By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: stroke: ಸೋಮಾರಿ‌ ಜೀವನ ಶೈಲಿ ಬದಲಾದರೆ ಸ್ಟ್ರೋಕ್ ಅಪಾಯ ಕಡಿಮೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » stroke: ಸೋಮಾರಿ‌ ಜೀವನ ಶೈಲಿ ಬದಲಾದರೆ ಸ್ಟ್ರೋಕ್ ಅಪಾಯ ಕಡಿಮೆ

ಮುಖ್ಯ ಸುದ್ದಿ

stroke: ಸೋಮಾರಿ‌ ಜೀವನ ಶೈಲಿ ಬದಲಾದರೆ ಸ್ಟ್ರೋಕ್ ಅಪಾಯ ಕಡಿಮೆ

News Desk Chitradurga News
Last updated: 29 October 2024 19:16
News Desk Chitradurga News
8 months ago
Share
ಅರೋಗ್ಯ ಇಲಾಖೆಯಿಂದ ಮಾನಸಿಕ ಆರೋಗ್ಯದ ಕುರಿತು ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ ಉದ್ಘಾಟನೆ
ಅರೋಗ್ಯ ಇಲಾಖೆಯಿಂದ ಮಾನಸಿಕ ಆರೋಗ್ಯದ ಕುರಿತು ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ ಉದ್ಘಾಟನೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 29 OCTOBER 2024

ಚಿತ್ರದುರ್ಗ: ಸೋಮಾರಿ ಜೀವನಶೈಲಿ ಬಿಟ್ಟು, ಪಾಶ್ರ್ವವಾಯುವಿನಿಂದ ರಕ್ಷಣೆ ಪಡೆಯಿರಿ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಎ.ರವೀಂದ್ರ ಹೇಳಿದರು.

ಕ್ಲಿಕ್ ಮಾಡಿ ಓದಿ: Attempted suicide: ಅಂಬೇಡ್ಕರ್ ವೃತ್ತದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ | ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ ಪೊಲೀಸರು 

ನಗರದ ಕೋಟೆ ಮುಂಭಾಗದ ಮದರ್ ತೆರೇಸಾ ಸ್ಕೂಲ್ ಆಫ್ ನರ್ಸಿಂಗ್ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಸಹಯೋಗದೊಂದಿಗೆ ವಿಶ್ವ ಸ್ಟ್ರೋಕ್(stroke) ದಿನ-2024 ಮಾನಸಿಕ ಆರೋಗ್ಯದ ಕುರಿತು ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪಾಶ್ರ್ವವಾಯುಗೆ ಅನಾರೋಗ್ಯಕರ ಆಹಾರ ಪದ್ಧತಿ, ಮದ್ಯಪಾನ, ಧೂಮಪಾನ, ಬೊಜ್ಜು ಮುಖ್ಯ ಕಾರಣಗಳಾಗಿವೆ. ಸಾರ್ವಜನಿಕರು, ಆರೋಗ್ಯ ಕಾರ್ಯಕರ್ತರು, ನರ್ಸಿಂಗ್ ವಿದ್ಯಾರ್ಥಿಗಳು ಪ್ರಾರಂಭಿಕ ಲಕ್ಷಣಗಳನ್ನು ಗುರುತಿಸಿ, ನಾಲ್ಕರಿಂದ ಐದು ಗಂಟೆಯ ಒಳಗೆ ಜಿಲ್ಲಾ ಆಸ್ಪತ್ರೆಯ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ವಿಭಾಗಕ್ಕೆ ಕರೆತಂದರೆ ಚಿಕಿತ್ಸೆ ಆರೈಕೆ ನೀಡಲಾಗುತ್ತದೆ.

ಈ ಸಮಯವನ್ನ ಗೋಲ್ಡನ್ ಅವರ್ ಎಂದು ಕರೆಯುತ್ತೇವೆ ಎಂದು ತಿಳಿಸಿದ ಅವರು, ಇದರಿಂದ ಸಂಪೂರ್ಣ ಗುಣಮುಖರಾಗಬಹುದು ಎಂದರು.

ಕ್ಲಿಕ್ ಮಾಡಿ ಓದಿ: APMC: ಚಿತ್ರದುರ್ಗ ಮಾರುಕಟ್ಟೆ ಧಾರಣೆ | ಅಕ್ಟೋಬರ್ 29 | ಇಂದಿನ ಹತ್ತಿ ರೇಟ್ 

ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆ ನರರೋಗ ತಜ್ಞ ಕಿರಣ್ ಗೌಡ ಮಾತನಾಡಿ, ಪಾಶ್ರ್ವವಾಯು ಅಥವಾ ಮೆದುಳಿನ ಆಘಾತ ಮೆದುಳಿನ ಭಾಗಕ್ಕೆ ಕಡಿಮೆ ಆಮ್ಲಜನಕ ಪೂರೈಕೆಯಿಂದಾಗಿ ಉಂಟಾಗುವ ಸ್ಥಿತಿ ಸಮತೋಲನ ಅಥವಾ ಸಮನ್ವಯದ ನಷ್ಟ ಒಂದು ಅಥವಾ ಎರಡು ಕಣ್ಣುಗಳ ದೃಷ್ಟಿ ನಷ್ಟ ಮುಖದ ಒಂದು ಬದಿಯಲ್ಲಿ ದೌರ್ಬಲ್ಯ ಕೈ ಅಥವಾ ಕಾಲಿನ ದೌರ್ಬಲ್ಯ ಅಥವಾ ಮರಗಟ್ಟುವಿಕೆಯ ಸ್ಪಷ್ಟಮಾತು ಅಥವಾ ಮಾತನಾಡಲು ತೊಂದರೆ ಈ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ರೋಗಿಯನ್ನ ನಾಲ್ಕರಿಂದ ಐದು ಗಂಟೆಯ ಒಳಗೆ ಆಸ್ಪತ್ರೆಗೆ ಕರೆತನ್ನಿ. ಚಿಕಿತ್ಸೆ ನೀಡಿ ಮುಂದೆ ಉಂಟಾಗುವಂತಹ ಅನಾಹುತ ತಪ್ಪಿಸಬಹುದು ಎಂದರು.

ಜಿಲ್ಲಾ ಮಾನಸಿಕ ರೋಗಗಳ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಜಿ.ಓ ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕ್ಲಿಕ್ ಮಾಡಿ ಓದಿ: Murder case: ಅತ್ತೆ ಮಾವನ ಕೊಲೆ ಮಾಡಿದ್ದ ಅಳಿಯನ ಬಂಧನ | ತೆಲಂಗಾಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ತಲಾಶ್..!

ಕಾರ್ಯಕ್ರಮದಲ್ಲಿ ಮದರ್ ತೆರೆಸಾ ನಸಿರ್ಂಗ್ ಕಾಲೇಜಿನ ಪ್ರಾಂಶುಪಾಲೆ ಮಂಜುಳಾ, ಪಿಡಿಒ ಸುಷ್ಮರಾಣಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ.ಮೂಗಪ್ಪ, ಬಿ ಜಾನಕಿ ಸೇರಿದಂತೆ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು, ಮತ್ತಿತರರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesDepartment of HealthKannada Latest NewsKannada NewsLazy liferiskstrokeಅಪಾಯಆರೋಗ್ಯ ಇಲಾಖೆಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಸೋಮಾರಿ‌ ಜೀವನಸ್ಟ್ರೋಕ್
Share This Article
Facebook Email Print
Previous Article ವಿಶೇಷಚೇತನರ ವಿವಾಹ | 50 ಸಾವಿರ ಪ್ರೋತ್ಸಾಹ ಧನದ ಬಾಂಡ್ ವಿತರಣೆ ವಿಶೇಷಚೇತನರ ವಿವಾಹ | 50 ಸಾವಿರ ಪ್ರೋತ್ಸಾಹ ಧನದ ಬಾಂಡ್ ವಿತರಣೆ
Next Article ದೀಪಾವಳಿ ಹಬ್ಬದ ಪ್ರಯುಕ್ತ ದೀಪ ಸಂಜೀವಿನಿ ಕಾರ್ಯಕ್ರಮ | ಡಿಸಿ ಚಾಲನೆ  Diwali festival: ದೀಪಾವಳಿ ಹಬ್ಬದ ಪ್ರಯುಕ್ತ ದೀಪ ಸಂಜೀವಿನಿ ಕಾರ್ಯಕ್ರಮ | ಡಿಸಿ ಚಾಲನೆ 
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up