
CHITRADURGA NEWS | 11 JULY 20-26
ಚಿತ್ರದುರ್ಗ: ಚಿತ್ರದುರ್ಗ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಆವರಣದ ಮುಂಭಾಗದಲ್ಲಿ ಶುಕ್ರವಾರ ಬಣ್ಣ ಬಣ್ಣದ ರಂಗೋಲಿ ಚಿತ್ತಾರದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಜಾಗೃತಿ ಮೂಡಿಸಲಾಯಿತು.
ಇದನ್ನೂ ಓದಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬಿಸಿಯೂಟ ತಯಾರಕರಿಂದ ಪ್ರತಿಭಟನೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ರ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಆಕರ್ಷಕ ರಂಗೋಲಿ ಸ್ಪರ್ಧೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಸ್ವ-ಸಹಾಯ ಗುಂಪಿನ ಮಹಿಳೆಯರು, ಬೂತ್ ಮಟ್ಟದ ಅಧಿಕಾರಿಗಳು ಉತ್ಸಾಹದಿಂದ ಭಾಗವಹಿಸಿ, ಎಸ್ಐಆರ್ ಕುರಿತ ಜಾಗೃತಿ ಸಂದೇಶಗಳು ರಂಗೋಲಿ ಬಣ್ಣಗಳ ಮೂಲಕ ಮೂಡಿಬಂದವು.
ಎಸ್ಐಆರ್ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಹಿಳೆಯರು ಬಿಡಿಸಿದ್ದ ಆಕರ್ಷಕ ರಂಗೋಲಿಗಳ ವೀಕ್ಷಿಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಸ್ಪರ್ಧೆಯಲ್ಲಿ ಭಾಗವಹಿಸಿದವರೆಲ್ಲರೂ ಅತ್ಯಂತ ಆಕರ್ಷಕವಾಗಿ ಮತ್ತು ಅರ್ಥಪೂರ್ಣವಾಗಿ ರಂಗೋಲಿಗಳನ್ನು ಬಿಡಿಸಿದ್ದೀರಿ. ನಿಮ್ಮೆಲ್ಲರ ಪ್ರಯತ್ನ ಮೆಚ್ಚುವಂತದ್ದು ಎಂದು ಶ್ಘಾಘಿಸಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಜೂನ್ 30 ರಿಂದ ಬಿಎಲ್ಒಗಳು ಮನೆ ಮನೆ ಭೇಟಿ ಮೂಲಕ ಗಣತಿ ನಮೂನೆಗಳ ವಿತರಣೆ ಪ್ರಾರಂಭ ಮಾಡಿದ್ದು, ಇದೇ ಜುಲೈ 30 ರವರೆಗೆ ನಡೆಯಲಿದೆ.
ಇದನ್ನೂ ಓದಿ: ನಿಮ್ಮ ಹೊಳೆಯುವ ಚರ್ಮಕ್ಕಾಗಿ ಮಾವಿನ ಸಿಪ್ಪೆಯ ಈ ಫೇಸ್ ಪ್ಯಾಕ್ಗಳನ್ನು ಹಚ್ಚಿ
ಒಂದು ವೇಳೆ ಇನ್ನು ಯಾರಾದರೂ ಗಣತಿ ನಮೂನೆ ಪಡೆದಿಲ್ಲವಾದರೆ ತಕ್ಷಣವೇ ನಿಮ್ಮ ಬಿಎಲ್ಒಗಳನ್ನು ಸಂಪರ್ಕಿಸಿ, ಗಣತಿ ನಮೂನೆಗಳನ್ನು ಪಡೆದುಕೊಂಡು ಅಗತ್ಯ ದಾಖಲೆಗಳ ಸಮೇತ ನಿಖರವಾಗಿ ಭರ್ತಿ ಮಾಡಿ, ಆದಷ್ಟು ಬೇಗ ವಾಪಸ್ ಬಿಎಲ್ಒಗಳಿಗೆ ಸಲ್ಲಿಸಬೇಕು ಎಂದು ತಿಳಿಸಿದ ಅವರು, ಮುಂಬರುವ ಚುನಾವಣೆಗಳ ಸಂದರ್ಭದಲ್ಲಿ ಮತದಾನದ ದಿನದಂದು ‘ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ’ ಎಂಬ ಗೊಂದಲ ಪರಿಸ್ಥಿತಿ ನಿರ್ಮಾಣವಾಗಬಾರದು.
ಅದಕ್ಕಾಗಿ ಈಗಲೇ ಜಾಗೃತರಾಗಿ ನಿಮ್ಮ ಗಣತಿ ನಮೂನೆಗಳನ್ನು ಭರ್ತಿ ಮಾಡಿ ಸಲ್ಲಿಸಿ, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಖಚಿತಪಡಿಸಿಕೊಳ್ಳಿ ಎಂದು ಜಿ.ಪಂ ಸಿಇಒ ಡಾ.ಎಸ್.ಆಕಾಶ್ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಜುಲೈ 16ರಂದು ಉದ್ಯೋಗ ಮೇಳ | 8ಕ್ಕೂ ಹೆಚ್ಚು ಖಾಸಗಿ ಕಂಪನಿ ಭಾಗಿ
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಸಹಾಯಕ ಯೋಜನಾಧಿಕಾರಿ ಸುಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್, ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಜಿಲ್ಲಾ ವಾಶ್ ಐಇಸಿ ಸಮಾಲೋಚಕ ಬಿ.ಸಿ.ನಾಗರಾಜ್, ನರೇಗಾ ಐಇಸಿ ಸಮಾಲೋಚಕ ರವೀಂದ್ರನಾಥ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

