
CHITRADURGA NEWS | 11 AUGUST 2025
ಚಿತ್ರದುರ್ಗ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಬಿ.ಡಿ. ರಸ್ತೆ ಶಾಖೆಯ ಮೇಲ್ಭಾಗದಲ್ಲಿ ಚಿತ್ರದುರ್ಗ ಪ್ರಾದೇಶಿಕ ವ್ಯವಹಾರ ಕಚೇರಿಯನ್ನು ಇಂದು ಬೆಂಗಳೂರು ವೃತ್ತದ ಸಿಜಿಎಂ ಜೂಹಿ ಸ್ಮಿತಾ ಸಿನ್ಹಾ ಉದ್ಘಾಟನೆ ನೆರವೇರಿಸಿದರು.
ಇದನ್ನೂ ಓದಿ: ತಹಶೀಲ್ದಾರರು, ವಲಯ ಅರಣ್ಯಾಧಿಕಾರಿಗಳು ಜಂಟಿ ಮೋಜಿಣಿ ನಡೆಸಿ ಗಡಿ ಗುರುತಿಸಿ | ಡಿಸಿ ವೆಂಕಟೇಶ್ ಸೂಚನೆ

ಇದುವರೆಗೂ ದಾವಣಗೆರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಚೇರಿ, ದೀರ್ಘಕಾಲದ ನಿರೀಕ್ಷೆಯ ನಂತರ ಚಿತ್ರದುರ್ಗಕ್ಕೆ ಸ್ಥಳಾಂತರಗೊಂಡಿದೆ. ಗ್ರಾಹಕರಿಗೆ ಉತ್ತಮ ಹಾಗೂ ತ್ವರಿತ ಬ್ಯಾಂಕಿಂಗ್ ಸೇವೆಯನ್ನು ಒದಗಿಸಲು ನೆರವಾಗಲಿದೆ.
ಈ ಸಂದರ್ಭದಲ್ಲಿ ಸಿಜಿಎಂ ಜೂಹಿ ಸ್ಮಿತಾ ಸಿನ್ಹಾ ಅವರು ಚಿತ್ರದುರ್ಗ ಪ್ರದೇಶದ ಪ್ರಮುಖ ಗ್ರಾಹಕರನ್ನು ಭೇಟಿಯಾಗಿ, ಅಭಿನಂದನೆಯ ಸಂಕೇತವಾಗಿ ಸಸಿಗಳನ್ನು ನೀಡಿ ಗೌರವಿಸಿದರು.
ಈ ವೇಳೆ ಜಿಎಂ ನೆಟ್ವರ್ಕ್ -2 ಜಿ.ಲೇಖಾ ಮೆನನ್, ಬಳ್ಳಾರಿ ಎಒ, ಡಿಜಿಪಿ ಆಲೋಕ್ ಚಂದ್ರ
ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದ್ದರು.
ಇದನ್ನೂ ಓದಿ: ಬೇಡಿಕೆ ಈಡೇರದಿದ್ದರೆ ಶಿಕ್ಷಕರ ದಿನಾಚರಣೆ ಬಹಿಷ್ಕಾರ | ಶಿಕ್ಷಕರ ಸಂಘ
ಪ್ರಾದೇಶಿಕ ವ್ಯವಸ್ಥಾಪಕ ಗಜೇಂದ್ರ ಕುಮಾರ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
