CHITRADURGA NEWS | 30 OCTOBER 2024
ಚಿತ್ರದುರ್ಗ: ಬಿಜೆಪಿ(BJP)ಯಿಂದ ಮಂಗಳವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನದ ಅಂಗವಾಗಿ ನಗರದ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಒನಕೆ ಓಬವ್ವ ವೃತ್ತದವರೆಗೆ ಏಕತೆಗಾಗಿ ಓಟ ಹಮ್ಮಿಕೊಲಾಗಿತ್ತು.
ಕ್ಲಿಕ್ ಮಾಡಿ ಓದಿ: car caught fire: ಏಕಾಏಕಿ ಹೊತ್ತಿ ಉರಿದ ಕಾರು | ಜಿಲ್ಲಾ ಪಂಚಾಯಿತಿ ಬಳಿ ಘಟನೆ
ಈ ವೇಳೆ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಟಿ.ಜಿ.ನರೇಂದ್ರನಾಥ್ ಮಾತನಾಡಿ, ದೇಶದ ಐಕ್ಯತೆ ಮತ್ತು ಏಕತೆಗಾಗಿ ಹೋರಾಡಿದ ಸರ್ದಾರ್ ವಲ್ಲಭ ಭಾಯಿ ಪಟೇಲ್ರವರಲ್ಲಿದ್ದ ದೇಶಭಕ್ತಿಯನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.
563 ಸಂಸ್ಥಾನಗಳನ್ನು ಒಗ್ಗೂಡಿಸಿ ಏಕತೆ, ಸಾರ್ವಭೌಮತೆಯನ್ನು ಮೆರೆದ ದಿಟ್ಟ ವ್ಯಕ್ತಿತ್ವದ ಸರ್ದಾರ್ ವಲ್ಲಭಭಾಯಿ ಪಟೇಲ್ ಹೈದರಾಬಾದ್ ವಿಮೋಚನೆಯ ಕಷ್ಟದ ದಿನಗಳಲ್ಲಿ ಸೈನ್ಯ ಕಟ್ಟಿಕೊಂಡು ಬ್ರಿಟೀಷರ ವಿರುದ್ದ ಹೋರಾಡಿ ಬೇರೆ ಬೇರೆ ಭಾಷೆ, ಜಾತಿ, ಧರ್ಮವನ್ನು ಒಗ್ಗೂಡಿಸಿ ದೇಶದ ಅಖಂಡತೆಯನ್ನು ಎತ್ತಿಹಿಡಿದ ಹೆಗ್ಗಳಿಕೆ ಅವರದು ಎಂದು ಸ್ಮರಿಸಿದರು.
ಪ್ರಧಾನ ಮಂತ್ರಿಯಾಗುವ ಅವಕಾಶ ಸಿಕ್ಕಿದ್ದನ್ನು ತ್ಯಾಗ ಮಾಡಿ ದೇಶಭಕ್ತಿ ಮೈಗೂಡಿಸಿಕೊಂಡ ಸರ್ದಾರ್ ವಲ್ಲಭಭಾಯಿ ಪಟೇಲ್ರವರ ಆಚಾರ-ವಿಚಾರಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಸಬೇಕಿದೆ ಎಂದು ಹೇಳಿದರು.
ಕ್ಲಿಕ್ ಮಾಡಿ ಓದಿ: Diwali festival: ದೀಪಾವಳಿ ಹಬ್ಬದ ಪ್ರಯುಕ್ತ ದೀಪ ಸಂಜೀವಿನಿ ಕಾರ್ಯಕ್ರಮ | ಡಿಸಿ ಚಾಲನೆ
ಈ ವೇಳೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಸಿದ್ದಾಪುರ, ಸಂಪತ್ಕುಮಾರ್, ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಜಿಲ್ಲಾ ವಕ್ತಾರ ನಾಗರಾಜ್ಬೇದ್ರೆ, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ಲೋಕೇಶ್, ಕಿರಣ್ ಪಾಲ್ಗೊಂಡಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
