CHITRADURGA NEWS | 26 JULY 2026
ಚಿತ್ರದುರ್ಗ: ರಾಜ್ಯದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಎಸ್ ಐ ಆರ್ ಗೆ ಸಂಬಂಧಪಟ್ಟಂತೆ ಬಿಜೆಪಿ ನಗರ ಘಟಕದ ವತಿಯಿಂದ 20ನೇ ವಾರ್ಡನಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಎಸ್ ಐ ಆರ್ ಅಭಿಯಾನದ ಅಂಗವಾಗಿ ಮನೆ ಮನೆ ಭೇಟಿ ಮಹಾಸಂಪರ್ಕ ಅಭಿಯಾನವನ್ನು ನಗರದ ಗೋಪಾಲಪುರ ರಸ್ತೆಯ ತಿಪ್ಪಿನಘಟ್ಟಮ್ಮ ದೇವಸ್ಥಾನದಿಂದ ಪ್ರಾರಂಭಿಸಲಾಯಿತು.
ಇದನ್ನೂ ಓದಿ: ಅಭಿಮಾನಿಗಳ ಜೊತೆ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹುಟ್ಟುಹಬ್ಬ ಆಚರಣೆ
ಈ ವೇಳೆ ಬಿ.ಎಲ್.ಎ ಹಾಗೂ ಬಿಜೆಪಿ ಉಪಾಧ್ಯಕ್ಷರಾದ ಡಾ.ಸಿದ್ದಾರ್ಥ ಗುಡಾರ್ಪಿ ಮಾತನಾಡಿ, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಕೈಬಿಟ್ಟು ಹೋಗುವ ಅಥವಾ ವೋಟ್ ಮಿಸ್ ಆಗುವ ಸಾಧ್ಯತೆಯನ್ನು ತಪ್ಪಿಸಲು ಸಾರ್ವಜನಿಕರು ಎನುಮರೇಷನ್ ಫಾರಂಗಳನ್ನು ತಕ್ಷಣ ಸಲ್ಲಿಸಿ ಈ ವಿಷಯಕ್ಕೆ ಹೆಚ್ಚಿನ ಗಮನ ನೀಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ರಾಜ್ಯದಲ್ಲಿ ಕಳೆದ 20 ದಿನಗಳಿಂದ ಚುನಾವಣಾ ಆಯೋಗ, ಸರ್ಕಾರ ಹಾಗೂ ಎಲ್ಲ ರಾಜಕೀಯ ಪಕ್ಷಗಳು ಜಂಟಿಯಾಗಿ ಮತದಾರರ ಪಟ್ಟಿಯ ಎಸ್ಆರ್ ಆರ್ ಕಾರ್ಯವನ್ನು ನಡೆಸುತ್ತಿವೆ. ಈ ಅಭಿಯಾನದ ಭಾಗವಾಗಿ ಸಾರ್ವಜನಿಕರು ತಮ್ಮ ಮತದಾರರ ವಿವರಗಳ ಫಾರಂಗಳನ್ನು ತಕ್ಷಣವೇ ಸಲ್ಲಿಸುವಂತೆ ಕೋರಿ ರಾಜ್ಯದಲ್ಲಿ ಈಗಾಗಲೇ ಶೇ. 60 ರಿಂದ 65 ರಷ್ಟು ಜನರ ಎನುಮರೇಷನ್ ಫಾರಂಗಳು ವಾಪಸ್ ಮುಟ್ಟಿದ್ದು, ಅವುಗಳನ್ನು ಚುನಾವಣಾ ಆಯೋಗವು ಡಿಜಿಟಲೀಕರಣಗೊಳಿಸಿದೆ ಎಂದು ತಿಳಿಸಿದರು.
ಸಂಸದ ಗೋವಿಂದ ಕಾರಜೋಳ ಮಾತನಾಡಿ, ಕಳೆದ ಇಪ್ಪತ್ತು ವರ್ಷಗಳಿಂದ ಮತದಾರರ ಪಟ್ಟಿಯು ಸೂಕ್ತವಾಗಿ ಪರಿಷ್ಕರಣೆಯಾಗಿರಲಿಲ್ಲ, ಈ ಹಿನ್ನೆಲೆಯಲ್ಲಿ 2026-27ನೇ ಸಾಲಿನಲ್ಲಿ ದೇಶಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ಮತದಾರರ ಪಟ್ಟಿಯನ್ನು ವ್ಯವಸ್ಥಿತವಾಗಿ ನವೀಕರಿಸಲು ಬಿಎಲ್ಒ ಗಳನ್ನು ನೇಮಿಸಲಾಗಿದ್ದು, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಸೇರಿದಂತೆ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಕಡೆಯಿಂದ ಬಿಎಲ್ಒ-1 ಮತ್ತು ಬಿಎಲ್ಒ-2 ಪ್ರತಿನಿಧಿಗಳನ್ನು ನಿಯೋಜಿಸಿವೆ ಎಂದು ತಿಳಿಸಿದರು.
ಇದನ್ನೂ ಓದಿ: ನಾಯಕ ಸಮಾಜದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ
ಈ ಅಭಿಯಾನದ ಭಾಗವಾಗಿ ತಿಪ್ಪಾರೆಡ್ಡಿ ಅವರ ಕ್ಷೇತ್ರದಲ್ಲಿ ಮನೆ-ಮನೆ ಸಂಪರ್ಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈಗಾಗಲೇ 11,000ಕ್ಕೂ ಹೆಚ್ಚು ನಕಲಿ ಅಥವಾ ಅನರ್ಹ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಇನ್ನು ಸುಮಾರು 13,000ದಷ್ಟು ಸಂಶಯಾಸ್ಪದ ಅಥವಾ ದ್ವಿಗುಣ (ಡಬಲ್) ಹೆಸರುಗಳು ಕಂಡುಬಂದಿದ್ದು, ತಿಪ್ಪಾರೆಡ್ಡಿ ಅವರ ಪುತ್ರ ಡಾಕ್ಟರ್ ಸಿದಾರ್ಥ ಅವರ ನೇತೃತ್ವದಲ್ಲಿ ಪರಿಶೀಲನೆ ನಡೆಸಿ, ಈ ಮಾಹಿತಿಯನ್ನು ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತಕ್ಕೆ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ.
ಮುಂದಿನ 20 ವರ್ಷಗಳ ಕಾಲ ಮತದಾರರ ಪಟ್ಟಿ ಪಾರದರ್ಶಕವಾಗಿರಬೇಕು ಎಂಬ ಉದ್ದೇಶದಿಂದ ಈ ಕಾರ್ಯ ಸಾಗುತ್ತಿದ್ದು, ರಾಜ್ಯದ ಮುಖ್ಯಮಂತ್ರಿಗಳು ಸಹ ಇದಕ್ಕೆ ಸಹಕಾರ ನೀಡುತ್ತಿದ್ದಾರೆ. ಆಗಸ್ಟ್ 8 ಅರ್ಜಿ ಸಲ್ಲಿಸಲು/ತಿದ್ದುಪಡಿಗೆ ಕೊನೆಯ ದಿನವಾಗಿರುವುದರಿಂದ, ಸಾರ್ವಜನಿಕರು ಹಾಗೂ 18 ವರ್ಷ ತುಂಬಿದ ಪ್ರತಿಯೊಬ್ಬ ಯುವಕ-ಯುವತಿಯರು ಜಾಗೃತಿಯಿಂದ ತಮ್ಮ ಹೆಸರನ್ನು ಪಟ್ಟಿಗೆ ಸೇರಿಸಿಕೊಳ್ಳಬೇಕು ಎಂದು ವಿನಂತಿಸಿದರು.
ಹಳೆಯ ಪಟ್ಟಿಯು ಮುಂದೆ ರದ್ದಾಗುವುದರಿಂದ, ಸರ್ಕಾರದ ಸೌಲಭ್ಯಗಳು ಹಾಗೂ ಯೋಜನೆಗಳ ಪ್ರಯೋಜನ ಪಡೆಯಲು ಮತದಾರರ ಪಟ್ಟಿಯಲ್ಲಿ ಹೆಸರು ಇರುವುದು ಕಡ್ಡಾಯವಾಗಿದೆ ಎಂದು ಸಂಸದರು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಹಿರಿಯೂರಿನಲ್ಲಿ ಡಿ.ಸುಧಾಕರ್ ನುಡಿ ನಮನ | ಸಿಎಂ ಡಿಕೆಶಿ, ಸಿದ್ದರಾಮಯ್ಯ ಸೇರಿ ಗಣ್ಯರು ಭಾಗೀ
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ ಕುಮಾರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಯಾದವ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಬಾಳೆಕಾಯಿ ರಾಮದಾಸ್, ಗ್ರಾಮಾಂತರ ಅಧ್ಯಕ್ಷರಾದ ನಾಗರಾಜ್, ಜಿಲ್ಲಾ ಕಾರ್ಯದರ್ಶಿಗಳಾದ ರೇಖಾ, ಜಿಲ್ಲಾ ವಾಕ್ತಾರರಾದ ನಾಗರಾಜ್ ಬೇದ್ರೆ, ಜಿಲ್ಲಾ ಸಹವಕ್ತಾರರಾದ ನವೀನ್ ಚಾಲುಕ್ಯ, ನಗರ ಪ್ರಧಾನ ಕಾರ್ಯದರ್ಶಿಗಳಾದ ಲೀಲಾವತಿ ಬಸವೇಶ್, ಎಸ್.ಸಿ. ಮೋರ್ಚಾ ಅಧ್ಯಕ್ಷ ಪರಶುರಾಮ್, ದಿಶಾ ಸಮಿತಿ ಸದಸ್ಯ ಭರತ್, ಯುವ ಮೋರ್ಚಾ ನಗರಧ್ಯಕ್ಷರಾದ ಡಾ.ವಸಂತ್ ಆಚಾರ್, ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷರಾದ ಸಿದ್ದೇಶ ಯಾದವ್, ಕಾರ್ಯಕರ್ತರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

