By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Shivayogi Kalasad; ಮುರುಘಾಶ್ರೀ ಬೆಳ್ಳಿ ವಿಗ್ರಹ ಕಳ್ಳತನ ಪ್ರಕರಣ | ಕಾಣದ ಕೈಗಳ ಪತ್ತೆಗೆ ಸಂಪೂರ್ಣ ಸಹಕಾರ | ಆಡಳಿತಾಧಿಕಾರಿ ಶಿವಯೋಗಿ ಕಳಸದ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Shivayogi Kalasad; ಮುರುಘಾಶ್ರೀ ಬೆಳ್ಳಿ ವಿಗ್ರಹ ಕಳ್ಳತನ ಪ್ರಕರಣ | ಕಾಣದ ಕೈಗಳ ಪತ್ತೆಗೆ ಸಂಪೂರ್ಣ ಸಹಕಾರ | ಆಡಳಿತಾಧಿಕಾರಿ ಶಿವಯೋಗಿ ಕಳಸದ್

ಮುಖ್ಯ ಸುದ್ದಿ

Shivayogi Kalasad; ಮುರುಘಾಶ್ರೀ ಬೆಳ್ಳಿ ವಿಗ್ರಹ ಕಳ್ಳತನ ಪ್ರಕರಣ | ಕಾಣದ ಕೈಗಳ ಪತ್ತೆಗೆ ಸಂಪೂರ್ಣ ಸಹಕಾರ | ಆಡಳಿತಾಧಿಕಾರಿ ಶಿವಯೋಗಿ ಕಳಸದ್

chitradurganews.com
Last updated: 17 July 2024 20:35
chitradurganews.com
12 months ago
Share
Shivayogi C kalasad
ಮುರುಘಾ ಮಠ ಹಾಗೂ ಎಸ್‍ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷರಾಗಿರುವ ಶಿವಯೋಗಿ ಸಿ.ಕಳಸದ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 17 JULY 2024

ಚಿತ್ರದುರ್ಗ: ಐತಿಹಾಸಿಕ ಮುರುಘಾ ಮಠದ ರಾಜಾಂಗಣದಿಂದ ಕಾಣೆಯಾಗಿದ್ದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರ ಬೆಳ್ಳಿ ವಿಗ್ರಹ ದೂರು ಕೊಟ್ಟ ನಂತರ ಮಠದ ಆವರಣಕ್ಕೆ ಬಂದು ಬಿದ್ದಿದೆ.

ಈ ಪ್ರಕರಣ ಮಠದ ಸಮಸ್ತ ಭಕ್ತರಿಗೂ ನಿಗೂಢ ಅನ್ನಿಸುತ್ತಿದ್ದು, ಮಠದಲ್ಲಿ ಏನು ನಡೆಯುತ್ತಿದೆ ಎನ್ನುವ ಗೊಂದಲಕ್ಕೀಡಾಗಿದ್ದಾರೆ.

ಇದನ್ನೂ ಓದಿ: ಮುರುಘಾ ಮಠದಲ್ಲಿ ಕಳ್ಳರ ಕೈಚಳಕ | ಶಿವಮೂರ್ತಿ ಮುರುಘಾ ಶರಣರ ಬೆಳ್ಳಿ ಪುತ್ಥಳಿ ಕಳವು

ಸಿ.ಸಿ. ಕ್ಯಾಮರಾ ಆಫ್ ಮಾಡಿ ವಿಗ್ರಹ ಕಳ್ಳತನ ಮಾಡಿರುವುದು ಆತಂಕಕಾರಿ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ವಿಗ್ರಹ ಕಳ್ಳತನ ಮಾಡಿದವರನ್ನು ಪತ್ತೆ ಮಾಡಬೇಕು ಎನ್ನುವುದು ಭಕ್ತರ ಆಗ್ರಹವಾಗಿದೆ.

ವಿಗ್ರಹ ಕಳ್ಳತನ ಕುರಿತು ಆಡಳಿತಾಧಿಕಾರಿ ಶಿವಯೋಗಿ ಕಳಸದ್ ಮಾತು:

ಈ ನಡುವೆ, ವಿಗ್ರಹ ಕಳ್ಳತನ ಪ್ರಕರಣ ಕುರಿತು ಇದೇ ಮೊದಲ ಬಾರಿಗೆ ಮುರುಘಾ ಮಠ ಹಾಗೂ ಎಸ್‍ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷರಾಗಿರುವ ಶಿವಯೋಗಿ ಸಿ.ಕಳಸದ್ (Shivayogi Kalasad) ಸುದ್ದಿಗಾರರ ಜೊತೆಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಕಳ್ಳತನವಾಗಿದ್ದ ಮುರುಘಾ ಶರಣರ ಬೆಳ್ಳಿ ವಿಗ್ರಹ ದಿಢೀರ್ ಪ್ರತ್ಯಕ್ಷ | ಮುರುಘಾ ಮಠಕ್ಕೆ ಶ್ವಾನ ದಳ ದೌಡು

ಮಠದಲ್ಲಿ ಕಾಣೆಯಾಗಿ ಆನಂತರ ಪತ್ತೆಯಾಗಿರುವ ಮುರುಘಾ ಶ್ರೀಗಳ ಬೆಳ್ಳಿ ವಿಗ್ರಹದ ಹಿಂದಿರುವ ಕಾಣದ ಕೈಗಳನ್ನು ಪತ್ತೆ ಮಾಡಲು ನಾವು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಮುರುಘಾ ಶರಣರ ಬೆಳ್ಳಿ ವಿಗ್ರಹ
ಮುರುಘಾ ಶರಣರ ಬೆಳ್ಳಿ ವಿಗ್ರಹ

ಮಠದಲ್ಲಿ ಮತ್ತೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ನಮ್ಮೊಂದಿಗೆ ಕೈ ಜೋಡಿಸಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಮುರುಘಾ ಶ್ರೀಗಳ ಬೆಳ್ಳಿ ಪುತ್ಥಳಿ ಕಳ್ಳತನ | ದಾಖಲಾಯ್ತು ದೂರು | ದೂರು ಕೊಟ್ಟಿದ್ಯಾರು ?

ಈ ಪ್ರಕರಣದ ಕುರಿತು ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆಗೂ ಚರ್ಚಿಸಲಾಗಿದೆ. ಇದರ ಹಿಂದಿರುವ ಕಾಣದ ಕೈಗಳು ಯಾವುದು ಎಂಬುದನ್ನು ಪತ್ತೆ ಹಚ್ಚಬೇಕಿದೆ. ಶ್ರೀಮಠದ ಪರವಾಗಿ ಭಕ್ತರು ನಮ್ಮೊಂದಿಗೆ ಇದ್ದಾರೆ ಎಂದು ಹೇಳಿದರು.

ಮಠದ ಆಸ್ತಿ ರಕ್ಷಣೆಗೆ ಬದ್ಧ:

ಶ್ರೀಮಠದ ಆಸ್ತಿ ಸಂರಕ್ಷಿಸಲು ನಾವು ಬದ್ಧರಾಗಿದ್ದೇವೆ. ಕಳೆದ ಮೂರ್ನಾಲ್ಕು ತಿಂಗಳ ಅವಧಿಯಲ್ಲಿ ಸರ್ಕಾರ ಸಮಿತಿ ರಚಿಸಿ ಆದೇಶಿಸಿತ್ತು. ಅದರ ಪ್ರಕಾರ ಆಡಳಿತ ನೋಡಿಕೊಳ್ಳುತ್ತಿದ್ದು, ಶ್ರೀಮಠದ ಆಸ್ತಿ, ಶಾಖಾಮಠಗಳ ಆಸ್ತಿಗಳ ಕುರಿತು ಚರ್ಚಿಸಲಾಗಿದೆ.

ಇದನ್ನೂ ಓದಿ: ಜು.20ಕ್ಕೆ ಚಿತ್ರದುರ್ಗಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ | ಭೋವಿ ಶ್ರೀಗಳ ಧೀಕ್ಷಾ ರಜತ ಮಹೋತ್ಸವಕ್ಕೆ ಆಹ್ವಾನ

ಹಾಸನ, ಕೊಡಗು, ರಾಣೇಬೆನ್ನೂರು, ಧಾರವಾಡ, ಮಹಾರಾಷ್ಟ್ರದ ಕೊಲ್ಲಾಪುರ ಮಠದ ಬಗ್ಗೆ ಚರ್ಚಿಸಿದ್ದೇವೆ. ಹಲವಾರು ಒಳ್ಳೆಯ ಸಲಹೆಗಳು ಬಂದಿವೆ. ಶ್ರೀಮಠದ ಪರಂಪರೆಯನ್ನು ಮುಂದುವರಿಸಬೇಕಿದೆ. ವಿದ್ಯಾಪೀಠದ ವ್ಯಾಪ್ತಿಯಲ್ಲಿ ಬರುವ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದು ವಿವರಿಸಿದರು.

ಮುರುಘಾ ಮಠ
ಮುರುಘಾ ಮಠ

ಆಡಳಿತ ಮಂಡಳಿಯು ಮಠದ ಅಧಿಕೃತವಾಗಿ ಜವಾಬ್ದಾರಿ ನಿಭಾಯಿಸುತ್ತದೆ. ಇದರ ಹಿಂದೆ ಕಾಣದ ಕೈಗಳು ಏನು ಮಾಡುತ್ತಿವೆ ಎಂಬುದನ್ನು ಕಂಡು ಹಿಡಿಯಬೇಕಿದೆ. ಶ್ರೀಮಠದ ಬಗ್ಗೆ ವೈಯಕ್ತಿಕವಾಗಿ ನನಗೆ ಬಹಳ ಗೌರವವಿದೆ. ಇದರ ಆಶೀರ್ವಾದ ನನ್ನ ಮೇಲಿದೆ. ಪ್ರತಿನಿತ್ಯ ನಾವುಗಳು ಇದರ ಆಗುಹೋಗುಗಳ ಬಗ್ಗೆ ಚರ್ಚಿಸುತ್ತೇವೆ. ಅನೇಕ ಪ್ರಕರಣಗಳು ಕಾನೂನು ಅಡಿಯಲ್ಲಿವೆ. ಭಕ್ತರ ಅಪೇಕ್ಷೆಯಂತೆ ಹೆಚ್ಚು ಸಮಯ ಕಳೆಯಲು ಇಚ್ಚಿಸುತ್ತೇವೆ.

ಇದನ್ನೂ ಓದಿ: ಕುರಿ, ಮೇಕೆ ಸಾಕಾಣಿಕೆಗೆ ಅರ್ಜಿ ಅಹ್ವಾನ

ಕೊಡಗಿನಲ್ಲಿ ಸಾಕಷ್ಟು ಸಮಸ್ಯೆ ಇದೆ. ಅದನ್ನು ಬಗೆಹರಿಸುವ ಪ್ರಯತ್ನ ಮಾಡುತ್ತಿದ್ದೇವೆ. ವಿದ್ಯಾಪೀಠ, ಮಠದ ಜವಾಬ್ದಾರಿಗಳ ಬಗ್ಗೆ ವಿಶೇಷ ಆಸಕ್ತಿ ವಹಿಸಲಾಗಿದೆ. ಪ್ರತಿ 15 ದಿನಕ್ಕೊಮ್ಮೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ. ಹಾಗೂ ವಾರ್ಷಿಕ ಬಜೆಟ್‍ನ್ನು ಮಂಡಿಸುತ್ತೇವೆ ಎಂದರು.

ಈ ವೇಳೆ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಎಸ್.ಎನ್. ಚಂದ್ರಶೇಖರ್, ವಕೀಲರಾದ ಉಮೇಶ್ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsDr. Basavakumar SwamijiKannada Latest NewsMuruga MathShivayogi KalasadSilver IdolTheft Caseಕನ್ನಡ ಲೇಟೆಸ್ಟ್ ನ್ಯೂಸ್ಕಳ್ಳತನ ಪ್ರಕರಣಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ಬಸವಕುಮಾರ ಸ್ವಾಮೀಜಿಬೆಳ್ಳಿ ವಿಗ್ರಹಮುರುಘಾ ಮಠಶಿವಯೋಗಿ ಕಳಸದ್
Share This Article
Facebook Email Print
Previous Article ಆಧಾರ್ ಕಾರ್ಡ್ ಹಿಡಿದು ಮತದಾನ ಮಾಡಿದ ವಿದ್ಯಾರ್ಥಿಗಳು ELECTION; ಶಾಲಾ‌ ಸಂಸತ್‌ ಚುನಾವಣೆ | ಆಧಾರ್ ಕಾರ್ಡ್ ಹಿಡಿದು ಮತದಾನ ಮಾಡಿದ ವಿದ್ಯಾರ್ಥಿಗಳು
Next Article ಕೋಟೆ ನಾಡಿನಲ್ಲಿ ಗಮನ ಸೆಳೆದ ಭಾವೈಕ್ಯತೆಯ ಮೊಹರಂ MUHARRAM; ಕೋಟೆ ನಾಡಿನಲ್ಲಿ ಗಮನ ಸೆಳೆದ ಭಾವೈಕ್ಯತೆಯ ಮೊಹರಂ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up