ಚಿತ್ರದುರ್ಗ ನ್ಯೂಸ್.ಕಾಂ: ಹಿರಿಯ ವಕೀಲರು, ನೋಟರಿ ಹಾಗೂ ವಕೀಲರ ಸಂಘದ ಮಾಜಿ ಉಪಾಧ್ಯಕ್ಷರಾಗಿದ್ದ ಚಲ್ಮೇಶ್ ಡಿಸೆಂಬರ್ 26 ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ.
ಮೃತರು, ಪತ್ನಿ ಹಾಗೂ ನಾಲ್ವರು ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಅನಾರೋಗ್ಯದ ಕಾರಣಕ್ಕೆ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸಂಜೆ ಪಾರ್ಥಿವ ಶರೀರವನ್ನು ಚಿತ್ರದುರ್ಗದ ಅವರ ನಿವಾಸಕ್ಕೆ ತರಲಿದ್ದು, ಚಿಕ್ಕಪೇಟೆಯ ಬಸವಣ್ಣ ದೇವಸ್ಥಾನದ ಬಳಿಯಿರುವ ಮೃತರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಡಿ.27 ಬುಧವಾರ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಇದನ್ನೂ ಓದಿ: ಕೋಟೆನಾಡಿನ ಮನೆ ಮನೆಗೆ ತಲುಪಲಿದೆ ಅಯೋಧ್ಯೆಯ ಮಂತ್ರಾಕ್ಷತೆ
87 ವರ್ಷದ ಚಲ್ಮೇಶ್ ಅವರು 1973 ರಿಂದ ವಕೀಲಿ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಅವರು, ಚಿತ್ರದುರ್ಗ ಜಿಲ್ಲೆಯಲ್ಲಿ ಚಿರಪರಿಚತರಾಗಿದ್ದರು.
ನಿಧನರಾದ ಹಿರಿಯ ವಕೀಲರಾದ ಚಲ್ಮೇಶ್ ಅವರಿಗೆ ನಾಳೆ ಬೆಳಗ್ಗೆ 11 ಗಂಟೆಗೆ ವಕೀಲರ ಸಂಘದಲ್ಲಿ ಸಂತಾಪ ಸಭೆ ಹಮ್ಮಿಕೊಳ್ಳಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
