By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಟಾರ್ಗೆಟ್ ಟೆನ್ ಥೌಸಂಡ್ ತಂಡದ ಸಿದ್ಧರಾಜು ಜೋಗಿ | ಕಾಯಕ ರತ್ನ ಪ್ರಶಸ್ತಿಗೆ ಆಯ್ಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಟಾರ್ಗೆಟ್ ಟೆನ್ ಥೌಸಂಡ್ ತಂಡದ ಸಿದ್ಧರಾಜು ಜೋಗಿ | ಕಾಯಕ ರತ್ನ ಪ್ರಶಸ್ತಿಗೆ ಆಯ್ಕೆ

ಮುಖ್ಯ ಸುದ್ದಿ

ಟಾರ್ಗೆಟ್ ಟೆನ್ ಥೌಸಂಡ್ ತಂಡದ ಸಿದ್ಧರಾಜು ಜೋಗಿ | ಕಾಯಕ ರತ್ನ ಪ್ರಶಸ್ತಿಗೆ ಆಯ್ಕೆ

News Desk Chitradurga News
Last updated: 27 April 2025 19:19
News Desk Chitradurga News
2 months ago
Share
ಸಿದ್ಧರಾಜು ಜೋಗಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 27 APRIL 2025

ಚಿತ್ರದುರ್ಗ: ಟಾರ್ಗೆಟ್‌ ಟೆನ್‌ ಥೌಸಂಡ್‌ ಹೆಸರಿನಲ್ಲಿ ತಂಡ ಕಟ್ಟಿಕೊಂಡು ಚಿತ್ರದುರ್ಗ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಟ್ಟಿರುವ ತಂಡದ ನಾಯಕ ಸಿದ್ಧರಾಜು ಜೋಗಿ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ ವತಿಯಿಂದ ಕಾಯಕರತ್ನ ಪ್ರಶಸ್ತ್ರಿಗೆ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ನಾಗರಾಜ್‌ ಸಂಗಂ ಹಾಗೂ ಕಾರ್ಯದರ್ಶಿ ಪಿ.ಲೋಕೇಶ್‌ ತಿಳಿಸಿದ್ದಾರೆ.

Also Read: ದ್ವಿತೀಯ PUC ಮರು ಮೌಲ್ಯಮಾಪನ | ಚೈತನ್ಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಜಿಲ್ಲೆಗೆ ಪ್ರಥಮ

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಟಾರ್ಗೆಟ್‌ ಟೆನ್‌ ತೌಸಂಡ್‌ ತಂಡದ ಸಿದ್ದರಾಜು ಜೋಗಿಯವರ ತಂಡ 2016ರಲ್ಲಿ ಚಿತ್ರದುರ್ಗದ ವಿವಿಧೆಡೆಗಳಲ್ಲಿ ಸಸಿಗಳನ್ನು ನಡುವ ಕಾರ್ಯಕ್ಕೆ ಮುಂದಾಗಿತ್ತು ಇದಕ್ಕೆ ನಗರದ ಜನತೆಯೂ ಸಹಾ ಸಹಕಾರವನ್ನು ನೀಡಿದ್ದರ ಫಲವಾಗಿ ಇಂದು ಸುಮಾರು ೪೦ ಸಾವಿರ ಸಸಿಗಳನ್ನು ನಗರದ ವಿವಿಧ ಬಡಾವಣೆ, ಶಾಲಾ-ಕಾಲೇಜುಗಳ ಆವರಣ, ರಸ್ತೆಗಳ ಬದಿಗಳಲ್ಲಿ, ನಡೆವುದರ ಮೂಲಕ ಅವುಗಳ ಬೆಳವಣಿಗೆಗೆ ವಾರದಲ್ಲಿ ಒಂದು ದಿನ ಇದಕ್ಕಾಗಿ ಮೀಸಲಿಟ್ಟು ಅವುಗಳನ್ನು ಬೆಳಸಿದ್ದಾರೆ.

ಇದರ ಅಂಗವಾಗಿ ಚಿತ್ರದುರ್ಗದಲ್ಲಿ ಟಾರ್ಗೆಟ್‌ 10 ಥೌಜೆಂಡ್ ಎಂಬ ಗ್ರೂಪ್ ಮಾಡಿಕೊಂಡು ಸಸಿಗಳನ್ನು ನೆಟ್ಟು ಅವುಗಳನ್ನು ಬೆಳಸುತ್ತಿದ್ದಾರೆ ಇವರ ಕಾಯಕವನ್ನು ಗುರುತಿಸಿದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ 2025ನೇ ಸಾಲಿಗೆ ಇವರನ್ನು ಕಾಯಕ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ತಿಳಿಸಿದ್ದಾರೆ.

Also Read: ಲೋಕಾಯುಕ್ತ ದೂರಿನಲ್ಲಿ ಷಡ್ಯಂತ್ರ | ದೂರು ದಾಖಲಿಸಿಕೊಳ್ಳಲು ತಿಮ್ಮರಾಜು ಪತ್ನಿ ಮನವಿ | ಇಡೀ ದಿನ ಏನೇನಾಯ್ತು ?

ಈ ಪ್ರಶಸ್ತಿ ಪ್ರಧಾನ ಸಮಾರಂಭ ಮೇ.1 ರಂದು ಬಾಗಲಕೋಟೆಯ ರಬಕವಿ ಗ್ರಾಮದಲ್ಲಿ ಬೆಳಗ್ಗೆ 11ಕ್ಕೆ ನಡೆಯಲಿದೆ.

ಈ ಹಿಂದೆ ಇದೇ ರೀತಿಯ ಪ್ರಶಸ್ತಿಗೆ ಚಿತ್ರದುರ್ಗದಿಂದ ಟೈಗರ್ ತಿಪ್ಪೇಸ್ವಾಮಿ, ಕೆ.ಎಸ್.ಆರ್.ಟಿ.ಸಿಯ ಚಾಲಕ ಶಾಂತಕುಮಾರ್ ಹಾಗೂ ಕೋಟೆ ವಾಯು ವಿಹಾರದ ಅಧ್ಯಕ್ಷರಾದ ಸತ್ಯಣ್ಣ ರವರಿಗೆ ಪ್ರಧಾನ ಮಾಡಲಾಗಿತ್ತು.

ಮೇ 1 ರಂದು ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಜಿಲ್ಲಾ ವೈಜ್ಞಾನಿಕ ಸಂಶೋಧನಾ ಪರಿಷತ್ ನ ಪದಾಧಿಕಾರಿಗಳು ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ನಾಗರಾಜ್ ಸಂಗಂ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesKannada Latest NewsKannada NewsKayakaratna PrashastriSaplingsSiddharaju Jogiಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕಾಯಕರತ್ನ ಪ್ರಶಸ್ತ್ರಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಸಿಗಳುಸಿದ್ಧರಾಜು ಜೋಗಿ
Share This Article
Facebook Email Print
Previous Article ದ್ವಿತೀಯ PUC ಮರು ಮೌಲ್ಯಮಾಪನ | ಚೈತನ್ಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಜಿಲ್ಲೆಗೆ ಪ್ರಥಮ
Next Article today bhavishya Astrology: ದಿನ ಭವಿಷ್ಯ | ಏಪ್ರಿಲ್ 28 | ದೀರ್ಘಕಾಲದ ಆರೋಗ್ಯ ಸಮಸ್ಯೆ ನಿವಾರಣೆ, ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಆರೋಗ್ಯ ಸಮಸ್ಯೆ, ಹೊಸ ವಾಹನ ಖರೀದಿ
Dina Bhavishya
ಯೋಗಶಾಸ್ತ್ರದ ನಿರಂತರ ಅನುಷ್ಠಾನದಿಂದ ಜೀವನೋತ್ಸಾಹ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಮುಖ್ಯ ಸುದ್ದಿ
ಮಾಹಿತಿ ಹಕ್ಕು ಕಾಯ್ದೆ | ಶುಲ್ಕ ಪರಿಷ್ಕರಣೆಗೆ ಪ್ರಸ್ತಾವನೆ | ಆಯುಕ್ತ ರುದ್ರಣ್ಣ ಹರ್ತಿಕೋಟೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಜೂನ್ 30ರವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up