
CHITRADURGA NEWS | 03 FEBRUARY 2025
ಚಿತ್ರದುರ್ಗ: ಭಾರತೀಯ ಸೇನೆಯಲ್ಲಿ 22 ವರ್ಷಗಳ ಕಾಲ ದೇಶದ ವಿವಿಧ ರಾಜ್ಯಗಳಲ್ಲಿ ಮತ್ತು ಭಾರತದ ಗಡಿಭಾಗಗಳಲ್ಲಿ ಸೇವೆ ಸಲ್ಲಿಸಿ ಸ್ವಗ್ರಾಮವಾದ ಕುಂಚಗನಾಳ್ ಗ್ರಾಮಕ್ಕೆ ಆಗಮಿಸಿದ ಎಸ್.ಮಲ್ಲಿಕಾರ್ಜುನ್ ಮತ್ತು ವೇಣುಗೋಪಾಲ್ ಅವರಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು.
Also Read: ರೆಡ್ಡಿ ಜನಸಂಘದ ವ್ಯವಸ್ಥಾಪಕ ಜಿ.ಎನ್.ಹನುಮಂತರೆಡ್ಡಿ ಇನ್ನಿಲ್ಲ

ಚಿತ್ರದುರ್ಗ ನಗರದ ರಾಜ ಬೀದಿಗಳಲ್ಲಿ ವಾದ್ಯಗೋಷ್ಟಿಯೊಂದಿಗೆ ಮೆರವಣಿಗೆ ಮಾಡಿ, ಅಂಬೇಡ್ಕರ್, ಮದಕರಿ ನಾಯಕ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕುಂಚಿಗನಾಳು ಗ್ರಾಮದ ಉಪನ್ಯಾಸಕ ಎಸ್.ಲಕ್ಷೀಕಾಂತ್, ವಕೀಲರಾದ ಅಶೋಕ್ ಕುಮಾರ್ ಸಿರಿವೆಲ್ಲಪ್ಪ, ತಮ್ಮಣ್ಣ, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಕುಟುಂಬ ವರ್ಗದವರ, ಗ್ರಾಮಸ್ಥರು, ಭಾರತೀಯ ನಿವೃತ್ತ ಅರೇ ಸೇನಾ ಸೈನಿಕರ ಸಂಘ ಅಧ್ಯಕ್ಷರು, ಕಾರ್ಯದರ್ಶಿಗಳು ಪ್ರವಾಸಿ ಮಂದಿರದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
