
CHITRADURGA NEWS | 27 FEBRUARY 2024
ಚಿತ್ರದುರ್ಗ: ಮಳೆಯ ಅಭಾವದ ಕಾರಣಕ್ಕೆ 34ನೇ ಶ್ರೀ ಸಂಗಮೇಶ್ವರ ಜಯಂತಿಯನ್ನು ಈ ಬಾರಿ ಸರಳ ಮತ್ತು ಸಾಂಕೇತಿಕವಾಗಿ ಹೊಸದುರ್ಗದ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನದ ಮಠದಲ್ಲಿ ಆಚರಿಸಲಾಗುತ್ತದೆ ಎಂದು ಕುಂಚಿಟಿಗ ಮಹಾ ಸಂಸ್ಥಾನ ಮಠದ ಶ್ರೀ ಶಾಂತವೀರ ಮಹಾ ಸ್ವಾಮೀಜಿ ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: https://chitradurganews.com/suma-of-chitradurga-selected-as-civil-judge/
ಪ್ರತಿ ವರ್ಷ ವೈಭವದಿಂದ ಸಮಾರಂಭ ನಡೆಸಲಾಗುತ್ತಿತ್ತು. ಆದರೆ ಈ ಬಾರಿ ಮಳೆಯ ಅಭಾವ ಹಾಗೂ ಅಗ್ನಿ ಅವಘಡದಲ್ಲಿ ಸಹೋದರ, ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಗಾಯಗೊಂಡಿರುವ ಕಾರಣ 34 ನೇ ಶ್ರೀ ಸಂಗಮೇಶ್ವರ ಜಯಂತಿ ಮಹೋತ್ಸವ, 44 ನೇ ಜನ್ಮ ಜನ್ಮದಿನೋತ್ಸವ, 27 ನೇ ವರ್ಷದ ದೀಕ್ಷಾಮಹೋತ್ಸವ ಹಾಗೂ 23 ನೇ ವರ್ಷದ ಪಟ್ಟಾಧಿಕಾರ ಮಹೋತ್ಸವವನ್ನು ಅತ್ಯಂತ ಸರಳವಾಗಿ ಮಠದಲ್ಲಿ ಆಚರಿಸಲಾಗುತ್ತಿದೆ.
ಮಹೋತ್ಸವದ ಅಂಗವಾಗಿ ಫೆ.28 ರಂದು ಯಾವುದೇ ಸಭಾ ಕಾರ್ಯಕ್ರಮ ಇರುವುದಿಲ್ಲ. ಭಕ್ತರು ತಮ್ಮ ಗ್ರಾಮ, ಮನೆಯಲ್ಲಿ ಶ್ರೀ ಸಂಗಮೇಶ್ವರನನ್ನು ನೆನೆದು ಭಕ್ತಿಯಿಂದ ಪೂಜೆ ಸಲ್ಲಿಸಿ ಶ್ರೀ ಗುರು-ದೇವರ ಕೃಪೆಗೆ ಪಾತ್ರರಾಗಿ ಎಂದು ಶ್ರೀ ಶಾಂತವೀರ ಮಹಾ ಸ್ವಾಮೀಜಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
