
CHITRADURGA NEWS | 25 AUGUST 2024
ಚಿತ್ರದುರ್ಗ: ಮುರುಘಾ ಮಠ(Murugha Mutt)ದಲ್ಲಿ ಪ್ರತಿ ವರ್ಷದಂತೆ ಈ ವರ್ಷದ ಶರಣ ಸಂಸ್ಕøತಿ ಉತ್ಸವಕ್ಕೆ ದಿನಾಂಕ ನಿಗಧಿಯಾಗಿದೆ.
ಈ ವರ್ಷದ ಶರಣ ಸಂಸ್ಕøತಿ ಉತ್ಸವದ ಗೌರವಾಧ್ಯಕ್ಷರಾಗಿ ಹೆಬ್ಬಾಳು ರುದ್ರೇಶ್ವರ ವಿರಕ್ತಮಠದ ಶ್ರೀ ರುದ್ರೇಶ್ವರ ಸ್ವಾಮೀಜಿ ಹಾಗೂ ಉತ್ಸವ ಸಮಿತಿ ಅಧ್ಯಕ್ಷರಾಗಿ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಅವರನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಅಕ್ಟೋಬರ್ 5 ರಿಂದ 13 ರವರೆಗೆ ಶರಣ ಸಂಸ್ಕøತಿ ಉತ್ಸವ | ಮುರುಘಾ ಮಠದಲ್ಲಿ ನಡೆದ ಪೂರ್ವಭಾವಿ ಸಭೆ
ಶ್ರೀಮಠದಲ್ಲಿ ಜರುಗಿದ ಉತ್ಸವ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಶ್ರೀಮಠ ಮತ್ತು ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ. ಕಳಸದ ಈ ಆಯ್ಕೆಯನ್ನು ಘೋಷಣೆ ಮಾಡಿದರು.
ಗೌರವ ಉಪಾಧ್ಯಕ್ಷರಾಗಿ ರಾವಂದೂರು ಮುರುಘಾ ಮಠದ ಶ್ರೀ ಮೋಕ್ಷಪತಿ ಸ್ವಾಮೀಜಿ, ಕಾರ್ಯಾಧ್ಯಕ್ಷರಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಂಸದ ಗೋವಿಂದ ಎಂ ಕಾರಜೋಳ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ವಾರದೊಳಗೆ ಭೂ ಸ್ವಾಧೀನ ಪೂರ್ಣಗೊಳಿಸಿ | ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸೂಚನೆ
ಉತ್ಸವವು ಅರ್ಥಪೂರ್ಣವಾಗಿ ಸರಳವಾಗಿ ಆಯೋಜಿಸಲಾಗುವುದು. ಭಕ್ತರ ಸಹಕಾರ ಮುಖ್ಯ. ಶ್ರೀಮಠದ ಪರಂಪರೆಯಂತೆ ಎಲ್ಲಾ ಗೋಷ್ಠಿಗಳನ್ನು ಆಯೋಜಿಸಲಾಗುವುದು ಎಂದು ಶಿವಯೋಗಿ ಕಳಸದ್ ಹೇಳಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
