
CHITRADURGA NEWS | 15 JANUARY 2026
ಚಿತ್ರದುರ್ಗ: ಕಲ್ಯಾಣದಲ್ಲಿ ಶರಣರ ಮೇಲೆ ನಡೆದ ರಕ್ತಸಿಕ್ತ ಹಿಂಸೆಯ ನಂತರದಲ್ಲಿ ವಚನ ಸಾಹಿತ್ಯ ಮತ್ತು ಚಳವಳಿಯ ಚಲನಶೀಲತೆಯನ್ನು ಕಾಪಾಡಿದ್ದು ಸಿದ್ಧರಾಮೇಶ್ವರರು ಎಂದು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ತಿಳಿಸಿದರು.
ಇದನ್ನೂ ಓದಿ: ದಾಳಿಂಬೆ ಬೆಳೆಯಲ್ಲಿ ಯಶಸ್ಸು ಕಂಡ ಬಯಲು ಸೀಮೆ ದಂಪತಿ

ನಗರದ ಹೊರವಲಯದ ಭೋವಿ ಗುರುಪೀಠದಲ್ಲಿ ಶ್ರೀ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ಧರಾಮೇಶ್ವರರು ವಚನ ಚಳವಳಿಯ ಬಹುದೊಡ್ಡ ಶಕ್ತಿ ಎಂದರು.
ಸಿದ್ಧರಾಮೇಶ್ವರರು ಶೈವ ಪರಂಪರೆಯಲಿದ್ದಾಗ ‘ಸ್ಥಾವರದಲಿ ನಿಷ್ಠೆ, ಭೂತಂಗಳಲಿ ಅನುಕಂಪೆ, ತಾನೇ ಪರಬೊಮ್ಮ’ ಎಂಬ ಅಪರೂಪದ ತಾತ್ವಿಕ ನಿಲುವಿನವರಾಗಿದ್ದರು. ಮುಂದೆ ಪ್ರಭುವಿನ ಪ್ರಭಾವದಿಂದ ಬಸವ ಕಲ್ಯಾಣಕ್ಕೆ ಆಗಮಿಸಿ ಶರಣ ತತ್ವದ ಕಬ್ಬಿನ ರಸವುಂಡ ಆನೆಯಂತಾಗುತ್ತಾರೆ. ಅವರಿಂದ ವಚನ ಸಾಹಿತ್ಯ ಸಮೃದ್ಧವಾಗುತ್ತದೆ ಎಂದು ತಿಳಿಸಿದರು.
ಇಂದು ನಮ್ಮ ಕುಲಬಾಂಧವರೆಲ್ಲ ಸಿದ್ಧರಾಮೇಶ್ವರರನ್ನು ನಮ್ಮ ಕುಲಗುರುಗಳಾಗಿ ಆರಾಧಿಸುತ್ತಿದ್ದಾರೆ. ಆರಾಧನೆ ಕೇವಲ ಕುರುಡು ಆಚರಣೆಯಾಗಬಾರದು ಎಂಬ ಅಪೇಕ್ಷೆಯೊಂದಿಗೆ, ನಮ್ಮ ಗುರುಪೀಠದಿಂದ ಸಾಂಸ್ಕೃತಿಕವಾಗಿ ಸಿದ್ಧರಾಮೇಶ್ವರರ ಮೌಲ್ಯಗಳ ಪ್ರಚಾರವನ್ನು ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ ಎಂದು ತಿಳಿದರು.
ಇದನ್ನೂ ಓದಿ: ಭದ್ರಾ ಜಲಾಶಯ ವಿಶ್ವೇಶ್ವರ ನಿಗಮದ ವ್ಯಾಪ್ತಿಗೆ ಒಳಪಡಿಸಿ | ಹೋರಾಟ ಸಮಿತಿ
ಹೊಸದುರ್ಗ ಕುಂಚಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮೀಜಿ ಮಾತನಾಡಿ, ಸೀಮೆಯ ಮೀರಿದ ನಿಸ್ಸಿಮನು ಸಿದ್ದರಾಮಯ್ಯ ಎಂದು ಚನ್ನಬಸವಣ್ಣ ವರ್ಣಿಸುತ್ತಾರೆ. ಒಬ್ಬ ವ್ಯಕ್ತಿಯ ನಿಜವಾದ ಸಾಧನೆಯೆಂದರೆ, ತಾನು ನಿರ್ಮಿಸಿಕೊಂಡ ಎಲ್ಲೆಗಳನ್ನು ತಾನೇ ದಾಟಿ ಮುನ್ನಡೆಯುವುದು.
ಸಿದ್ಧರಾಮೇಶ್ವರರು ಕಾಯಕ ವರ್ಗದವರ ಅಸ್ಮಿತೆ. ಬದುಕಿನ ಪರಿವರ್ತನೆಗೆ ದರ್ಪಣ ಸಿದ್ಧರಾಮರ ಜೀವನ. ಮೌಢ್ಯ ಸಂಪ್ರದಾಯಗಳಿಂದ ಮೌಲ್ಯ ಸಂಪ್ರದಾಯಗಳಿಗೆ ಹಾಡಿದವರು. ಜಲಕ್ರಾಂತಿ ಮೂಲಕ ಸಕಲ ಜೀವಾತ್ಮರಿಗೆ ಲೇಸನ್ನು ಬಯಸಿದವರು. ಸ್ತ್ರೀ ಸಮಾನತೆಗೆ ಧ್ವನಿ ಎತ್ತಿದವರು. ವಚನ ಸಂರಕ್ಷಣೆಯಲ್ಲಿ ಅಗ್ರಜ ಎಂದು ವಿಶ್ಲೇಷಣೆ ಮಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ಚದುರಿದ ಭೋವಿ ಜನಾಂಗವನ್ನು ಒಗ್ಗೂಡಿಸುವಲ್ಲಿ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ಶ್ರಮ ಅಪಾರ ಎಂದು ಶಾಸಕ ಡಾ.ಎಂ. ಚಂದ್ರಪ್ಪ ಶ್ಲಾಘಿಸಿದರು.
ಇದನ್ನೂ ಓದಿ: ಪ್ರೋತ್ಸಾಹಧನ | ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ
ಸಮಾಜದ ಸಂಘಟನೆ ಮತ್ತು ಏಳಿಗೆಗಾಗಿ ಶ್ರೀಗಳು ಪಟ್ಟ ಶ್ರಮದ ಫಲವಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭೋವಿ ಸಂಘಟನೆ ಮಾಡಲು ಸಾಧ್ಯವಾಗಿದೆ. 2027 ಜನವರಿ 14ರಂದು ರಾಜ್ಯ ಮಟ್ಟದ ಬೃಹತ್ ಸಿದ್ದರಾಮೇಶ್ವರ ಜಯಂತಿಯನ್ನು ಹೊಳಲ್ಕೆರೆಯಲ್ಲಿ ನಡೆಸಲಾಗುವುದು ರಾಜ್ಯದ ಎಲ್ಲಾ ಮುಖಂಡರನ್ನು ಈ ಸಮಾವೇಶದಲ್ಲಿ ಸೇರಿಸಲಾಗುತ್ತದೆ ಎಂದು ಹೆಳಿದರು.
ಕೊರಟಗೆರೆಯ ಮಹಾಲಿಂಗ ಸ್ವಾಮೀಜಿ, ಮೇದಾರ ಗುರುಪೀಠದ ಶ್ರೀ ಕೇತೇಶ್ವರ ಸ್ವಾಮೀಜಿ, ಬಂಜಾರ ಗುರುಪೀಠದ ನಂದಮಸಂದ ಸೇವಾಲಾಲ್ ಸ್ವಾಮೀಜಿ ಮಾತನಾಡಿದರು.
ಸಮಾಜದ ಮುಖಂಡರಾದ ಹೆಚ್.ಆನಂದಪ್ಪ, ಬಂಡೆ ರುದ್ರಪ್ಪ, ಕಾಳಘಟ್ಟ ಹನುಮಂತಪ್ಪ, ಡಿ.ಸಿ.ಮೋಹನ, ಪೇಂಟ್ ತಿಮ್ಮಣ್ಣ, ಹೆಚ್. ಲಕ್ಷ್ಮಣ್, ಗೌನಹಳ್ಳಿ ಗೋವಿಂದಪ್ಪ, ಇಒ ರವಿಕುಮಾರ, ಪಿಡಿಎ ಆನಂದ, ಚಂದ್ರಶೇಖರ ಉಪಸ್ಥಿತರಿದ್ದರು.
ಇದನ್ನೂ ಓದಿ: ಪದವಿ ಅಥವಾ ಡಿಪ್ಲೊಮೊ ವಿದ್ಯಾರ್ಥಿಗಳಿಗೆ ದೀಪಿಕಾ ವಿದ್ಯಾರ್ಥಿವೇತನ | ಅರ್ಜಿ ಅಹ್ವಾನ
ಸಿದ್ದರಾಮೇಶ್ವರ ಜಯಂತಿ ನಿಮಿತ್ತ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿರವರಿಗೆ ಭೋವಿ ಸಮಾಜದ ಮುಖಂಡರು ಬಿಎಮ್ಡಬ್ಯೂ ಎಕ್ಸ7 ಕಾರನ್ನು ಉಡುಗೊರೆಯಾಗಿ ನೀಡಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
