By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    4 hours ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    4 hours ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    17 hours ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    23 hours ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    4 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    21 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    3 hours ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    4 hours ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    1 day ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    1 day ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    2 days ago
Reading: ಸಿರಿಗೆರೆಯಲ್ಲಿ ಲಿಂ.ಶಿವಕುಮಾರ ಶಿವಾಚಾರ್ಯ ಶ್ರೀಗಳ ಶ್ರದ್ಧಾಂಜಲಿ ಸಭೆ ಸಮಾರೋಪ | ಯಾರೆಲ್ಲಾ ಭಾಗವಹಿಸಿದ್ರು, ಏನೇನು ಹೇಳಿದ್ರು ಪೂರ್ಣ ವಿವರ ಇಲ್ಲಿದೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಿರಿಗೆರೆಯಲ್ಲಿ ಲಿಂ.ಶಿವಕುಮಾರ ಶಿವಾಚಾರ್ಯ ಶ್ರೀಗಳ ಶ್ರದ್ಧಾಂಜಲಿ ಸಭೆ ಸಮಾರೋಪ | ಯಾರೆಲ್ಲಾ ಭಾಗವಹಿಸಿದ್ರು, ಏನೇನು ಹೇಳಿದ್ರು ಪೂರ್ಣ ವಿವರ ಇಲ್ಲಿದೆ

chitradurganews.com
Last updated: 24 September 2023 23:15
chitradurganews.com
3 years ago
Share
ಸಿರಿಗೆರೆಯಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿ ಶ್ರದ್ಧಾಂಜಲಿ ಸಮಾರಂಭ
ಸಿರಿಗೆರೆಯಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿ ಶ್ರದ್ಧಾಂಜಲಿ ಸಮಾರಂಭ
SHARE

ಚಿತ್ರದುರ್ಗ ನ್ಯೂಸ್. ಕಾಂ: ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ 31ನೇ ಶ್ರದ್ಧಾಂಜಲಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಸಿರಿಗೆರೆಯಲ್ಲಿ ಭಾನುವಾರ ನಡೆಯಿತು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಅರಣ್ಯ ಸಚಿವ ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಬಿಜೆಪಿ ಯುವ ಮುಖಂಡ, ಶಾಸಕ ಬಿ.ವೈ.ವಿಜಯೇಂದ್ರ, ಶಾಸಕರಾದ ಡಾ.ಎಂ.ಚಂದ್ರಪ್ಪ, ಡಿ.ಜಿ.ಶಾಂತನಗೌಡ್ರು, ಮಾಜಿ ಸಚಿವ ಎಚ್.ಆಂಜನೇಯ ಸೇರಿದಂತೆ ಅನೇಕ ಗಣ್ಯರು ಸಾವಿರಾರು ಭಕ್ತರು ಭಾಗವಹಿಸಿದ್ದರು.

ಇದನ್ನೂ ಓದಿ: ಲೋಕಸಭೆ ಚುನಾವಣೆ ಅಖಾಡಕ್ಕೆ ಕಾಂಗ್ರೆಸ್; ಮೈಸೂರು ನಾಯಕನ ಹೆಗಲಿಗೆ ಚಿತ್ರದುರ್ಗ ಅಭ್ಯರ್ಥಿ ಆಯ್ಕೆ ಹೊಣೆ

ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರ ಅಭಿಪ್ರಾಯಗಳು:

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ:

ಮರುಳಸಿದ್ಧರ ಪರಂಪರೆಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು ಸದಾ ನಿಷ್ಠುರ ನಡೆ ನುಡಿ ಇಟ್ಟುಕೊಂಡಿದ್ದರು. ಇಂದಿನ ಗುರುಗಳಾದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಕೂಡಾ ಅದೇ ಹಾದಿಯಲ್ಲಿ ಸಾಗುತ್ತಿದ್ದಾರೆ.

ಮರುಳಸಿದ್ಧರ ಪರಂಪರೆಯೆಂದರೆ ವ್ಯಕ್ತಿ ವಿಕಸನ, ಆತ್ಮ ಶುದ್ದತೆ ಆನಂತರ ಸಮಾಜದ ಶುದ್ಧತೆಯಾಗಿದೆ. ಕೀಳರಿಮೆ ಹೋಗಲು ಆತ್ಮಶಕ್ತಿ ಹೆಚ್ಚಾಗಬೇಕು. ಕಾಲ ಬದಲಾಗಿದೆ. ಎಲ್ಲರನ್ನೂ ಮೆಚ್ಚಿಸುವ ಪ್ರಯತ್ನ ಮಾಡುತ್ತೇವೆ. ಆದರೆ, ಯಾರನ್ನು ಮೆಚ್ಚಿಸಲು ಆಗಲ್ಲ. ಸತ್ಯ, ಸನ್ಮಾರ್ಗದಲ್ಲಿ ನಡೆದಾಗ ಯಾರನ್ನು ಮೆಚ್ಚಿಸುವ ಅಗತ್ಯ ಬರುವುದಿಲ್ಲ ಎಂದರು.

ದೇಶಕ್ಕೆ ದೊಡ್ಡ ಚರಿತ್ರೆ ಇದೆ. ಆದರೆ, ಚಾರಿತ್ರ್ಯ ಬೇಕಾಗಿದೆ. ಸರಿ, ತಪ್ಪು ಯಾವುದು ಎನ್ನುವುದು ಗೊತ್ತಾಗಬೇಕು. ಬಹಳಷ್ಟು ಜನ ಆಚಾರ್ಯರಿದ್ದಾರೆ, ಆಚರಣೆ ಇಲ್ಲ. ಬಹಳಷ್ಟು ಸಂಘರ್ಷ ಇದೆ. ಸಮನ್ವಯ ಇಲ್ಲ. ಅನ್ಯಾಯ ಮಾಡಬೇಡ ಮತ್ತು ಸಹಿಸಬೇಡ ಎನ್ನುವುದನ್ನು ನಮ್ಮ ಗುರುಗಳು ಹೇಳಿಕೊಟ್ಟಿದ್ದಾರೆ ಎಂದು ಹೇಳಿದರು.

ಹಿಂದಿನ ಗುರುಗಳನ್ನು ಕೋರ್ಟ್ ಕಟಕಟೆಗೆ ಎಳೆಯಲಾಗಿತ್ತು. ಆದರೆ, ಇಂದು ಈ ಮಠದಲ್ಲೇ ಜಂಗಮ ಕೋರ್ಟ್ ನಿರ್ಮಾಣವಾಗಿದೆ. ನಿಷ್ಠುರವಾಗಿ ನ್ಯಾಯ ನೀಡುವ ಕೆಲಸವನ್ನು ಗುರುಗಳು ಮಾಡುತ್ತಿದ್ದಾರೆ. ಇಂತಹ ಮಠ ಭಾರತದಲ್ಲಿ ಮತ್ತೊಂದಿಲ್ಲ ಎಂದು ಶ್ಲಾಘಿಸಿದರು.

ಅರಣ್ಯ ಸಚಿವತರಾದ ಈಶ್ವರ ಖಂಡ್ರೆ:

ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಸಿದ್ದಿಪುರುಷರು. ಸಮ ಸಮಾಜ ನಿರ್ಮಾಣ ಮಾಡುವ ಬಸವಣ್ಣನ ಆಶಯದಂತೆ ಕೆಲಸ ಮಾಡಿದವರು. ಅಸ್ಪೃಶ್ಯತೆ, ಕಂದಾಚಾರ, ಮೂಢನಂಬಿಕೆ ಹೋಗಲಾಡಿಸಿ ಉತ್ತಮ ಸಮಾಜ ನಿರ್ಮಾಣ ಮಾಡುವ ಕನಸು ಕಂಡಿದ್ದರು ಎಂದು ಸ್ಮರಿಸಿದರು.

ಸರ್ಕಾರಗಳಿಂದ ರೈತರಿಗಾಗಿ ಅನೇಕ ಕಾರ್ಯಕ್ರಮ ನೀಡಿದರೂ ಪ್ರಯೋಜನ ಆಗುತ್ತಿಲ್ಲ. ಇರುವ ನ್ಯೂನ್ಯತೆ ಸರಿಪಡಿಸಬೇಕು. ಫಸಲ್ ಬಿಮಾ ಯೋಜನೆ ತುಟಿಗೆ ತುಪ್ಪ ಹಚ್ಚಿದಂತಿದೆ. ಇವು ಸರಿಯಾಗದಿದ್ದರೆ ರೈತರ ಉದ್ದಾರ ಆಗುವುದಿಲ್ಲ ಎಂದರು.

ಸಿರಿಗೆರೆಯಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿ ಶ್ರದ್ಧಾಂಜಲಿ ಸಮಾರಂಭ
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಡಿದರು

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್:

ಶ್ರೀ ಶಿವಕುಮಾರ ಸ್ವಾಮಿಗಳು ಮುತ್ತಗದೂರಿನ ಮುತ್ತು ಎಂದೇ ಹೆಸರಾಗಿದ್ದರು. ತರಳಬಾಳು ಹುಣ್ಣಿಮೆ ಕಾರ್ಯಕ್ರಮದ ಮೂಲಕ ಜನರಲ್ಲಿ ಏಕತೆಯ ಬೀಜ ಬಿತ್ತಿದ್ದಾರೆ. ಮಠದ ಜವಾಬ್ದಾರಿ ವಹಿಸಿಕೊಂಡ ನಂತರ ಹಗಲಿರುಳು ದುಡಿದು ಮಠ ಹಾಗೂ ಭಕ್ತರನ್ನು ಕಟ್ಟಿ ಬೆಳೆಸಿದ್ದಾರೆ.

ಸಿರಿಗೆರೆ ಗುರುಗಳು ಗುಡುಗಿದರೆ ವಿಧಾನಸೌಧ ನಡುಗುತ್ತದೆ ಎನ್ನುವ ಮಾತಿತ್ತು. ಈಗಿನ ಗುರುಗಳು ಕೂಡಾ ನೀರಾವರಿ ಯೋಜನೆಗಳಿಗೆ ಒತ್ತು ನೀಡಿ, ರೈತರ ಕಲ್ಯಾಣಕ್ಕೆ ಆದ್ಯತೆ ನೀಡಿದ್ದಾರೆ ಎಂದು ಹೇಳಿದರು.

ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ಭಾಗವಹಿಸಿದ್ದರು.
ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ಭಾಗವಹಿಸಿದ್ದರು.

ಬಿಜೆಪಿ ಯುವ ಮುಖಂಡ, ಶಾಸಕ ಬಿ.ವೈ.ವಿಜಯೇಂದ್ರ:

ಸಿರಿಗೆರೆ ಎಂದರೆ ಗುರುವಿನ ಸಿರಿ, ಆಧ್ಯಾತ್ಮಿಕ ಸಿರಿ, ಸಾಮಾಜಿಕ ಸಿರಿ, ಜ್ಞಾನದ ಸಿರಿ ಎಂದು ನಾನು ಗಮನಿಸಿದ್ದೇನೆ. ಬಸವಾದಿ ಶರಣರ ಸಮಕಾಲಿನರಾಗಿದ್ದ ಮರುಳಸಿದ್ದರು ಈ ಪೀಠದ ಪುಣ್ಯ ಪುರುಷರಾಗಿದ್ದರೆ. ಅವರು ಬೆಳಗಿದ ಜ್ಯೋತಿ ಇಂದು ಲಕ್ಷಾಂತರ ಮಕ್ಕಳಿಗೆ ಬೆಳಕಾಗಿದೆ. ಮರುಳಸಿದ್ದರ ಹಾದಿಯಲ್ಲೇ ಇಂದಿನ ಗುರುಗಳು ನಡೆದು ಸಿರಿಗೆರೆ ಹಿರಿಮೆಗೆ ಗರಿ ಮೂಡಿಸಿದ್ದಾರೆ. ಎಲ್ಲ ವಿಷ ವರ್ತುಲ ಬೇಧಿಸಿ ಸಿರಿಗೆರೆ ಮಠವನ್ನು ಬೆಳೆಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ಮಾತನ್ನು ಎಷ್ಟು ಕೇಳುತ್ತಿದ್ದರೋ ಗೊತ್ತಿಲ್ಲ. ಆದರೆ, ಸಿರಿಗೆರೆ ಗುರುಗಳು ಹೇಳುವ ಮಾತನ್ನು ಶ್ರದ್ಧೆಯಿಂದ ಪಾಲಿಸುತ್ತಿದ್ದರು. ಸಿರಿಗೆರೆ ಗುರುಗಳು ನಮ್ಮ ತಂದೆಯವರಿಗೆ ಪ್ರೇರಣೆಯಾಗಿದ್ದರು ಎಂದು ಸ್ಮರಿಸಿದರು.

ಯಡಿಯೂರಪ್ಪ ಅವರಿಗೆ ರಾಜಕೀಯ ಜನ್ಮ ನೀಡಿದರು ಶಿಖಾರಿಪುರ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಕೆಲಸಕ್ಕೆ ಶ್ರೀಗಳು ಪ್ರೇರಣೆ. ರಾಜಕೀಯ ಏಳುಬೀಳುಗಳ ನಡುವೆ ಶ್ರೀಗಳ ಮಾರ್ಗದರ್ಶನದಲ್ಲಿ ತಂದೆ ಬೆಳೆದಿದ್ದರೆ ನಾನು ಇಂದು ಶಾಸಕನಾಗಿ ಇಲ್ಲಿ ಬಂದು ನಿಲ್ಲಲು ಶ್ರೀಗಳ ಆಶೀರ್ವಾದ ಕಾರಣ ಎಂದು ಎಂದರು.

ಸಿರಿಗೆರೆಯಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿ ಶ್ರದ್ಧಾಂಜಲಿ ಸಮಾರಂಭ
ಸಿರಿಗೆರೆಯಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿ ಶ್ರದ್ಧಾಂಜಲಿ ಸಮಾರಂಭ

ರೈತ ಸಂಘದ ರಾಜ್ಯಧ್ಯಕ್ಷ, ಸಾಧು ಸದ್ಧರ್ಮ ವೀರಶೈವ ಸಂಘದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ:

ಸರ್ಕಾರದ ಯೋಜನೆಗಳಿಗೆ ಭೂಸ್ವಾಧೀನ ಮಾಡಿದಾಗ ಆ ಭೂಮಿಗೆ ರೈತರೇ ಮಾಲಿಕರಾಗಿರುವಂತೆ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಒತ್ತಾಯ ಮಾಡಿದ್ದಾರೆ. ಸರ್ಕಾರಗಳು ಈ ನಿಟ್ಟಿನಲ್ಲಿ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಭೂ ಸ್ವಾಧೀನ ಮಾಡಿಕೊಂಡು ಕೊಟ್ಟ ಹಣ ರೈತರಲ್ಲಿ ಉಳಿಯುವುದಿಲ್ಲ. ಆ ಹಣದ ಬದಲು ಪ್ರತಿ ಆರು ತಿಂಗಳಿಗೊಮ್ಮೆ ರೈತ ಏನು ಬೆಳೆ ಬೆಳೆಯುತ್ತಿದ್ದ ಎನ್ನುವ ಆಧಾರದಲ್ಲಿ ಪರಿಹಾರ ನೀಡಬೇಕು ಎನ್ನುವ ಚಿಂತನೆ ಅದ್ಬುತವಾಗಿದೆ ಎಂದರು.

ಇದನ್ನೂ ಓದಿ: ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಮುಂಬೈ ಡಿಜೆ | ದಾವಣಗೆರೆಯಲ್ಲಿ ಡಿಜೆ ಸೀಕ್ರೇಟ್ ರಿವಿಲ್ ಮಾಡಿದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)

ಮಾಜಿ ಸಚಿವ ಎಚ್.ಆಂಜನೇಯ:

ಸಿರಿಗೆರೆ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳು ಬಹಳ ಹಿಂದೆಯೇ ಸಹಪಂಕ್ತಿ ಭೋಜನ ಆರಂಭಿಸುವ ಮೂಲಕ ಕ್ರಾಂತಿಕಾರಕ ಬದಲಾವಣೆ ತಂದಿದ್ದಾರೆ. ನಮಗೆ ಮೆಡಿಕಲ್ ಕಾಲೇಜು ಬೇಡ, ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ನೀಡುವ ಶಾಲೆಗಳು ಸಾಕು ಎಂದು ಸಾಕ್ಷರತೆ ಹೆಚ್ಚಿಸುವ ಕೆಲಸ ಮಾಡಿದ್ದಾರೆ. ಒಂದು ಸರ್ಕಾರ ಮಾಡುವ ಕೆಲಸವನ್ನು ಸಿರಿಗೆರೆ ಮಠ ಮಾಡುತ್ತಿದೆ ಎಂದು ಸ್ಮರಿಸಿದರು.

ಬಿಜೆಪಿ ಯುವ ಮುಖಂಡ ಜಿ.ಎಂ.ಅನಿತ್‍ಕುಮಾರ್:

ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಶ್ರೀಗಳು ವ್ಯಕ್ತಿ ಆಗಿರಲಿಲ್ಲ, ಶಕ್ತಿ ಆಗಿದ್ದರು. ಗ್ರಾಮೀಣ ಭಾಗದಲ್ಲಿ ಸಾಕಷ್ಟು ಶಾಲೆಗಳನ್ನು ತೆರೆದು ಸಾವಿರಾರು ಮಕ್ಕಳಿಗೆ ಉಚಿತ ಶಿಕ್ಚಣ ನೀಡಿದ್ದಾರೆ. ಅವರಿಂದ ಮಾಡಿದ ಕೆಲಸಗಳ ಕಾರಣಕ್ಕೆ ಸತತ 31 ವರ್ಷಗಳಿಂದ ಅವರ ಶ್ರದ್ಧಾಂಜಲಿ ಕಾರ್ಯಕ್ರಮದ ಮೂಲಕ ಸ್ಮರಿಸುತ್ತಿದ್ದೇವೆ ಎಂದರು.

ಹಿರೆಕೆರೂರು ಶಾಸಕ ಯು.ಬಿ.ಬಣಕಾರ್:

ಲಿಂಗೈಕ್ಯ ಹಿರಿಯ ಗುರುಗಳು ತಮ್ಮ ಜೀವಿತಾವಧಿಯಲ್ಲಿ ಮಾಡಿದ ಕೆಲಸಗಳಿಂದ ಇಂದಿಗೂ ನಮ್ಮ ನಡುವೆ ಪ್ರೇರಣೆಯಾಗಿದ್ದಾರೆ ಎಂದರು.

ಸಿರಿಗೆರೆಯಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿ ಶ್ರದ್ಧಾಂಜಲಿ ಸಮಾರಂಭ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಸ್ತಕ ಬಿಡುಗಡೆ ಮಾಡಿದರು

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ;

ರೈತರ ಬಗ್ಗೆ ಎಲ್ಲರೂ ಭಾಷಣ ಮಾಡುತ್ತೇವೆ. ಆದರೆ, ರೈತರ ಪರಿಸ್ಥಿತಿ ಸುಧಾರಣೆ ಆಗಿಲ್ಲ. ಸರ್ಕಾರಗಳು ಕೂಡಾ ರೈತರಿಗೆ ಸರಿಯಾದ ಯೋಜನೆ ರೂಪಿಸುತ್ತಿಲ್ಲ. ಸರ್ಕಾರಕ್ಕೆ ರೈತನ ಸಮಸ್ಯೆ ಗೊತ್ತಿದ್ದರೂ, ಗೊತ್ತಿಲ್ಲದಂತೆ ನಡೆಯುತ್ತದೆ. ಕೃಷಿ ಕುಟುಂಬದ ಹಿನ್ನೆಲೆ ಇಲ್ಲದವರು ಕೃಷಿ ಮಂತ್ರಿ ಆಗುತ್ತಾರೆ. ಅಧಿಕಾರಿಗಳು ಹೇಳಿದ್ದನ್ನು ಕೇಳಿಕೊಂಡು ಕುಳಿತುಬಿಡುತ್ತಾರೆ ಎಂದರು.

ಬೆಂಗಳೂರಿನ ಇನ್ ಸೈಟ್ ಐಎಎಸ್ ಕೋಚಿಂಗ್ ಕೇಂದ್ರದ ಮುಖ್ಯಸ್ಥ ವಿನಯ್:

ಮುಂದಿನ ದಿನಗಳಲ್ಲಿ ಸಿರಿಗೆರೆ ಮಠದಲ್ಲಿ ಐಎಎಸ್, ಕೆಎಎಸ್ ಕೋಚಿಂಗ್ ಕೇಂದ್ರ ಆರಂಭವಾಗಬೇಕು. ಇದಕ್ಕೆ ಇನ್ ಸೈಟ್ ಕೊಚಿಂಗ್ ಸೆಂಟರ್ ಎಲ್ಲ ಸಹಕಾರ ನೀಡುತ್ತದೆ. ಹಿಂದೆ ರಾಜ್ಯದಲ್ಲಿ ಪ್ರತಿ ವರ್ಷ 8-10 ಐಎಎಸ್, ಐಪಿಎಸ್ ಅಧಿಕಾರಿಗಳು ಬರುತ್ತಿದ್ದರು. ಈಗ ಆ ಸಂಖ್ಯೆ 30 ರವರೆಗೆ ತಲುಪಿದೆ. ನಮ್ಮ ಕೇಂದ್ರದ ಕೊಡುಗೆಯೂ ಇದೆ.

ಸಿರಿಗೆರೆಯಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿ ಶ್ರದ್ಧಾಂಜಲಿ ಸಮಾರಂಭ
ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು

ಸರ್ಕಾರ ಈಗ ಸಾಕಷ್ಟು ಗ್ಯಾರೆಂಟಿಗಳನ್ನು ಕೊಟ್ಟಿದೆ. ಅವುಗಳ ಜೊತೆಗೆ ರೈತರಿಗಾಗಿ ಜಲಭಾಗ್ಯ ಎಂಬ 6ನೇ ಗ್ಯಾರೆಂಟಿ ಕೊಟ್ಟರೆ ಹೆಚ್ಚು ಅನುಕೂಲವಾಗುತ್ತದೆ. ಇಂತಹ ಯೋಜನೆಯಿಂದ ರಾಜ್ಯದ ಎಲ್ಲ ಕೆರೆಗಳು ಭರ್ತಿಯಾದರೆ ರೈತರು ಹರ್ಷಗೊಳ್ಳುತ್ತಾರೆ.
ಹಿರಿಯ ಗುರುಗಳಾದ ಶ್ರೀ ಶಿವಕುಮಾರ ಸ್ವಾಮೀಜಿ ಹಲವು ಕಷ್ಟಗಳನ್ನು ಎದುರಿಸಿ ಸಮಾಜ ಕಟ್ಟಿದ್ದಾರೆ. ಸಾಹಿತ್ಯ, ಸಾಂಸ್ಕøತಿಕ, ರಾಜಕೀಯವಾಗಿ ಕ್ರಾಂತಿ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ದೇವರಾಜ ಅರಸು, ಜಯಚಾಮರಾಜ ಒಡೆಯರ್ ಜೊತೆಗೆ ಗುರುಗಳ ಜೊತೆಗೆ ಆತ್ಮೀಯತೆ ಇದ್ದರೂ ಅದು ವ್ಯಾವಹಾರಿಕವಾಗಿರಲಿಲ್ಲ. ಜನರ ಪರವಾಗಿ ಕೆಲಸ ಮಾಡಿದ್ದಾರೆ.

| ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:B.Y.VijayendraBasavaraja BommaiBasavaraja HorattiChitradurgaD. SudhakarDr.Sri.Shivamurthy Shivacharya SwamijiH.AnjaneyaIswara KhandreKannada Latest NewsSirigereTaralabaluಈಶ್ವರ ಖಂಡ್ರೆಎಚ್.ಆಂಜನೇಯಕನ್ನಡ ಲೇಟೆಸ್ಟ್ ಸುದ್ದಿಚಿತ್ರದುರ್ಗಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಡಿ.ಸುಧಾಕರ್ತರಳಬಾಳುಬಸವರಾಜ ಬೊಮ್ಮಾಯಿಬಸವರಾಜ ಹೊರಟ್ಟಿಬಿ.ವೈ.ವಿಜಯೇಂದ್ರಸಿರಿಗೆರೆ
Share This Article
Facebook Email Print
Previous Article ಕಾರು ಅಪಘಾತದಲ್ಲಿ ಮೃತಪಟ್ಟವರು ದಾವಣಗೆರೆ ದಂಪತಿ ಲಾರಿ-ಕಾರು ನಡುವೆ ಅಪಘಾತ | ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜು
Next Article ಕಾರು ಅಪಘಾತದಲ್ಲಿ ಮೃತಪಟ್ಟವರು ದಾವಣಗೆರೆ ದಂಪತಿ ಕಾರು ಅಪಘಾತದಲ್ಲಿ ಮೃತಪಟ್ಟವರು ದಾವಣಗೆರೆ ದಂಪತಿ
Leave a Comment

Leave a Reply Cancel reply

Your email address will not be published. Required fields are marked *

rosemary oil to your hair
ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
Life Style
ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
ಮುಖ್ಯ ಸುದ್ದಿ
ಸಾಂದರ್ಭಿಕ ಚಿತ್ರ
ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
ಮುಖ್ಯ ಸುದ್ದಿ
hernia
ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
Life Style
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up