By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮನೆ ಮನೆ ಭೇಟಿ ಮಾಡಿದ ಕೆ.ಎಸ್‌.ನವೀನ್‌ | ಮತದಾರರ ಪಟ್ಟಿ ಪರಿಷ್ಕರಣೆಗೆ ಬಿಜೆಪಿ ಜಾಗೃತಿ
    3 hours ago
    SIR ಅಭಿಯಾನ | ಬಿಜೆಪಿಯಿಂದ ಮನೆ ಮನೆ ಭೇಟಿ
    SIR ಅಭಿಯಾನ | ಬಿಜೆಪಿಯಿಂದ ಮನೆ ಮನೆ ಭೇಟಿ 
    17 hours ago
    ಪ್ರತಿಭಾ ಪುರಸ್ಕಾರ
    ನಾಯಕ ಸಮಾಜದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ 
    17 hours ago
    ಅಭಿಮಾನಿಗಳ ಜೊತೆ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹುಟ್ಟುಹಬ್ಬ ಆಚರಣೆ
    ಅಭಿಮಾನಿಗಳ ಜೊತೆ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹುಟ್ಟುಹಬ್ಬ ಆಚರಣೆ 
    17 hours ago
    ಡಿ.ಸುಧಾಕರ್ ನುಡಿ ನಮನ ಕಾರ್ಯಕ್ರಮ
    ಹಿರಿಯೂರಿನಲ್ಲಿ ಡಿ.ಸುಧಾಕರ್ ನುಡಿ ನಮನ | ಸಿಎಂ ಡಿಕೆಶಿ, ಸಿದ್ದರಾಮಯ್ಯ ಸೇರಿ ಗಣ್ಯರು ಭಾಗೀ 
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    5 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 27 | ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರದ ಪ್ರಯಾಣದ ಸೂಚನೆ
    4 hours ago
    today bhavishya
    ದಿನ ಭವಿಷ್ಯ | ಜುಲೈ 26 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    1 day ago
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    2 days ago
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    3 days ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 days ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    1 week ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    1 week ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    lose weight eat potatoes
    ತೂಕ ಇಳಿಸಲು ಬಯಸುವವರು ಆಲೂಗಡ್ಡೆ ತಿನ್ನಬಹುದೇ?
    3 hours ago
    Skin and hair
    ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸಗಳನ್ನು ಮಾಡಿದರೆ, ನಿಮ್ಮ ಚರ್ಮ ಮತ್ತು ಕೂದಲು ಎರಡೂ ಆರೋಗ್ಯಕರವಾಗಿರುತ್ತದೆಯಂತೆ
    4 hours ago
    Sprouted beans
    ಮೊಳಕೆ ಕಾಳುಗಳಿಗೆ ಉಪ್ಪು ಮತ್ತು ನಿಂಬೆ ಬೆರೆಸಿ ತಿನ್ನುವುದು ಒಳ್ಳೆಯದೇ?
    1 day ago
    damaged skin after waxing
    ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
    2 days ago
    Phyllanthus amarus
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    2 days ago
Reading: murugha math; ಶರಣ ಸಂಸ್ಕೃತಿ ಉತ್ಸವ | ಅ.5 ರಿಂದ ವಿದ್ಯುಕ್ತ ಚಾಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

murugha math; ಶರಣ ಸಂಸ್ಕೃತಿ ಉತ್ಸವ | ಅ.5 ರಿಂದ ವಿದ್ಯುಕ್ತ ಚಾಲನೆ

News Desk Chitradurga News
Last updated: 14 September 2024 16:34
News Desk Chitradurga News
2 years ago
Share
ಶ್ರೀ ಜಯದೇವ ಸ್ವಾಮಿಗಳ ಜಯಂತ್ಯುತ್ಸವ ಹಾಗು ಶರಣ ಸಂಸ್ಕೃತಿಯ ಭಿತ್ತಿಚಿತ್ರ ಬಿಡುಗಡೆ
ಶ್ರೀ ಜಯದೇವ ಸ್ವಾಮಿಗಳ ಜಯಂತ್ಯುತ್ಸವ ಹಾಗು ಶರಣ ಸಂಸ್ಕೃತಿಯ ಭಿತ್ತಿಚಿತ್ರ ಬಿಡುಗಡೆ
SHARE

CHITRADURGA NEWS | 14 SEPTEMBER 2024

ಚಿತ್ರದುರ್ಗ: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ(murugha math)ದಲ್ಲಿ ಶನಿವಾರ ಶ್ರೀ ಜಗದ್ಗುರು ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150ನೇ ಜಯಂತ್ಯುತ್ಸವ ಹಾಗು ಶರಣ ಸಂಸ್ಕೃತಿ(Sharan Culture Festival)-2024 ಕಾರ್ಯಕ್ರಮದ ಗೋಡೆ ಭಿತ್ತಿಚಿತ್ರ, ಶ್ರೀ ಜಯದೇವ ಶ್ರೀಗಳ ಕುರಿತ ಕಿರುಹೊತ್ತಿಗೆ ಹಾಗೂ ವಿವಿಧ ಕಾರ್ಯಕ್ರಮಗಳ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

ಕ್ಲಿಕ್ ಮಾಡಿ ಓದಿ: Power cut: ವಾರಾಂತ್ಯಕ್ಕೆ ಪವರ್ ಶಾಕ್ | ಎರಡು ದಿನ ವಿದ್ಯುತ್ ಸ್ಥಗಿತ

ಜಯದೇವ ಶ್ರೀಗಳ ಕಿರುಹೊತ್ತಿಗೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅಥಣ ಗಚ್ಚಿನಮಠದ ಶ್ರೀ ಶಿವಬಸವ ಸ್ವಾಮೀಜಿ,

ಜಯದೇವ ಜಗದ್ಗುರುಗಳೆಂದರೆ ನಡೆದಾಡುವ ಸಜ್ಜನಿಕೆ ಅವರದು. ನಾಡಿನಲ್ಲಿ ಜಯದೇವ ಶ್ರೀಗಳು ಬರದೇ ಹೋಗಿದ್ದರೆ ಕರ್ನಾಟಕ ಸಾಂಸ್ಕೃತಿಕವಾಗಿ ಬಡವಾಗುತ್ತಿತ್ತು. ನಾಡಿನ ಧಾರ್ಮಿಕ ಮುಖಂಡರುಗಳಿಗೆ ಶ್ರೀಗಳು ರಥಬೀದಿ ಇದ್ದಂತೆ. ಅವರದು ಸುವರ್ಣಯುಗ. ಅಂತಹ ಪ್ರಾತಃಸ್ಮರಣೆಯ ಮಹಾನ್ ಚೇತನ ಜಯದೇವ ಶ್ರೀಗಳ 150ನೇ ಜಯಂತ್ಯುತ್ಸವ ಆಚರಣೆ ಒದಗಿಬಂದಿರುವುದು ನಮ್ಮ ಭಾಗ್ಯವೇ ಸರಿ ಎಂದರು.

ಗೋಡೆ ಬಿತ್ತಿಚಿತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದ ಹೆಬ್ಬಾಳು ವಿರಕ್ತಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ, ಶ್ರೀ ಜಯದೇವ ಜಗದ್ಗುರುಗಳು 1903ರಲ್ಲಿ ಶ್ರೀಮಠದ ಪೀಠಕ್ಕೆ ಬಂದರು. ಅವರದು ಆದರ್ಶದ ಬದುಕು. ಅವರ ಚಿಂತನೆಗಳು ಜನರಿಗೆ ದಾರಿಯನ್ನು ತೋರಿಸುತ್ತಿವೆ. ಜಯದೇವ ಜಗದ್ಗುರುಗಳ ಬೆಳ್ಳಿಮೂರ್ತಿಯನ್ನು ಪಲ್ಲಕ್ಕಿಯಲ್ಲಿಟ್ಟು ಮೆರವಣ ಗೆ ಮಾಡಲಾಗುತ್ತದೆ. ಶ್ರೀಮಠದ ವೈಭವವನ್ನು ನಾವು ಬೆಳಗಿಸಬೇಕಿದೆ. ಆದರ್ಶ ತತ್ತ್ವ ಸಿದ್ಧಾಂತಗಳನ್ನು ನಾಡಿನಾದ್ಯಂತ ಪಸರಿಸುವ ಕಾರ್ಯ ಆಗಬೇಕಿದೆ ಎಂದು ನುಡಿದರು.

ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮೀಜಿ ಕಾರ್ಯಕ್ರಮದ ಕರಪತ್ರವನ್ನು, ಆರೋಗ್ಯ ಮೇಳ ಮತ್ತು ಯೋಗ ಕಾರ್ಯಕ್ರಮದ ಕರಪತ್ರವನ್ನು ಕೊಲ್ಲಾಪುರದ ಶಿವಾನಂದ ಸ್ವಾಮಿಗಳು, ಕೆಇಬಿ ಷಣ್ಮುಖಪ್ಪ, ಆಡಳಿತ ಮಂಡಳಿ ಸದಸ್ಯ ಎಸ್.ಎನ್. ಚಂದ್ರಶೇಖರ್ ಕಿರುಹೊತ್ತಿಗೆಯನ್ನು ಬಿಡುಗಡೆಗೊಳಿಸಿದರು.

ಕ್ಲಿಕ್ ಮಾಡಿ ಓದಿ: POCSO case: ಪೋಕ್ಸೊ ಪ್ರಕರಣ | ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ಅರ್ಜಿ ವಜಾ

ಶ್ರೀಮಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ.ಕಳಸದ ಅವರು ಮಾತನಾಡಿ, ಜಯದೇವ ಜಗದ್ಗುರುಗಳ ಹುಟ್ಟೂರಾದ ಬಿನ್ನಾಳದಲ್ಲಿ ಶಿಥಿಲಾವಸ್ಥೆಯಲ್ಲಿರುವ ಪೂಜ್ಯರು ಹುಟ್ಟಿದ ಮನೆಯ ಜೀರ್ಣೋದ್ಧಾರ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಉತ್ಸವದ ಸಂಪೂರ್ಣ ವಿವರವನ್ನು ನೀಡಿದರು.

ವರ್ಷ, ವರ್ಷಕ್ಕೂ ವೈವಿಧ್ಯತೆಯನ್ನು ಮುಡಿಗೇರಿಸಿಕೊಂಡು, ವ್ಯಾಪ್ತಿ ವಿಸ್ತಾರಗಳನ್ನು ಹೆಚ್ಚಿಸಿಕೊಳ್ಳುತ್ತಾ, ಜನಮಾನಸಕ್ಕೆ ಶಿಕ್ಷಣ, ಮನರಂಜನೆ ಮತ್ತು ಧಾರ್ಮಿಕ ಮೌಲ್ಯಗಳನ್ನು ತಲುಪಿಸುತ್ತಾ ಬರುತ್ತಿದ್ದು, ಈ ವರ್ಷವೂ ಅದನ್ನು ಇನ್ನಷ್ಟು ಉತ್ತಮವಾಗಿ ನೆರವೇರಿಸಲು ಶ್ರೀಮಠದ `ಶರಣ ಸಂಸ್ಕೃತಿ ಉತ್ಸವ’ ಕಾರ್ಯಕಾರಿ ಸಮಿತಿ ನಿರ್ಧರಿಸಿದ್ದು, ಇದಕ್ಕೊಂದು ಮಹತ್ವದ ಕಾರಣವೂ ಇದ್ದು, ಶ್ರೀಮಠದ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡಬಹುದಾದಂತಹ ಕೆಲಸ, ಕಾರ್ಯಗಳನ್ನು ನಿರ್ವಹಿಸಿದ 24ನೇ ಪೀಠಾಧಿಪತಿಗಳಾದ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150ನೇ ಜಯಂತ್ಯುತ್ಸವ ಆಚರಣೆ ಅವಕಾಶ ಒದಗಿ ಬಂದಿದೆ ಎಂದರು.

ಪೂಜ್ಯರು ತಮ್ಮ ಅವಧಿಯಲ್ಲಿ ಸಮಾಜದಲ್ಲಿದ್ದ ಬಡತನ, ಶೋಷಣೆ ಇವುಗಳನ್ನು ನೋಡಿ, ಇದಕ್ಕೆ ಪರಿಹಾರ ಎಂದರೆ `ಶಿಕ್ಷಣ’ ಎಂಬುದನ್ನು ಅರಿತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯ ಮತ್ತು ಹೊರರಾಜ್ಯಗಳ ನಗರಪ್ರದೇಶಗಳಲ್ಲಿ ಜಯದೇವ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿದ ಕೀರ್ತಿ ಶ್ರೀಗಳಿಗೆ ಸಲ್ಲುತ್ತದೆ. ಶ್ರೀಗಳು ಕರ್ನಾಟಕ ಏಕೀಕರಣ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿ ನಾಡನ್ನು ಕಟ್ಟುವ ಕಾರ್ಯದಲ್ಲಿ ಶ್ರಮಿಸಿದ್ದಾರೆ. ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಇವರ ಜನಪರ ಕಾಳಜಿಯ ಕೊಡುಗೆಯಾಗಿದೆ ಎಂದು ತಿಳಿಸಿದರು.

ಪೂಜ್ಯರ ಜನ್ಮ ಶತಮಾನೋತ್ಸವವನ್ನು 1975ರಲ್ಲಿ ಚಿತ್ರದುರ್ಗ-ದಾವಣಗೆರೆಯಲ್ಲಿ ಅದ್ದೂರಿಯಾಗಿ ಆಚರಿಸಲಾಗಿತ್ತು. ಆ ಕಾರ್ಯಕ್ರಮಕ್ಕೆ ಅಂದಿನ ಪ್ರಧಾನಮಂತ್ರಿಗಳಾದ ಶ್ರೀ ಮೊರಾರ್ಜಿ ದೇಸಾಯಿಯವರು ಭಾಗವಹಿಸಿದ್ದು, ವಿಶೇಷವಾಗಿರುತ್ತದೆ. ಈ ವರ್ಷ ಶರಣಸಂಸ್ಕೃತಿ ಉತ್ಸವದ ಸಂದರ್ಭದಲ್ಲಿ ಇಂತಹ ಮಹಾನ್ ಚೇತನ, ಪುಣ್ಯ ಪುರುಷರ ನೂರೈವತ್ತನೇ ಜಯಂತ್ಯುತ್ಸವ ಆಚರಿಸುವ ಸೌಭಾಗ್ಯ ದೊರಕಿರುವುದು ನಮ್ಮಗಳ ಭಾಗ್ಯ ವಿಶೇಷ ಎಂದು ಭಾವಿಸಲಾಗಿದೆ ಎಂದು ಹೇಳಿದರು.

ಪೂಜ್ಯರು ಗುರುವಾಗುವ ಬಗೆಯಿಂದ ಮೊದಲುಗೊಂಡು ಲೋಕ ಸುತ್ತಿ ಮಠ ಕಟ್ಟುವ ಮತ್ತು ಮಠ ಕಟ್ಟಿ ಶುದ್ಧ ಸಮಾಜ ಕಟ್ಟುವ ಕೆಲಸಕ್ಕೆ ಅವರದೊಂದು ಸಿದ್ಧ ಮಾದರಿ. ವಿರಾಗಿಯಾಗಿ ಪಡೆದದ್ದನ್ನು ಸಮಾಜೋಪಯೋಗಿಯಾಗಿ ಬಳಸುವವರಿಗೆ ಪ್ರಜ್ಞಾ ಪ್ರೇರಣೆಯಾಗಿದ್ದಾರೆ.

ಕ್ಲಿಕ್ ಮಾಡಿ ಓದಿ: KPSC | ಇಂದು,ನಾಳೆ ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆ ಮುಂದೂಡಿಕೆ

ಹಳೆಯ ವೃಕ್ಷದ ಬೇರುಗಳಿಗೆ ಹೊಸ ಆಶಯಗಳ ನೀರೆರೆಯು ಮೂಲಕ ವರ್ತಮಾನದ ಬದುಕನ್ನು ಇನ್ನಷ್ಟು ಸುಂದರವಾಗಿ ಕಟ್ಟಿಕೊಳ್ಳಬಹುದೆಂಬ ಆಶಯದೊಂದಿಗೆ ಶ್ರೀ ಜಗದ್ಗುರು ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150ನೇ ಜಯಂತ್ಯುತ್ಸವವನ್ನು ಪ್ರಧಾನವಾಗಿರಿಸಿಕೊಂಡು ಶರಣಸಂಸ್ಕೃತಿ ಉತ್ಸವ-2024ನ್ನು 5-10-2024 ರಿಂದ 13-10-2024ರವರೆಗೆ ವಿವಿಧ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ‌ ಎಂದರು.

25-09-2024 ರಿಂದ 04-10-2024 ರವರೆಗೆ ಶರಣಸಂಸ್ಕೃತಿ ಉತ್ಸವ ಪೂರ್ವಭಾವಿಯಾಗಿ ಖ್ಯಾತ ಯೋಗ ಗುರು ಶ್ರೀ ಚೆನ್ನಬಸವಣ್ಣನವರು ಅವರಿಂದ ಉತ್ತಮ ಆರೋಗ್ಯಕ್ಕಾಗಿ ಯೋಗ ಮತ್ತು ಶಿವಯೋಗವನ್ನು ಏರ್ಪಡಿಸಲಾಗಿದೆ. ಚಿತ್ರದುರ್ಗ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಹೊನಲು-ಬೆಳಕಿನ ಜಯದೇವ ಕಪ್ ಕ್ರೀಡಾಕೂಟಕ್ಕೆ ಅಕ್ಟೋಬರ್ 1ರಂದು ಮಂಗಳವಾರ ಮುಂಜಾನೆ ಶ್ರೀಮಠದಿಂದ ಬೈಕ್ ರ‍್ಯಾಲಿಯೊಂದಿಗೆ ವರ್ಣರಂಜಿತ ವಿದ್ಯುಕ್ತ ಚಾಲನೆ ನೀಡಲಾಗುವುದು.

ಜಾಥಾವು ಕನಕ ವೃತ್ತದಿಂದ ಪ್ರಾರಂಭವಾಗಿ ಬುರುಜನಹಟ್ಟಿ ವೃತ್ತ, ಚಿಕ್ಕಪೇಟೆ, ದೊಡ್ಡಪೇಟೆ, ರಂಗಯ್ಯನಬಾಗಿಲು, ಮದಕರಿ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಪ್ರಧಾನ ಅಂಚೆ ಕಛೇರಿ, ಕೆ.ಎಸ್.ಆರ್.ಟಿ.ಸಿ. ಬಸ್ ಸ್ಟಾಂಡ್, ಬಿ.ಡಿ. ರಸ್ತೆ, ಜೆ.ಎಂ.ಐ.ಟಿ. ವೃತ್ತದಿಂದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಕೊನೆಗೊಳ್ಳಲಿದೆ.

ಚಿತ್ರದುರ್ಗ ಜಿಲ್ಲೆಯ ಯುವಕ್ರೀಡಾ ಪ್ರತಿಭಾ ಶೋಧ ಹಾಗೂ ಜಿಲ್ಲೆಯ ಕ್ರೀಡಾಲೋಕವನ್ನು ವಿಸ್ತರಿಸುವ ಮತ್ತು ಉತ್ತೇಜಿಸುವ ಆಶಯದೊಂದಿಗೆ ನಡೆಯುವ ಈ ಕ್ರೀಡಾಕೂಟವು ಅಕ್ಟೋಬರ್ 1 ರಿಂದ 7 ರವರೆಗೆ ನಡೆಯಲಿದ್ದು, ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 17ವರ್ಷದೊಳಗಿನ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಕಬಡ್ಡಿ, ಖೋಖೋ, ಹ್ಯಾಂಡ್‌ಬಾಲ್, ಕ್ರಿಕೆಟ್, ವಾಲಿಬಾಲ್ ಕ್ರೀಡೆಗಳು ಹಾಗೂ ಮಹಿಳೆಯರಿಗಾಗಿ ಹಗ್ಗ-ಜಗ್ಗಾಟ, ಮ್ಯೂಜಿಕಲ್ ಚೇರ್, ಮಡಿಕೆ ಹೊಡೆಯುವುದು, ಬಕೆಟ್ ಇನ್ ದ ಬಾಲ್, ಥ್ರೋಬಾಲ್, ಶರಣ-ಶರಣೆಯರ ವೇಷಭೂಷಣ ಸ್ಪರ್ಧೆಗಳು ನಡೆಯಲಿವೆ.

ದಿನಾಂಕ 5-10-2024 ರಿಂದ 13-10-2024ರವರೆಗೆ ಪ್ರತಿನಿತ್ಯ ಬೆಳಗ್ಗೆ 7.30ಕ್ಕೆ ಸಹಜ ಶಿವಯೋಗವನ್ನು ಏರ್ಪಡಿಸಲಾಗಿದೆ. ಅಕ್ಟೋಬರ್ 5,6 ಮತ್ತು 7ರಂದು ಬೆಳಗ್ಗೆ 10.30ಕ್ಕೆ ವಚನಕಮ್ಮಟ ಗೋಷ್ಠಿಗಳು ನಡೆಯಲಿದ್ದು, ನಾಡಿನ ವಿವಿಧ ಚಿಂತಕರುಗಳು ಭಾಗವಹಿಸುವರು.

ಕ್ಲಿಕ್ ಮಾಡಿ ಓದಿ: Kisan Credit Card: ಸಾಲ ಸೌಲಭ್ಯಕ್ಕೆ ರೈತರಿಂದ ಅರ್ಜಿ ಆಹ್ವಾನ | ಕಡಿಮೆ ಬಡ್ಡಿ ದರ

ದಿನಾಂಕ 5-10-2024 ರಂದು ಅಪರಾಹ್ನ 4 ಗಂಟೆಗೆ ಶ್ರೀ ಜಯದೇವ ಕಪ್ ಪಂದ್ಯಾವಳಿ ಅಂಗವಾಗಿ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನವು ನಗರದ ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾಗಿ ಬಸವಮಂಟಪ ರಸ್ತೆ, ರಂಗಯ್ಯನ ಬಾಗಿಲು, ದೊಡ್ಡಪೇಟೆ, ಚಿಕ್ಕಪೇಟೆ, ಬುರುಜನಹಟ್ಟಿ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ನೀಲಕಂಠೇಶ್ವರ ದೇವಸ್ಥಾನ, ಗಾಂಧಿ ವೃತ್ತ, ಬಿ.ಡಿ.ರಸ್ತೆ ಮೂಲಕ ಹಳೆಯ ಮಾಧ್ಯಮಿಕ ಶಾಲಾ ಆವರಣದವರೆಗೆ ನಡೆಯಲಿದೆ.

ದಿನಾಂಕ 8-10-2024ರಂದು ಕೃಷಿ ಮತ್ತು ಕೈಗಾರಿಕೆ ಮೇಳ ಮತ್ತು ಪ್ರದರ್ಶನ ಇದ್ದು, ಸಚಿವರುಗಳಾದ ಶ್ರೀ ರಾಮಲಿಂಗಾರೆಡ್ಡಿ, ಶ್ರೀ ಎನ್.ಚೆಲುವರಾಯಸ್ವಾಮಿ, ಶ್ರೀ ಶರಣಬಸಪ್ಪ ದರ್ಶನಾಪೂರ, ಶ್ರೀ ಹೆಚ್.ಕೆ. ಪಾಟೀಲ್, ಶ್ರೀ ಎಸ್.ಎಸ್. ಮಲ್ಲಿಕಾರ್ಜುನ್ ಅವರುಗಳು ಭಾಗವಹಿಸುವರು.

ದಿನಾಂಕ 8, 9, 10 ರಂದು ಪ್ರತಿದಿನ ಬೆಳಗ್ಗೆ 10.30 ಗಂಟೆಗೆ ಮತ್ತು ಸಂಜೆ 6.00 ಗಂಟೆಗೆ ಶ್ರೀ ಜಯದೇವ ಜಗದ್ಗುರುಗಳ 150ನೇ ಜಯಂತ್ಯುತ್ಸವ ನಿಮಿತ್ತ ವಿಚಾರ ಸಂಕಿರಣಗಳು ನಡೆಯಲಿದ್ದು, ತುಮಕೂರಿನ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ನಿಡಸೂಸಿಯ ಶ್ರೀ ಪಂಚಮ ಶಿವಲಿಂಗೇಶ್ವರ ಸ್ವಾಮಿಗಳು, ಗದುಗಿನ ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು, ಸಾಣೇಹಳ್ಳಿಯ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಭಾಲ್ಕಿಯ ಶ್ರೀ ಬಸವಲಿಂಗ ಪಟ್ಟದೇವರು, ಬೆಂಗಳೂರು ಬೇಲಿಮಠದ ಶ್ರೀ ಶಿವರುದ್ರ ಮಹಾಸ್ವಾಮಿಗಳು, ನಿಡುಮಾಮಿಡಿ ಮಠದ ಡಾ. ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ, ಶ್ರೀ ಜಗದೀಶ್ ಶೆಟ್ಟರ್, ಶ್ರೀ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಶ್ರೀ ವಿ. ಸೋಮಣ್ಣ ಮೊದಲಾದವರು ಪಾಲ್ಗೊಳ್ಳುವರು.

ಈ ಸಮಾರಂಭಗಳಲ್ಲಿ ಜಯದೇವ ಜಗದ್ಗುರುಗಳ ಜೀವನ ಮತ್ತು ಸಾಧನೆ, ಶೂನ್ಯಪೀಠ-ಮುರುಘಾ ಪರಂಪರೆಯಲ್ಲಿ ಜಯದೇವರು, ಜಯದೇವ ಜಗದ್ಗುರುಗಳವರ ಸಾಹಿತ್ಯ, ಸಂಸ್ಕೃತಿ ಪ್ರೀತಿ, ಜಯದೇವ ಜಗದ್ಗುರುಗಳ ಬಾಲ್ಯ ಮತ್ತು ಶಿಕ್ಷಣ, ಜಯದೇವ ಜಗದ್ಗುರುಗಳು – ಅರಮನೆ-ಗುರುಮನೆ, ಜಯದೇವ ಜಗದ್ಗುರುಗಳ ವಿದ್ವತ್ ಹಾಗೂ ಶಾಖಾಮಠಗಳು, ಜಯದೇವ ಜಗದ್ಗುರುಗಳು ಮತ್ತು ಅಡ್ಡಪಲ್ಲಕ್ಕಿ ಮತ್ತು ಜಯದೇವ ಜಗದ್ಗುರುಗಳು-ಸಮಕಾಲೀನರು ವಿಷಯ ಚಿಂತನೆಗಳು ನಡೆಯಲಿವೆ.

ದಿನಾಂಕ 8-10-2024 ರಂದು ಸಂಜೆ 6‌ ಗಂಟೆಗೆ ನಡೆಯುವ ಸಮಾರಂಭದಲ್ಲಿಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯನವರು ಶ್ರೀ ಜಯದೇವ ಜಗದ್ಗುರುಗಳವರ ಸಂAಸ್ಮರಣ ಗ್ರಂಥ ಚಿನ್ಮೂಲಾದ್ರಿ ಚಿದ್ರೂಪಿ ಸಂಪುಟವನ್ನು ಲೋಕಾರ್ಪಣೆ ಗೊಳಿಸುವರು.

ಕ್ಲಿಕ್ ಮಾಡಿ ಓದಿ: BJP protest: ರಾಹುಲ್ ಗಾಂಧಿ ‌ದೇಶದ ಜನರ ಕ್ಷಮೆ ಕೇಳಲಿ | ಬಿಜೆಪಿ ಕಾರ್ಯಕರ್ತರ ಆಗ್ರಹ

ದಿನಾಂಕ 11-10-2024ರಂದು ಬಸವಕೇಂದ್ರ ಪದಾಧಿಕಾರಿಗಳ ಸಮಾವೇಶ, ಮಹಿಳಾ ಸಮಾವೇಶಗಳು ನಡೆಯಲಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಸಚಿವೆ ಶ್ರೀಮತಿ ಲಕ್ಷ್ಮಿಹೆಬ್ಬಾಳ್ಕರ್, ದಾವಣಗೆರೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಶ್ರೀಮತಿಎಂ.ಪಿ. ಲತಾ ಮಲ್ಲಿಕಾರ್ಜುನ್, ಶ್ರೀಮತಿ ಶಶಿಕಲಾಜೊಲ್ಲೆ ಅವರುಗಳು ಭಾಗವಹಿಸುವರು.

ದಿನಾಂಕ 12 ರಂದು ಶರಣಸಂಸ್ಕೃತಿ ಉತ್ಸವ ಹಾಗೂ ಜಾನಪದ ಕಲಾಮೇಳವು ನಡೆಯಲಿದ್ದು, ಕಲಾಮೇಳವು ಶ್ರೀಮಠದಿಂದ ಹೊರಟು ರಾಷ್ಟ್ರಿಯ ಹೆದ್ದಾರಿ 4, ಬಿ.ಡಿ. ರಸ್ತೆ, ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತ, ಬಸವಮಂಟಪ ರಸ್ತೆ, ರಂಗಯ್ಯನ ಬಾಗಿಲು, ದೊಡ್ಡಪೇಟೆ ಮೂಲಕ ಮೇಲುದುರ್ಗಕ್ಕೆ ಆಗಮಿಸುವುದು. ಮೆರವಣ ಗೆಯಲ್ಲಿ ಧಾರ್ಮಿಕ, ಐತಿಹಾಸಿಕ, ಸಾಮಾಜಿಕ ಪುಣ್ಯಪುರುಷರ ಸ್ತಬ್ಧ ದೃಶ್ಯಗಳು ಹಾಗೂ ವಿವಿಧ ಜನಪದ ಕಲಾತಂಡಗಳು ಭಾಗವಹಿಸುವುವು. ಸಂಜೆ 6.30 ಗಂಟೆಗೆ ಮಕ್ಕಳ ಸಂಭ್ರಮ ಕಾರ್ಯಕ್ರಮವಿರುತ್ತದೆ.

ದಿನಾಂಕ 13 ರಂದು ಬೆಳಗ್ಗೆ ಶ್ರೀ ಮುರಿಗೆ ಶಾಂತವೀರ ಸ್ವಾಮಿಗಳವರ ಭಾವಚಿತ್ರ ಶೂನ್ಯ ಪೀಠಾರೋಹಣ, ಧರ್ಮಗುರು ಬಸವಣ್ಣನವರ ಮತ್ತು ಶೂನ್ಯಪೀಠದ ಪ್ರಥಮ ಅಧ್ಯಕ್ಷ ಅಲ್ಲಮಪ್ರಭುದೇವರ ಭಾವಚಿತ್ರ ಹಾಗೂ ಪ್ರಾಚೀನ ಹಸ್ತಪ್ರತಿಗಳ ಮೆರವಣ ಗೆ ಮತ್ತು ಶ್ರೀ ಜಯದೇವ ಜಂಗೀಕುಸ್ತಿ ಹಾಗೂ ಸಂಜೆ 6.00 ಗಂಟೆಗೆ ಸಮಾರೋಪ ಮತ್ತು ಸಂಗೀತ ಸಂಭ್ರಮ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.

ಕ್ಲಿಕ್ ಮಾಡಿ ಓದಿ: Restriction; ಸೆಪ್ಟೆಂಬರ್ 15 ರಂದು ಹೆದ್ದಾರಿಯ ಎಡ ಭಾಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ | ಯಾಕೆ ಗೊತ್ತಾ…

ಶ್ರೀಮಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಡಾ. ಬಸವಪ್ರಭು ಸ್ವಾಮಿಗಳು, ಕೆ.ಎಂ.ವೀರೇಶ್, ಟಿ.ಎಸ್.ಎನ್. ಜಯಣ್ಣ, ಕಲ್ಲೇಶಯ್ಯ, ಸುರೇಶ್‌ಬಾಬು, ಡಿ.ಎಸ್. ಮಲ್ಲಿಕಾರ್ಜುನ್, ಮಹಡಿ ಶಿವಮೂರ್ತಿ, ಹೆಚ್.ಸಿ. ನಿರಂಜನಮೂರ್ತಿ, ರುದ್ರಾಣಿ ಗಂಗಾಧರ್, ಶ್ರೀಮತಿ ದೇವಿಕುಮಾರಿ ವಿಶ್ವನಾಥ್, ಮೋಕ್ಷ ರುದ್ರಸ್ವಾಮಿ, ಲತಾ ಉಮೇಶ್, ರುದ್ರಪ್ಪ, ಸಿದ್ದೇಶ್, ಕೃಷ್ಣಪ್ಪ, ಶ್ರೀನಿವಾಸ್, ಉಮೇಶ್, ಬಸವರಾಜ ಕಟ್ಟಿ, ಎನ್. ತಿಪ್ಪಣ್ಣ, ಪಿ.ವೀರೇಂದ್ರಕುಮಾರ್, ಶಶಿಧರ ಬಾಬು, ಕಣ ವೆಮಾರಮ್ಮ ತಿಪ್ಪೇಸ್ವಾಮಿ, ವಿವಿಧ ಸಮಾಜದ ಮುಖಂಡರುಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesdrivingElectricFestivalKannada Latest NewsMurugarajendra Brihanmathsharan cultureಉತ್ಸವಕನ್ನಡ ಲೇಟೆಸ್ಟ್ ನ್ಯೂಸ್ಚಾಲನೆಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಮುರುಘರಾಜೇಂದ್ರ ಬೃಹನ್ಮಠವಿದ್ಯುಕ್ತಶರಣ ಸಂಸ್ಕೃತಿ
Share This Article
Facebook Email Print
Previous Article Power outage on May 1 Power cut: ವಾರಾಂತ್ಯಕ್ಕೆ ಪವರ್ ಶಾಕ್ | ಎರಡು ದಿನ ವಿದ್ಯುತ್ ಸ್ಥಗಿತ
Next Article ನ್ಯಾಯಾಲಯದಲ್ಲಿ ಒಂದಾದ ದಂಪತಿಗಳು Lok Adalat; ನ್ಯಾಯಾಲಯದಲ್ಲಿ ಒಂದಾದ ದಂಪತಿಗಳು | ನಾವು ಒಂದಾಗಿ ಬಾಳುತ್ತೇವೆ
Leave a Comment

Leave a Reply Cancel reply

Your email address will not be published. Required fields are marked *

ಮನೆ ಮನೆ ಭೇಟಿ ಮಾಡಿದ ಕೆ.ಎಸ್‌.ನವೀನ್‌ | ಮತದಾರರ ಪಟ್ಟಿ ಪರಿಷ್ಕರಣೆಗೆ ಬಿಜೆಪಿ ಜಾಗೃತಿ
ಮುಖ್ಯ ಸುದ್ದಿ
lose weight eat potatoes
ತೂಕ ಇಳಿಸಲು ಬಯಸುವವರು ಆಲೂಗಡ್ಡೆ ತಿನ್ನಬಹುದೇ?
Life Style
today bhavishya
ದಿನ ಭವಿಷ್ಯ | ಜುಲೈ 27 | ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರದ ಪ್ರಯಾಣದ ಸೂಚನೆ
Dina Bhavishya
Skin and hair
ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸಗಳನ್ನು ಮಾಡಿದರೆ, ನಿಮ್ಮ ಚರ್ಮ ಮತ್ತು ಕೂದಲು ಎರಡೂ ಆರೋಗ್ಯಕರವಾಗಿರುತ್ತದೆಯಂತೆ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up