By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಬಜರಂಗದಳ ಕಾರ್ಯಕರ್ತರಿಂದ ಸೇವಾ ಸಪ್ತಾಹ | ಉಚಿತ ಆರೋಗ್ಯ ತಪಾಸಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಬಜರಂಗದಳ ಕಾರ್ಯಕರ್ತರಿಂದ ಸೇವಾ ಸಪ್ತಾಹ | ಉಚಿತ ಆರೋಗ್ಯ ತಪಾಸಣೆ

ಮುಖ್ಯ ಸುದ್ದಿ

ಬಜರಂಗದಳ ಕಾರ್ಯಕರ್ತರಿಂದ ಸೇವಾ ಸಪ್ತಾಹ | ಉಚಿತ ಆರೋಗ್ಯ ತಪಾಸಣೆ

News Desk Chitradurga News
Last updated: 30 June 2024 19:35
News Desk Chitradurga News
12 months ago
Share
ಉಚಿತ ಆರೋಗ್ಯ ತಪಾಸಣೆ
ಉಚಿತ ಆರೋಗ್ಯ ತಪಾಸಣೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 30 JUNE 2024

ಚಿತ್ರದುರ್ಗ: ಬಜರಂಗದಳ ಸೇವಾ ಸಪ್ತಾಹದ ಅಂಗವಾಗಿ ವಿಶ್ವಹಿಂದು ಪರಿಷತ್, ಬಜರಂಗದಳದ ವತಿಯಿಂದ ನಗರದ ಜೋಗಿಮಟ್ಟಿ ರಸ್ತೆಯಲ್ಲಿರುವ ವಾಸುದೇವರೆಡ್ಡಿ ಶಾಲಾ ಆವರಣದಲ್ಲಿ ಶನಿವಾರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: ಗಾಣಿಗ ಸಮುದಾಯದ ವಧು-ವರರ ಸಮಾವೇಶ | ವ್ಯಕ್ತಿಯನ್ನು ವ್ಯಕಿತ್ವದಿಂದ ಗುರುತಿಸಿ | ಡಾ. ಬಸವಕುಮಾರ ಸ್ವಾಮೀಜಿ

ಡಾ.ಯಶಸ್ ಹೆಚ್. ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಿ ಮಾತನಾಡುತ್ತ ಆಧುನಿಕ ಜೀವನ ಶೈಲಿ ಹಾಗೂ ಬದಲಾದ ಆಹಾರ ಪದ್ದತಿಯಿಂದ ಪ್ರತಿಯೊಬ್ಬರು ಒಂದಲ್ಲ ಒಂದು ರೀತಿಯ ಕಾಯಿಲೆಗಳಿಂದ ಬಳಲುವುದು ಸಹಜ. ರಕ್ತದೊತ್ತಡ, ಸಕ್ಕರೆ ಕಾಯಿಲೆಯುಳ್ಳವರು ಆಗಿಂದಾಗ್ಗೆ ತಪಾಸಣೆ ಮಾಡಿಸಿಕೊಂಡು ಸಕಾಲಕ್ಕೆ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.

ಧೂಮಪಾನ, ಮದ್ಯಪಾನ ಇವುಗಳಿಂದ ಪ್ರತಿಯೊಬ್ಬರು ದೂರವಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಅಧಿಕ ಕೊಬ್ಬಿನಂಶವುಳ್ಳ ಆಹಾರವನ್ನು ಸೇವಿಸುವುದು ಹೃದಯಾಘಾತವನ್ನು ಆಹ್ವಾನಿಸಿದಂತೆ ಎಂದು ತಿಳಿಸಿದರು.

ಡಾ.ಹರ್ಷಿತರವರು ಆರೋಗ್ಯ ತಪಾಸಣೆ ನಡೆಸಿದರು.

ವಿಶ್ವಹಿಂದು ಪರಿಷತ್ ನಗರಾಧ್ಯಕ್ಷ ಅಶೋಕ್, ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಪ್ರಭಂಜನ್, ಜಿಲ್ಲಾ ಸಂಯೋಜಕ ಸಂದೀಪ್, ನಗರ ಕಾರ್ಯದರ್ಶಿ ರಂಗಸ್ವಾಮಿ, ನಗರ ಸಂಯೋಜಕ ಕಿಶೋರ್, ನಗರ ಸೇವಾ ಪ್ರಮುಖ್ ರಘು, ಜಿಲ್ಲಾ ಕಾರ್ಯಕಾರಿ ಸದಸ್ಯ ವಿಠಲ್, ವಿಜಯ್, ರಘು, ಬಸವರಾಜ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ಕರ್ನಾಟಕದ ರೋಹಿತ್ ಶರ್ಮಾ, ವಿರಾಟ್ ಕೋಹ್ಲಿ ಇದ್ದಂತೆ..

ಹೊಸದುರ್ಗದಲ್ಲಿ ಬಜರಂಗದಳ ಕಾರ್ಯಕರ್ತರಿಂದ ಉಚಿತ ಅರೋಗ್ಯ ತಪಾಸಣೆ :

ಹೊಸದುರ್ಗ: ದೇಶಾದ್ಯಂತ ಬಜರಂಗದಳದ ಸೇವಾ ಸಪ್ತಾಹ ನಿಮಿತ್ತ ಈ ಬಾರಿ ಉಚಿತ ಆರೋಗ್ಯ ಶಿಬಿರಗಳನ್ನು ಮಾಡಲಾಗುತ್ತಿದ್ದು, ಹೊಸದುರ್ಗ ಪ್ರಖಂಡದಿಂದ ಮುಖ್ಯ ರಸ್ತೆ ಕೆನರಾ ಬ್ಯಾಂಕ್ ಮುಂಭಾಗ ಉಚಿತ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿತ್ತು.

ಹೊಸದುರ್ಗದಲ್ಲಿ ಬಜರಂಗದಳ ಕಾರ್ಯಕರ್ತರಿಂದ ಉಚಿತ ಅರೋಗ್ಯ ತಪಾಸಣೆ
ಹೊಸದುರ್ಗದಲ್ಲಿ ಬಜರಂಗದಳ ಕಾರ್ಯಕರ್ತರಿಂದ ಉಚಿತ ಅರೋಗ್ಯ ತಪಾಸಣೆ

ಆರೋಗ್ಯ ತಪಾಸಣೆಯಲ್ಲಿ 70ಕ್ಕೂ ಹೆಚ್ಚು ರೋಗಿಗಳಿಗೆ ತಪಾಸಣೆ ಮಾಡಲಾಯಿತು. ತಪಾಸಣೆಯಲ್ಲಿ ಸಾಮಾನ್ಯ ಚಿಕಿತ್ಸೆ, ಹೃದಯ ಸಂಬಂಧಿತ ಚಿಕಿತ್ಸೆ, ಚರ್ಮರೋಗ ಚಿಕಿತ್ಸೆ ನೀಡಲಾಯಿತು.

ಡಾ.ಬ್ರಹ್ಮರಾಜ್ ಮತ್ತು ಅವರ ತಂಡ ಅರೋಗ್ಯ ತಪಾಸಣೆ ನಡೆಸಿದರು.

ಇದನ್ನೂ ಓದಿ: ಕಾಂಗ್ರೆಸ್ ಎಸ್ಟಿ ಸೆಲ್ ಅಧ್ಯಕ್ಷರಾಗಿ ಬಿ.ಮಂಜುನಾಥ್ ನೇಮಕ

ಈ ವೇಳೆ ವಿಶ್ವ ಹಿಂದೂ ಪರಿಷತ್ತಿನ ಅಧ್ಯಕ್ಷರಾದ ಶ್ರೀನಿವಾಸ್ ಮೂರ್ತಿ, ಕಾರ್ಯದರ್ಶಿ ಕುಮಾರಣ್ಣ, ಬಜರಂಗದಳ ಸಂಯೋಜಕರಾದ ಸಿದ್ದೇಶ್ ಹಾಗೂ ಸಮಾಜ ಸೇವಕರಾದ ಸದ್ಗುರು ಪ್ರದೀಪ್, ಮುಖಂಡರಾದ ಬಸವರಾಜ್, ತಾಲ್ಲೂಕು ಭಾಜಾಪ ಪ್ರಧಾನ ಕಾರ್ಯದರ್ಶಿ ಜಗದೀಶ್ ರಾಮಯ್ಯ ಸೇರಿದಂತೆ ಇತರರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:activistsBajrang DalChitradurgaChitradurga newsFreeHealthHosadurgaInspectionKannada Newsಆರೋಗ್ಯಉಚಿತಕನ್ನಡ ನ್ಯೂಸ್ಕಾರ್ಯಕರ್ತರುಚಿತ್ರದುರ್ಗಚಿತ್ರದುರ್ಗ ನ್ಯೂಸ್ತಪಾಸಣೆಬಜರಂಗದಳಹೊಸದುರ್ಗ
Share This Article
Facebook Email Print
Previous Article ಗಾಣಿಗ ಸಮುದಾಯದ ವಧು-ವರರ ಸಮಾವೇಶ ಗಾಣಿಗ ಸಮುದಾಯದ ವಧು-ವರರ ಸಮಾವೇಶ | ವ್ಯಕ್ತಿಯನ್ನು ವ್ಯಕಿತ್ವದಿಂದ ಗುರುತಿಸಿ | ಡಾ. ಬಸವಕುಮಾರ ಸ್ವಾಮೀಜಿ
Next Article arecanut price list ಅಡಿಕೆ ಧಾರಣೆ | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟಿದೆ
Leave a Comment

Leave a Reply Cancel reply

Your email address will not be published. Required fields are marked *

ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up