CHITRADURGA NEWS | 24 MARCH 2024
ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಎಸ್. ನೇರಲಕೆರೆಯಲ್ಲಿ ಶ್ರೀ ಲಕ್ಷ್ಮಿ ಕಟ್ಟೇರಂಗನಾಥ ಸ್ವಾಮಿ ರಥೋತ್ಸವ ವೈಭವದಿಂದ ನೆರವೇರಿತು. ಸಂಪ್ರದಾಯದಂತೆ ಪುಬ್ಬ ನಕ್ಷತ್ರದಲ್ಲಿ ಮಧ್ಯಾಹ್ನ 1.15ಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ಬಿಸಿಲನ್ನು ಲೆಕ್ಕಿಸದೇ ಸಾವಿರಾರು ಭಕ್ತರು ಉತ್ಸವದಲ್ಲಿ ಭಾಗಿಯಾಗಿದ್ದರು.
ರಥೋತ್ಸವದ ಅಂಗವಾಗಿ ಶನಿವಾರ ಬೆಳಿಗ್ಗೆ ದೇವರಿಗೆ ಸೂರ್ಯಮಂಡಲೋತ್ಸವ, ಶ್ರೀಕೃಷ್ಣ ಗಂಧೋತ್ಸವ ಹಾಗೂ ವಸಂತೋತ್ಸವ ಸೇವೆಗಳು ನಡೆದವು. ಶುಕ್ರವಾರ ರಾತ್ರಿ ಲಕ್ಷ್ಮಿ ಕಲ್ಯಾಣೋತ್ಸವ ನಡೆಯಿತು. ದೇವಾಲಯದ ಆವರಣದಲ್ಲಿ ಸಂಭ್ರಮ ಮನೆಮಾಡಿತ್ತು. ಸೋಬಾನೆ ಪದಗಳು, ವಾದ್ಯಗಳ ಸದ್ದು, ಲಕ್ಷ್ಮಿ ಹಾಗೂ ರಂಗನಾಥ ಸ್ವಾಮಿಗೆ ಮಾಡಿದ್ದ ವಿಶೇಷ ಅಲಂಕಾರ ಗಮನ ಸೆಳೆಯಿತು.
ಕ್ಲಿಕ್ ಮಾಡಿ ಓದಿ: ತುರುವನೂರು ಚೆಕ್ ಪೋಸ್ಟ್ | ದಾಖಲೆ ಇಲ್ಲದ ರೂ.1.50 ಲಕ್ಷ ಹಣ ವಶ
ಮಧ್ಯಾಹ್ನ 1 ಗಂಟೆಯ ವೇಳೆಗೆ ಲಕ್ಷ್ಮಿ ಕಟ್ಟೇರಂಗನಾಥ ಸ್ವಾಮಿ ಉತ್ಸವ ಮೂರ್ತಿಯು ರಥವನ್ನು ಪ್ರದಕ್ಷಿಣೆ ಹಾಕಿದ ನಂತರ ರಥವೇರಿ ವಿರಾಜ ಮಾನವಾಯಿತು. ಭಗೀರಥ ಗುರುಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಅವರು ರಥಕ್ಕೆ ಪೂಜೆ ನೆರವೇರಿಸಿ, ರಥೋತ್ಸವಕ್ಕೆ ಚಾಲನೆ ನೀಡಿದರು.
ಕ್ಲಿಕ್ ಮಾಡಿ ಓದಿ: ಹೊರಕೆರೆ ದೇವರಪುರದ ರಂಗಪ್ಪನ ತೇರಿಗೆ ಜನಸಾಗರ | ವಿಜೃಂಭಣೆಯ ಲಕ್ಷ್ಮಿ ನರಸಿಂಹಸ್ವಾಮಿ ರಥೋತ್ಸವ
ಶನಿವಾರ ರಾತ್ರಿ ಮಹಾರಥಾರೋಹಣ ಜರುಗಿತು. ಭಾನುವಾರ ಅಡ್ಡಪಲ್ಲಕ್ಕಿ ಉತ್ಸವ, ಮುತ್ತಿನ ಮಂಟಪೋತ್ಸವ, ಆಂದೋಳಿಕೋತ್ಸವ, ಗರುಡೋತ್ಸವ, ಪುಷ್ಪೋತ್ಸವ, ಅಶ್ವಾರೋಹಣೋತ್ಸವ, ಕನಕ ಪಲ್ಲಕ್ಕಿ ಉತ್ಸವ, ಉಯ್ಯಾಲೆ ಉತ್ಸವ ಹಾಗೂ ಶಯನೋತ್ಸವ ನಡೆಯಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number