By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Court: ಕೊಲೆ ಮಾಡಿ ರುಂಡ ಹಿಡಿದುಕೊಂಡು ಹೋಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Court: ಕೊಲೆ ಮಾಡಿ ರುಂಡ ಹಿಡಿದುಕೊಂಡು ಹೋಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಕ್ರೈಂ ಸುದ್ದಿಹಿರಿಯೂರು

Court: ಕೊಲೆ ಮಾಡಿ ರುಂಡ ಹಿಡಿದುಕೊಂಡು ಹೋಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

chitradurganews.com
Last updated: 29 August 2024 19:51
chitradurganews.com
10 months ago
Share
chitradurga court
ಚಿತ್ರದುರ್ಗ ನ್ಯಾಯಾಲಯ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 29 AUGUST 2024

ಚಿತ್ರದುರ್ಗ: ಹಳೆಯ ವೈಷಮ್ಯದ ಕಾರಣಕ್ಕೆ ವ್ಯಕ್ತಿಯೊಬ್ಬರ ಕೊಲೆ ಮಾಡಿ ತಲೆಕಡಿದು, ರುಂಡ ಹಿಡಿದುಕೊಂಡು ಹೋಗಿದ್ದ ವ್ಯಕ್ತಿಗೆ ಚಿತ್ರದುರ್ಗ ನ್ಯಾಯಾಲಯ(court) ಜೀವಾವಧಿ ಶಿಕ್ಷೆ ವಿಧಿಸಿದೆ.

ಕೊಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹಿರಿಯೂರು ತಾಲೂಕು ಶ್ರವಣಗೆರೆ ಗ್ರಾಮದ ಶ್ರೀನಿವಾಸನಿಗೆ ಜೀವಾವಧಿ ಶಿಕ್ಷೆ ವಿಧಿಸಿ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಂಕರಪ್ಪ ನಿಂಬಣ್ಣ ಕಲ್ಕಣಿ ತೀರ್ಪು ನೀಡಿದ್ದಾರೆ.

ಇದನ್ನೂ ಓದಿ: ದಿನ ಭವಿಷ್ಯ | ಆಗಸ್ಟ್ 29 | ಗುರುರಾಯರ ಕೃಪೆಯೊಂದಿಗೆ ಬಗೆಹರಿಯಲಿವೆ ಧೀರ್ಘಾವಧಿ ಸಮಸ್ಯೆ

ಶ್ರವಣಗೆರೆ ಮಲ್ಲಣ್ಣ ಎಂಬುವವರ ಪುತ್ರ ರಮೇಶ ಕೊಲೆಯಾದ ವ್ಯಕ್ತಿಯಾಗಿದ್ದಾರೆ.

ಘಟನೆಯ ವಿವರ: ಬೆಂಗಳೂರಿನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ರಮೇಶ ಯುಗಾದಿ ಹಬ್ಬಕ್ಕಾಗಿ 2022 ಏಪ್ರಿಲ್ 7 ರಂದು ಸ್ವಗ್ರಾಮ ಶ್ರವಣಗೆರೆಗೆ ಬಂದಿದ್ದಾರೆ. ಅದೇ ದಿನ ಹೆಂಡತಿ ಮಕ್ಕಳು ತವರು ಮನೆಗೆ ಜಾತ್ರೆಗೆ ಹೋಗಿದ್ದಾರೆ.

ಮನೆಯಲ್ಲಿ ರಮೇಶ ಹಾಗೂ ಆತನ ತಂದೆ ಮಲ್ಲಣ್ಣ ಮಾತ್ರ ಇದ್ದರು. ರಮೇಶ ಗ್ರಾಮದಲ್ಲಿ ನಡೆಯುತ್ತಿದ್ದ ದೇವಿ ಮಹಾತ್ಮೆ ನಾಟಕದ ಪ್ರಾಕ್ಟೀಸ್ ನೋಡಿಕೊಂಡು ಬಂದು ರಾತ್ರಿ 11 ಗಂಟೆಗೆ ಮನೆಯಲ್ಲಿ ಮಲಗಿದ್ದಾರೆ. ತಂದೆ ಮಲ್ಲಣ್ಣ ಮನೆಯ ಹೊರಗೆ ಜಗುಲಿ ಮೇಲೆ ಮಲಗಿದ್ದಾರೆ.

ಇದನ್ನೂ ಓದಿ: ಗೌರಸಮುದ್ರ ಮಾರಮ್ಮನ ಹುಂಡಿಯಲ್ಲಿ 10.66 ಲಕ್ಷ | ಎಲ್ಲಿ ಜಮೆ ಆಯ್ತು ಗೊತ್ತಾ

ರಾತ್ರಿ 1.30ರ ವೇಳೆಗೆ ಜೋರಾಗಿ ಕಿರುಚಾಡಿದ ಶಬ್ದ ಬಂದಿದೆ. ಆಗ ಮನೆಯ ಒಳಗಿನಿಂದ ಸೀನ ಅಲಿಯಾಸ್ ಶ್ರೀನಿವಾಸ್ ಪ್ಲಾಸ್ಟಿಕ್ ಕವರ್‍ನಲ್ಲಿ ಏನೋ ಹಿಡಿದುಕೊಂಡು ಹೊರಗೆ ನಡೆದಿದ್ದಾನೆ. ಮಲ್ಲಣ್ಣ ಏನೋ ಸೀನಾ ಅದು ಎಂದರೂ ಮಾತನಾಡಿಲ್ಲ.

ಆತಂಕದಿಂದ ಮನೆಯ ಒಳಗೆ ಹೋಗಿ ನೋಡಿದಾಗ ಮನೆಯ ರೂಮಿನಲ್ಲಿ ಮಲಗಿದ್ದ ಮಗ ರಮೇಶನನ್ನು ಕೊಲೆ ಮಾಡಿ ಆತನ ರುಂಡವನ್ನು ಚೀಲದಲ್ಲಿ ಹಾಕಿಕೊಡು ತೆಗೆದುಕೊಂಡು ಹೋಗಿರುವುದು ಗೊತ್ತಾಗಿದೆ.

ಇದನ್ನೂ ಓದಿ: ನಿರುದ್ಯೋಗಿಗಳಿಗೆ ಶುಭ ಸುದ್ದಿ, ನೇರ ನೇಮಕಾತಿಗೆ ಸಂದರ್ಶನ

ಆರೋಪಿ ಶ್ರೀನಿವಾಸ ಈ ಹಿಂದೆಯೂ ನೀವು ನಮ್ಮ ಮನೆಗೆ ವಾಮಾಚಾರ ಮಾಡಿಸುತ್ತಿರಾ, ನಮ್ಮ ಮನೆ ಏಳಿಗೆ ಆಗುತ್ತಿಲ್ಲ ಎಂದು ರಮೇಶನ ಜೊತೆಗೆ ಆಗಾಗ ಜಗಳ ಮಾಡುತ್ತಿದ್ದನು ಎನ್ನುವುದು ತಿಳಿದು ಬಂದಿದೆ.

ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪಿಎಸ್‍ಐ ಎನ್.ಪರಶುರಾಮ್ ಆರೋಪಿಯನ್ನು ಪತ್ತೆ ಮಾಡಿದ್ದಾರೆ. ಸಿಪಿಐ ಕೆ.ಆರ್.ರಾಘವೇಂದ್ರ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:chitradurga courtChitradurga newsCourtJail SentenceKannada Latest Newslife sentenceVerdictಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗ ಕೋರ್ಟ್ಚಿತ್ರದುರ್ಗ ನ್ಯೂಸ್ಜೀವಾವಧಿ ಶಿಕ್ಷೆಜೈಲು ಶಿಕ್ಷೆತೀರ್ಪುನ್ಯಾಯಾಲಯ
Share This Article
Facebook Email Print
Previous Article ಸಿದ್ದರಾಮಯ್ಯ ವಿರುದ್ಧದ ಕುತಂತ್ರ ಖಂಡಿಸಿ ಕಮ್ಯುನಿಸ್ಟ್ ಪಕ್ಷದಿಂದ ಪ್ರತಿಭಟನೆ  Protest; ಸಿದ್ದರಾಮಯ್ಯ ವಿರುದ್ಧದ ಕುತಂತ್ರ ಖಂಡಿಸಿ ಕಮ್ಯುನಿಸ್ಟ್ ಪಕ್ಷದಿಂದ ಪ್ರತಿಭಟನೆ 
Next Article POWER: ವಿದ್ಯುತ್ ತಗುಲಿ ವ್ಯಕ್ತಿ ಸಾವು | ಮನೆಯ RCC ಕೂರಿಂಗ್ ಮಾಡುವಾಗ ಘಟನೆ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up