
CHITRADURGA NEWS | 31 JULY 2024
ಚಿತ್ರದುರ್ಗ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಗೆ SCP, TSP ಹಣ ಬಳಸದಂತೆ ಸಾವಿತ್ರಿ ಬಾಪುಲೆ ಮಹಿಳಾ ಸಂಘಟನೆಯಿಂದ ಬುಧವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಕ್ಲಿಕ್ ಮಾಡಿ ಓದಿ: IAS, KAS ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ | ಅರ್ಜಿ ಆಹ್ವಾನ
1980ರಲ್ಲಿ ವಿಶೇಷ ಘಟಕ ಯೋಜನೆ (ಎಸ್ಸಿಪಿ), ಬುಡಕಟ್ಟ ಉಪ ಯೋಜನೆ (ಟಿಎಸ್ ಪಿ) ಜಾರಿಗೋಳಿಸಿದ್ದು, ಪರಿಶಿಷ್ಟ ಜಾತಿ, ಪಂಗಡದವರು ಸಾಮಾನ್ಯ ಜಾತಿಯವರಂತೆ ನಿಗಧಿತ ಸಮಯದೊಳಗೆ ಅಭಿವೃದ್ಧಿ ಆಗಬೇಕೆಂದು ರೂಪಿಸಿದ ಯೋಜನೆಯಾಗಿದೆ, ಈ ಯೋಜನೆ ಜಾರಿಯಾಗಿ ಸುಮಾರು 44 ವರ್ಷ ಕಳೆದರೂ ಪರಿಶಿಷ್ಟ ಜಾತಿ, ಪಂಗಡಗಳು ಸಾಮಾನ್ಯ ಜಾತಿಯವರಂತೆ ಯಾವುದೇ ವಿಷಯದಲ್ಲಿ ಅಭಿವೃದ್ಧಿಯಾಗಿಲ್ಲ, ಆದರೆ ಪ್ರತಿ ವರ್ಷ ಹಣ ಮಾತ್ರ ದುರ್ಬಳಕೆ ಆಗುತ್ತಿದೆ ಎಂದು ಆಗ್ರಹಿಸಿದರು.
ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರೆಂಟಿಗಳನ್ನು ಘೋಷಣೆ ಮಾಡಿದ್ದು, ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಬಳಸುತ್ತಿದೆ.
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ಬಳಸದಂತೆ ಮನವಿ ಮಾಡಿದರು.
ಕ್ಲಿಕ್ ಮಾಡಿ ಓದಿ: Jobs; ಯೋಜನಾ ಸಂಯೋಜಕರ ಹುದ್ದೆಗೆ ಅರ್ಜಿ ಅಹ್ವಾನ
ಈ ವೇಳೆ ಸಾವಿತ್ರಿ ಬಾಪುಲೆ ಮಹಿಳಾ ಸಂಘಟನೆಯ ಕಾರ್ಯದರ್ಶಿ ಡಿ. ಸುಧಾ, ಪದಾಧಿಕಾರಿಗಳಾದ ಪಿ.ಉಮಾ, ಭಾಗ್ಯಮ್ಮ, ಅನ್ನಪೂರ್ಣ, ರುದ್ರಮ್ಮ, ಕವನ ಸೇರಿದಂತೆ ಇತರರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

