ಆಮ್ಚಿಂ ಸಂಸ್ಥೆಯ ಅಧ್ಯಕ್ಷ ಡೆನಿಸ್ ಡಿಸಿಲ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number