CHITRADURGA NEWS | 27 APRIL 2024
ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯಲ್ಲಿ ಏ.28 ರಂದು ಶ್ರೀ ಶಿವಕುಮಾರ ಸ್ವಾಮೀಜಿ ರಥೋತ್ಸವ ನಡೆಯಲಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಶಿವಕುಮಾರ ಸ್ವಾಮೀಜಿ ರಥೋತ್ಸವ ಸಮಿತಿಯವರು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ರಥೋತ್ಸವ ನಡೆಸಲು ಸಿದ್ದತೆ ನಡೆಸಿದ್ದಾರೆ.
ಅಂದು ಮಧ್ಯಾಹ್ನ 4 ಗಂಟೆಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಸಂಜೆ 5.30ಕ್ಕೆ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಮಾಜಿ ಶಾಸಕ ಪಿ.ರಮೇಶ್ ಗುರುವಂದನಾ ನುಡಿಗಳನ್ನಾಡಲಿದ್ದಾರೆ.
ಕ್ಲಿಕ್ ಮಾಡಿ ಓದಿ: ಯರೇಹಳ್ಳಿಯಲ್ಲಿ ಚಲಾವಣೆಯಾಗಿದ್ದು 24 ಮತಗಳು ಮಾತ್ರ..!
ಸಾಣೇಹಳ್ಳಿ ಪುಟ್ಟ ಗ್ರಾಮವಾದರೂ ಇಲ್ಲಿ ವರ್ಷದುದ್ದಕ್ಕೂ ಸಾಹಿತ್ಯ, ಸಂಗೀತ, ಕಲೆ, ಕೃಷಿ, ಧರ್ಮಕ್ಕೆ ಸಂಬಂಧಿಸಿದ ಚಟುವಟಿಕೆಗಳು ನಡೆಯುತ್ತಿರುತ್ತವೆ. ಸಾಣೇಹಳ್ಳಿಗೆ ಒಂದು ಘನತೆ ಬರುವಂತೆ ಮಾಡಿದವರು ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ. ಅವರು 1977ರಲ್ಲಿ ಸಾಣೇಹಳ್ಳಿ ಮಠಕ್ಕೆ ಶ್ರೀ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮೀಜಿ ಅವರನ್ನು ಪಟ್ಟಾಧ್ಯಕ್ಷರನ್ನಾಗಿ ಮಾಡಿದರು.
ಕುಗ್ರಾಮವಾಗಿ, ಅನಾಮಧೇಯ ಹಳ್ಳಿಯಾಗಿದ್ದ ಸಾಣೇಹಳ್ಳಿ ಅಂದಿನಿಂದಲೇ ಚೈತನ್ಯ ಪಡೆದುಕೊಂಡು ಸಾಂಸ್ಕೃತಿಕ ಹಳ್ಳಿಯಾಗಿ ಹೆಸರುವಾಸಿಯಾಗಿದೆ. ತಮ್ಮ ಬದುಕಿಗೆ ಬೆಳಕು ನೀಡಿದ ಗುರುವಿನ ಹೆಸರಿನಲ್ಲಿ ರಥೋತ್ಸವ ಮಾಡಬೇಕು ಎನ್ನುವ ಆಶಯವನ್ನು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಗ್ರಾಮಸ್ಥರ ಮುಂದೆ ವ್ಯಕ್ತಪಡಿಸಿದರು. ಆಗ ರೋಗಿ ಬಯಸಿದ್ದು ಹಾಲು ಅನ್ನ, ವೈದ್ಯ ಹೇಳಿದ್ದೂ ಹಾಲು ಅನ್ನ ಎನ್ನುವಂತಾಯ್ತು. ಅವರ ಆಶಯವನ್ನು ಗ್ರಾಮಸ್ಥರು ನೆರವೇರಿಸಿದರು. ಸುಂದರವಾದ ರಥ ನಿರ್ಮಾಣವಾಯ್ತು. ಅದಕ್ಕೆ ‘ಶ್ರೀ ಶಿವಕುಮಾರ ರಥ’ ಎಂದೇ ನಾಮಕರಣ ಮಾಡಲಾಗಿದೆ.
ಕ್ಲಿಕ್ ಮಾಡಿ ಓದಿ: ಚುನಾವಣೆ ದಿನ ಅಡಿಕೆ ರೇಟ್ ಎಷ್ಟಿತ್ತು ಗೊತ್ತಾ ?
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number