By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: DCC ಬ್ಯಾಂಕ್ ಚುನಾವಣೆ | ಸ್ಪರ್ಧೆ ಬಯಸಿದ್ದ ಶಾಸಕ ಟಿ.ರಘುಮೂರ್ತಿಗೆ ಹಿನ್ನಡೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » DCC ಬ್ಯಾಂಕ್ ಚುನಾವಣೆ | ಸ್ಪರ್ಧೆ ಬಯಸಿದ್ದ ಶಾಸಕ ಟಿ.ರಘುಮೂರ್ತಿಗೆ ಹಿನ್ನಡೆ

ಮುಖ್ಯ ಸುದ್ದಿ

DCC ಬ್ಯಾಂಕ್ ಚುನಾವಣೆ | ಸ್ಪರ್ಧೆ ಬಯಸಿದ್ದ ಶಾಸಕ ಟಿ.ರಘುಮೂರ್ತಿಗೆ ಹಿನ್ನಡೆ

chitradurganews.com
Last updated: 11 September 2024 20:06
chitradurganews.com
10 months ago
Share
DCC BANK
ಶಾಸಕ ಟಿ.ರಘುಮೂರ್ತಿ ನಾಮಪತ್ರ ತಿರಸ್ಕøತ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 11 SEPTEMBER 2024

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (DCC) ನಿರ್ದೇಶಕರ ಸ್ಥಾನಗಳಿಗೆ ನಾಳೆ ಸೆ.12 ರಂದು ಚುನಾವಣೆ ನಡೆಯಲಿದೆ.

ಕಡಬನಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರಿಗೆ ಹಿನ್ನಡೆಯಾಗಿದೆ.

ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಚುನಾವಣೆ ಫಿಕ್ಸ್ | ಘಟಾನುಘಟಿಗಳ ನಡುವೆ ಪೈಪೋಟಿ

DCC ಬ್ಯಾಂಕ್ ನಿಯಮಾವಳಿಗಳ ಹಿನ್ನೆಲೆಯಲ್ಲಿ ಶಾಸಕ ಟಿ.ರಘುಮೂರ್ತಿ ಅವರು ಪ್ರತಿನಿಧಿಸುವ ಕಡಬನಕಟ್ಟೆ ಸೊಸೈಟಿ ಸೇರಿದಂತೆ 200 ಸೊಸೈಟಿಗಳು ಚುನಾವಣೆಯಲ್ಲಿ ಸ್ಪರ್ಧೆ ಹಾಗೂ ಮತದಾನಕ್ಕೆ ಅನರ್ಹವಾಗಿದ್ದವು.

ಈ ಹಿನ್ನೆಲೆಯಲ್ಲಿ ಹಾಲಿ ನಿರ್ದೇಶಕರಾಗಿದ್ದರೂ, ಶಾಸಕರು ಸ್ಪರ್ಧಿಸಲು ಅವಕಾಶ ನಿರಾಕರಿಸಲಾಗಿತ್ತು. ಇದನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲಾಗಿತ್ತು.

ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಚುನಾವಣೆ ಸಚಿವ ಡಿ.ಸುಧಾಕರ್ ಸೇರಿ 6 ಮಂದಿ ಅವಿರೋಧ ಆಯ್ಕೆ

ಇಂದು ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿರುವ ನ್ಯಾಯಾಲಯ ಅನರ್ಹತೆಯನ್ನು ಎತ್ತಿ ಹಿಡಿದಿದೆ. ಇದರಿಂದಾಗಿ ಶಾಸಕ ರಘುಮೂರ್ತಿ ಅವರು ಈ ಬಾರಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸ್ಪರ್ಧೆ ಹಾಗೂ ಮತದಾನ ಮಾಡಲು ಅವಕಾಶ ಇಲ್ಲದಂತಾಗಿದೆ.

ಇದರೊಟ್ಟಿಗೆ ನ್ಯಾಯಾಲಯದ ಮೊರೆ ಹೋಗಿದ್ದ ಸುಮಾರು 15 ಜನರಿಗೆ ಇದೇ ತೀರ್ಪು ಅನ್ವಯವಾಗಿದೆ.

ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಚುನಾವಣೆ | ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ರಘುಮೂರ್ತಿ

ಡಿಸಿಸಿ ಬ್ಯಾಂಕ್ ನಿಯಮಾನುಸಾರ 5 ವರ್ಷದಲ್ಲಿ ಕನಿಷ್ಟ 2 ವರ್ಷ 10 ಲಕ್ಷದವರೆಗೆ ವಹಿವಾಟು ನಡೆಸಬೇಕು. ಕನಿಷ್ಟ 2 ಸಾಮಾನ್ಯ ಸಭೆಗೆ ಹಾಜರಾಗಬೇಕು ಎಂಬ ನಿಯಮವಿದೆ.

ಈ ನಿಯಮ ಪಾಲನೆ ಮಾಡದ ಜಿಲ್ಲೆಯ ಸುಮಾರು 200 ಸಹಕಾರ ಸಂಘಗಳನ್ನು ಮತದಾನ ಮತ್ತು ಚುನಾವಣೆ ಸ್ಪರ್ಧೆಗೆ ಅನರ್ಹಗೊಳಿಸಲಾಗಿತ್ತು. ಇದನ್ನು ಪ್ರಶ್ನಿಸಿ ಶಾಸಕ ಟಿ.ರಘುಮೂರ್ತಿ ಸೇರಿದಂತೆ ಸುಮಾರು 15 ಸದಸ್ಯರು ನ್ಯಾಯಾಲಯದ ಮೊರೆ ಹೋಗಿದ್ದರು.

ಇದನ್ನೂ ಓದಿ: ನಟಿಯರಿಗೆ ರೇಣುಕಸ್ವಾಮಿ ಅಶ್ಲೀಲ ಸಂದೇಶ | ಪ್ರತಿಕ್ರಿಯೆ ಮೂಲಕ ಗೊಂದಲಕ್ಕೆ ತೆರೆ

ಇಂದು ತೀರ್ಪು ಪ್ರಕಟವಾಗಿದ್ದು, ಟಿ.ರಘುಮೂರ್ತಿ ಚುನಾವಣೆಗೆ ಸ್ಪರ್ಧಿಸಲು ಹಾಗೂ ಮತದಾನ ಮಾಡಲು ಅನುಮತಿ ಸಿಕ್ಕಿಲ್ಲ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಟಿ.ರಘುಮೂರ್ತಿ ನ್ಯಾಯಾಲಯದ ಆದೇಶಕ್ಕೆ ತಲೆಬಾಗುತೇವೆ ಎಂದಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BankChallakereChitradurgaChitradurga newsChitradurga UpdatesDCCDCC Bank ElectionKannada Latest NewsMLA T. RaghumurthyPrimary Agriculture Farmer Cooperative Societyಕನ್ನಡ ಲೇಟೆಸ್ಟ್ ನ್ಯೂಸ್ಖಸಿಸಿ ಬ್ಯಾಂಕ್ಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಡಿಸಿಸಿ ಬ್ಯಾಂಕ್ ಚುನಾವಣೆಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಶಾಸಕ ಟಿ.ರಘುಮೂರ್ತಿ
Share This Article
Facebook Email Print
Previous Article ವಿದ್ಯಾ ವಿಕಾಸ ಶಾಲೆಯಲ್ಲಿ ECO CLUB ಉದ್ಘಾಟನೆ ವಿದ್ಯಾ ವಿಕಾಸ ಶಾಲೆಯಲ್ಲಿ ECO CLUB ಉದ್ಘಾಟನೆ
Next Article ಪದವಿ ಪೂರ್ವ ಕಾಲೇಜುಗಳ‌ ಕ್ರೀಡಾಕೂಟ | ಉಪನಿರ್ದೇಶಕ ಪುಟ್ಟಸ್ವಾಮಿ ಉದ್ಘಾಟನೆ Sports; ಪದವಿ ಪೂರ್ವ ಕಾಲೇಜುಗಳ‌ ಕ್ರೀಡಾಕೂಟ | ಉಪನಿರ್ದೇಶಕ ಪುಟ್ಟಸ್ವಾಮಿ ಉದ್ಘಾಟನೆ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up