By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಬಾಮೈದನನ್ನೇ ಕೊಲೆ ಮಾಡಿದ್ದ ಅಕ್ಕ ಭಾವನಿಗೆ ಜೀವಾವಧಿ ಶಿಕ್ಷೆ
    2 hours ago
    ಬಾಬುಜಗಜೀವನ್ ರಾಮ್ ಭವನ ವೀಕ್ಷಿಸಿದ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) | ಉಳಿದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ 
    12 hours ago
    ರಘುರಾಮರೆಡ್ಡಿ
    ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ
    13 hours ago
    ಮುರುಘಾ ಮಠ
    ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ 
    16 hours ago
    ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
    ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    3 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    7 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    12 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    7 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    20 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    5 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    7 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    19 minutes ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    1 hour ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    1 day ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    2 days ago
Reading: ಸಿರಿಗೆರೆಯಲ್ಲಿ ಲಿಂ.ಶಿವಕುಮಾರ ಶಿವಾಚಾರ್ಯ ಶ್ರೀಗಳ ಶ್ರದ್ಧಾಂಜಲಿ ಸಭೆ ಸಮಾರೋಪ | ಯಾರೆಲ್ಲಾ ಭಾಗವಹಿಸಿದ್ರು, ಏನೇನು ಹೇಳಿದ್ರು ಪೂರ್ಣ ವಿವರ ಇಲ್ಲಿದೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಿರಿಗೆರೆಯಲ್ಲಿ ಲಿಂ.ಶಿವಕುಮಾರ ಶಿವಾಚಾರ್ಯ ಶ್ರೀಗಳ ಶ್ರದ್ಧಾಂಜಲಿ ಸಭೆ ಸಮಾರೋಪ | ಯಾರೆಲ್ಲಾ ಭಾಗವಹಿಸಿದ್ರು, ಏನೇನು ಹೇಳಿದ್ರು ಪೂರ್ಣ ವಿವರ ಇಲ್ಲಿದೆ

chitradurganews.com
Last updated: 24 September 2023 23:15
chitradurganews.com
3 years ago
Share
ಸಿರಿಗೆರೆಯಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿ ಶ್ರದ್ಧಾಂಜಲಿ ಸಮಾರಂಭ
ಸಿರಿಗೆರೆಯಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿ ಶ್ರದ್ಧಾಂಜಲಿ ಸಮಾರಂಭ
SHARE

ಚಿತ್ರದುರ್ಗ ನ್ಯೂಸ್. ಕಾಂ: ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ 31ನೇ ಶ್ರದ್ಧಾಂಜಲಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಸಿರಿಗೆರೆಯಲ್ಲಿ ಭಾನುವಾರ ನಡೆಯಿತು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಅರಣ್ಯ ಸಚಿವ ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಬಿಜೆಪಿ ಯುವ ಮುಖಂಡ, ಶಾಸಕ ಬಿ.ವೈ.ವಿಜಯೇಂದ್ರ, ಶಾಸಕರಾದ ಡಾ.ಎಂ.ಚಂದ್ರಪ್ಪ, ಡಿ.ಜಿ.ಶಾಂತನಗೌಡ್ರು, ಮಾಜಿ ಸಚಿವ ಎಚ್.ಆಂಜನೇಯ ಸೇರಿದಂತೆ ಅನೇಕ ಗಣ್ಯರು ಸಾವಿರಾರು ಭಕ್ತರು ಭಾಗವಹಿಸಿದ್ದರು.

ಇದನ್ನೂ ಓದಿ: ಲೋಕಸಭೆ ಚುನಾವಣೆ ಅಖಾಡಕ್ಕೆ ಕಾಂಗ್ರೆಸ್; ಮೈಸೂರು ನಾಯಕನ ಹೆಗಲಿಗೆ ಚಿತ್ರದುರ್ಗ ಅಭ್ಯರ್ಥಿ ಆಯ್ಕೆ ಹೊಣೆ

ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರ ಅಭಿಪ್ರಾಯಗಳು:

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ:

ಮರುಳಸಿದ್ಧರ ಪರಂಪರೆಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು ಸದಾ ನಿಷ್ಠುರ ನಡೆ ನುಡಿ ಇಟ್ಟುಕೊಂಡಿದ್ದರು. ಇಂದಿನ ಗುರುಗಳಾದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಕೂಡಾ ಅದೇ ಹಾದಿಯಲ್ಲಿ ಸಾಗುತ್ತಿದ್ದಾರೆ.

ಮರುಳಸಿದ್ಧರ ಪರಂಪರೆಯೆಂದರೆ ವ್ಯಕ್ತಿ ವಿಕಸನ, ಆತ್ಮ ಶುದ್ದತೆ ಆನಂತರ ಸಮಾಜದ ಶುದ್ಧತೆಯಾಗಿದೆ. ಕೀಳರಿಮೆ ಹೋಗಲು ಆತ್ಮಶಕ್ತಿ ಹೆಚ್ಚಾಗಬೇಕು. ಕಾಲ ಬದಲಾಗಿದೆ. ಎಲ್ಲರನ್ನೂ ಮೆಚ್ಚಿಸುವ ಪ್ರಯತ್ನ ಮಾಡುತ್ತೇವೆ. ಆದರೆ, ಯಾರನ್ನು ಮೆಚ್ಚಿಸಲು ಆಗಲ್ಲ. ಸತ್ಯ, ಸನ್ಮಾರ್ಗದಲ್ಲಿ ನಡೆದಾಗ ಯಾರನ್ನು ಮೆಚ್ಚಿಸುವ ಅಗತ್ಯ ಬರುವುದಿಲ್ಲ ಎಂದರು.

ದೇಶಕ್ಕೆ ದೊಡ್ಡ ಚರಿತ್ರೆ ಇದೆ. ಆದರೆ, ಚಾರಿತ್ರ್ಯ ಬೇಕಾಗಿದೆ. ಸರಿ, ತಪ್ಪು ಯಾವುದು ಎನ್ನುವುದು ಗೊತ್ತಾಗಬೇಕು. ಬಹಳಷ್ಟು ಜನ ಆಚಾರ್ಯರಿದ್ದಾರೆ, ಆಚರಣೆ ಇಲ್ಲ. ಬಹಳಷ್ಟು ಸಂಘರ್ಷ ಇದೆ. ಸಮನ್ವಯ ಇಲ್ಲ. ಅನ್ಯಾಯ ಮಾಡಬೇಡ ಮತ್ತು ಸಹಿಸಬೇಡ ಎನ್ನುವುದನ್ನು ನಮ್ಮ ಗುರುಗಳು ಹೇಳಿಕೊಟ್ಟಿದ್ದಾರೆ ಎಂದು ಹೇಳಿದರು.

ಹಿಂದಿನ ಗುರುಗಳನ್ನು ಕೋರ್ಟ್ ಕಟಕಟೆಗೆ ಎಳೆಯಲಾಗಿತ್ತು. ಆದರೆ, ಇಂದು ಈ ಮಠದಲ್ಲೇ ಜಂಗಮ ಕೋರ್ಟ್ ನಿರ್ಮಾಣವಾಗಿದೆ. ನಿಷ್ಠುರವಾಗಿ ನ್ಯಾಯ ನೀಡುವ ಕೆಲಸವನ್ನು ಗುರುಗಳು ಮಾಡುತ್ತಿದ್ದಾರೆ. ಇಂತಹ ಮಠ ಭಾರತದಲ್ಲಿ ಮತ್ತೊಂದಿಲ್ಲ ಎಂದು ಶ್ಲಾಘಿಸಿದರು.

ಅರಣ್ಯ ಸಚಿವತರಾದ ಈಶ್ವರ ಖಂಡ್ರೆ:

ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಸಿದ್ದಿಪುರುಷರು. ಸಮ ಸಮಾಜ ನಿರ್ಮಾಣ ಮಾಡುವ ಬಸವಣ್ಣನ ಆಶಯದಂತೆ ಕೆಲಸ ಮಾಡಿದವರು. ಅಸ್ಪೃಶ್ಯತೆ, ಕಂದಾಚಾರ, ಮೂಢನಂಬಿಕೆ ಹೋಗಲಾಡಿಸಿ ಉತ್ತಮ ಸಮಾಜ ನಿರ್ಮಾಣ ಮಾಡುವ ಕನಸು ಕಂಡಿದ್ದರು ಎಂದು ಸ್ಮರಿಸಿದರು.

ಸರ್ಕಾರಗಳಿಂದ ರೈತರಿಗಾಗಿ ಅನೇಕ ಕಾರ್ಯಕ್ರಮ ನೀಡಿದರೂ ಪ್ರಯೋಜನ ಆಗುತ್ತಿಲ್ಲ. ಇರುವ ನ್ಯೂನ್ಯತೆ ಸರಿಪಡಿಸಬೇಕು. ಫಸಲ್ ಬಿಮಾ ಯೋಜನೆ ತುಟಿಗೆ ತುಪ್ಪ ಹಚ್ಚಿದಂತಿದೆ. ಇವು ಸರಿಯಾಗದಿದ್ದರೆ ರೈತರ ಉದ್ದಾರ ಆಗುವುದಿಲ್ಲ ಎಂದರು.

ಸಿರಿಗೆರೆಯಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿ ಶ್ರದ್ಧಾಂಜಲಿ ಸಮಾರಂಭ
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಡಿದರು

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್:

ಶ್ರೀ ಶಿವಕುಮಾರ ಸ್ವಾಮಿಗಳು ಮುತ್ತಗದೂರಿನ ಮುತ್ತು ಎಂದೇ ಹೆಸರಾಗಿದ್ದರು. ತರಳಬಾಳು ಹುಣ್ಣಿಮೆ ಕಾರ್ಯಕ್ರಮದ ಮೂಲಕ ಜನರಲ್ಲಿ ಏಕತೆಯ ಬೀಜ ಬಿತ್ತಿದ್ದಾರೆ. ಮಠದ ಜವಾಬ್ದಾರಿ ವಹಿಸಿಕೊಂಡ ನಂತರ ಹಗಲಿರುಳು ದುಡಿದು ಮಠ ಹಾಗೂ ಭಕ್ತರನ್ನು ಕಟ್ಟಿ ಬೆಳೆಸಿದ್ದಾರೆ.

ಸಿರಿಗೆರೆ ಗುರುಗಳು ಗುಡುಗಿದರೆ ವಿಧಾನಸೌಧ ನಡುಗುತ್ತದೆ ಎನ್ನುವ ಮಾತಿತ್ತು. ಈಗಿನ ಗುರುಗಳು ಕೂಡಾ ನೀರಾವರಿ ಯೋಜನೆಗಳಿಗೆ ಒತ್ತು ನೀಡಿ, ರೈತರ ಕಲ್ಯಾಣಕ್ಕೆ ಆದ್ಯತೆ ನೀಡಿದ್ದಾರೆ ಎಂದು ಹೇಳಿದರು.

ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ಭಾಗವಹಿಸಿದ್ದರು.
ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ಭಾಗವಹಿಸಿದ್ದರು.

ಬಿಜೆಪಿ ಯುವ ಮುಖಂಡ, ಶಾಸಕ ಬಿ.ವೈ.ವಿಜಯೇಂದ್ರ:

ಸಿರಿಗೆರೆ ಎಂದರೆ ಗುರುವಿನ ಸಿರಿ, ಆಧ್ಯಾತ್ಮಿಕ ಸಿರಿ, ಸಾಮಾಜಿಕ ಸಿರಿ, ಜ್ಞಾನದ ಸಿರಿ ಎಂದು ನಾನು ಗಮನಿಸಿದ್ದೇನೆ. ಬಸವಾದಿ ಶರಣರ ಸಮಕಾಲಿನರಾಗಿದ್ದ ಮರುಳಸಿದ್ದರು ಈ ಪೀಠದ ಪುಣ್ಯ ಪುರುಷರಾಗಿದ್ದರೆ. ಅವರು ಬೆಳಗಿದ ಜ್ಯೋತಿ ಇಂದು ಲಕ್ಷಾಂತರ ಮಕ್ಕಳಿಗೆ ಬೆಳಕಾಗಿದೆ. ಮರುಳಸಿದ್ದರ ಹಾದಿಯಲ್ಲೇ ಇಂದಿನ ಗುರುಗಳು ನಡೆದು ಸಿರಿಗೆರೆ ಹಿರಿಮೆಗೆ ಗರಿ ಮೂಡಿಸಿದ್ದಾರೆ. ಎಲ್ಲ ವಿಷ ವರ್ತುಲ ಬೇಧಿಸಿ ಸಿರಿಗೆರೆ ಮಠವನ್ನು ಬೆಳೆಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ಮಾತನ್ನು ಎಷ್ಟು ಕೇಳುತ್ತಿದ್ದರೋ ಗೊತ್ತಿಲ್ಲ. ಆದರೆ, ಸಿರಿಗೆರೆ ಗುರುಗಳು ಹೇಳುವ ಮಾತನ್ನು ಶ್ರದ್ಧೆಯಿಂದ ಪಾಲಿಸುತ್ತಿದ್ದರು. ಸಿರಿಗೆರೆ ಗುರುಗಳು ನಮ್ಮ ತಂದೆಯವರಿಗೆ ಪ್ರೇರಣೆಯಾಗಿದ್ದರು ಎಂದು ಸ್ಮರಿಸಿದರು.

ಯಡಿಯೂರಪ್ಪ ಅವರಿಗೆ ರಾಜಕೀಯ ಜನ್ಮ ನೀಡಿದರು ಶಿಖಾರಿಪುರ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಕೆಲಸಕ್ಕೆ ಶ್ರೀಗಳು ಪ್ರೇರಣೆ. ರಾಜಕೀಯ ಏಳುಬೀಳುಗಳ ನಡುವೆ ಶ್ರೀಗಳ ಮಾರ್ಗದರ್ಶನದಲ್ಲಿ ತಂದೆ ಬೆಳೆದಿದ್ದರೆ ನಾನು ಇಂದು ಶಾಸಕನಾಗಿ ಇಲ್ಲಿ ಬಂದು ನಿಲ್ಲಲು ಶ್ರೀಗಳ ಆಶೀರ್ವಾದ ಕಾರಣ ಎಂದು ಎಂದರು.

ಸಿರಿಗೆರೆಯಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿ ಶ್ರದ್ಧಾಂಜಲಿ ಸಮಾರಂಭ
ಸಿರಿಗೆರೆಯಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿ ಶ್ರದ್ಧಾಂಜಲಿ ಸಮಾರಂಭ

ರೈತ ಸಂಘದ ರಾಜ್ಯಧ್ಯಕ್ಷ, ಸಾಧು ಸದ್ಧರ್ಮ ವೀರಶೈವ ಸಂಘದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ:

ಸರ್ಕಾರದ ಯೋಜನೆಗಳಿಗೆ ಭೂಸ್ವಾಧೀನ ಮಾಡಿದಾಗ ಆ ಭೂಮಿಗೆ ರೈತರೇ ಮಾಲಿಕರಾಗಿರುವಂತೆ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಒತ್ತಾಯ ಮಾಡಿದ್ದಾರೆ. ಸರ್ಕಾರಗಳು ಈ ನಿಟ್ಟಿನಲ್ಲಿ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಭೂ ಸ್ವಾಧೀನ ಮಾಡಿಕೊಂಡು ಕೊಟ್ಟ ಹಣ ರೈತರಲ್ಲಿ ಉಳಿಯುವುದಿಲ್ಲ. ಆ ಹಣದ ಬದಲು ಪ್ರತಿ ಆರು ತಿಂಗಳಿಗೊಮ್ಮೆ ರೈತ ಏನು ಬೆಳೆ ಬೆಳೆಯುತ್ತಿದ್ದ ಎನ್ನುವ ಆಧಾರದಲ್ಲಿ ಪರಿಹಾರ ನೀಡಬೇಕು ಎನ್ನುವ ಚಿಂತನೆ ಅದ್ಬುತವಾಗಿದೆ ಎಂದರು.

ಇದನ್ನೂ ಓದಿ: ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಮುಂಬೈ ಡಿಜೆ | ದಾವಣಗೆರೆಯಲ್ಲಿ ಡಿಜೆ ಸೀಕ್ರೇಟ್ ರಿವಿಲ್ ಮಾಡಿದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)

ಮಾಜಿ ಸಚಿವ ಎಚ್.ಆಂಜನೇಯ:

ಸಿರಿಗೆರೆ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳು ಬಹಳ ಹಿಂದೆಯೇ ಸಹಪಂಕ್ತಿ ಭೋಜನ ಆರಂಭಿಸುವ ಮೂಲಕ ಕ್ರಾಂತಿಕಾರಕ ಬದಲಾವಣೆ ತಂದಿದ್ದಾರೆ. ನಮಗೆ ಮೆಡಿಕಲ್ ಕಾಲೇಜು ಬೇಡ, ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ನೀಡುವ ಶಾಲೆಗಳು ಸಾಕು ಎಂದು ಸಾಕ್ಷರತೆ ಹೆಚ್ಚಿಸುವ ಕೆಲಸ ಮಾಡಿದ್ದಾರೆ. ಒಂದು ಸರ್ಕಾರ ಮಾಡುವ ಕೆಲಸವನ್ನು ಸಿರಿಗೆರೆ ಮಠ ಮಾಡುತ್ತಿದೆ ಎಂದು ಸ್ಮರಿಸಿದರು.

ಬಿಜೆಪಿ ಯುವ ಮುಖಂಡ ಜಿ.ಎಂ.ಅನಿತ್‍ಕುಮಾರ್:

ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಶ್ರೀಗಳು ವ್ಯಕ್ತಿ ಆಗಿರಲಿಲ್ಲ, ಶಕ್ತಿ ಆಗಿದ್ದರು. ಗ್ರಾಮೀಣ ಭಾಗದಲ್ಲಿ ಸಾಕಷ್ಟು ಶಾಲೆಗಳನ್ನು ತೆರೆದು ಸಾವಿರಾರು ಮಕ್ಕಳಿಗೆ ಉಚಿತ ಶಿಕ್ಚಣ ನೀಡಿದ್ದಾರೆ. ಅವರಿಂದ ಮಾಡಿದ ಕೆಲಸಗಳ ಕಾರಣಕ್ಕೆ ಸತತ 31 ವರ್ಷಗಳಿಂದ ಅವರ ಶ್ರದ್ಧಾಂಜಲಿ ಕಾರ್ಯಕ್ರಮದ ಮೂಲಕ ಸ್ಮರಿಸುತ್ತಿದ್ದೇವೆ ಎಂದರು.

ಹಿರೆಕೆರೂರು ಶಾಸಕ ಯು.ಬಿ.ಬಣಕಾರ್:

ಲಿಂಗೈಕ್ಯ ಹಿರಿಯ ಗುರುಗಳು ತಮ್ಮ ಜೀವಿತಾವಧಿಯಲ್ಲಿ ಮಾಡಿದ ಕೆಲಸಗಳಿಂದ ಇಂದಿಗೂ ನಮ್ಮ ನಡುವೆ ಪ್ರೇರಣೆಯಾಗಿದ್ದಾರೆ ಎಂದರು.

ಸಿರಿಗೆರೆಯಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿ ಶ್ರದ್ಧಾಂಜಲಿ ಸಮಾರಂಭ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಸ್ತಕ ಬಿಡುಗಡೆ ಮಾಡಿದರು

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ;

ರೈತರ ಬಗ್ಗೆ ಎಲ್ಲರೂ ಭಾಷಣ ಮಾಡುತ್ತೇವೆ. ಆದರೆ, ರೈತರ ಪರಿಸ್ಥಿತಿ ಸುಧಾರಣೆ ಆಗಿಲ್ಲ. ಸರ್ಕಾರಗಳು ಕೂಡಾ ರೈತರಿಗೆ ಸರಿಯಾದ ಯೋಜನೆ ರೂಪಿಸುತ್ತಿಲ್ಲ. ಸರ್ಕಾರಕ್ಕೆ ರೈತನ ಸಮಸ್ಯೆ ಗೊತ್ತಿದ್ದರೂ, ಗೊತ್ತಿಲ್ಲದಂತೆ ನಡೆಯುತ್ತದೆ. ಕೃಷಿ ಕುಟುಂಬದ ಹಿನ್ನೆಲೆ ಇಲ್ಲದವರು ಕೃಷಿ ಮಂತ್ರಿ ಆಗುತ್ತಾರೆ. ಅಧಿಕಾರಿಗಳು ಹೇಳಿದ್ದನ್ನು ಕೇಳಿಕೊಂಡು ಕುಳಿತುಬಿಡುತ್ತಾರೆ ಎಂದರು.

ಬೆಂಗಳೂರಿನ ಇನ್ ಸೈಟ್ ಐಎಎಸ್ ಕೋಚಿಂಗ್ ಕೇಂದ್ರದ ಮುಖ್ಯಸ್ಥ ವಿನಯ್:

ಮುಂದಿನ ದಿನಗಳಲ್ಲಿ ಸಿರಿಗೆರೆ ಮಠದಲ್ಲಿ ಐಎಎಸ್, ಕೆಎಎಸ್ ಕೋಚಿಂಗ್ ಕೇಂದ್ರ ಆರಂಭವಾಗಬೇಕು. ಇದಕ್ಕೆ ಇನ್ ಸೈಟ್ ಕೊಚಿಂಗ್ ಸೆಂಟರ್ ಎಲ್ಲ ಸಹಕಾರ ನೀಡುತ್ತದೆ. ಹಿಂದೆ ರಾಜ್ಯದಲ್ಲಿ ಪ್ರತಿ ವರ್ಷ 8-10 ಐಎಎಸ್, ಐಪಿಎಸ್ ಅಧಿಕಾರಿಗಳು ಬರುತ್ತಿದ್ದರು. ಈಗ ಆ ಸಂಖ್ಯೆ 30 ರವರೆಗೆ ತಲುಪಿದೆ. ನಮ್ಮ ಕೇಂದ್ರದ ಕೊಡುಗೆಯೂ ಇದೆ.

ಸಿರಿಗೆರೆಯಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿ ಶ್ರದ್ಧಾಂಜಲಿ ಸಮಾರಂಭ
ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು

ಸರ್ಕಾರ ಈಗ ಸಾಕಷ್ಟು ಗ್ಯಾರೆಂಟಿಗಳನ್ನು ಕೊಟ್ಟಿದೆ. ಅವುಗಳ ಜೊತೆಗೆ ರೈತರಿಗಾಗಿ ಜಲಭಾಗ್ಯ ಎಂಬ 6ನೇ ಗ್ಯಾರೆಂಟಿ ಕೊಟ್ಟರೆ ಹೆಚ್ಚು ಅನುಕೂಲವಾಗುತ್ತದೆ. ಇಂತಹ ಯೋಜನೆಯಿಂದ ರಾಜ್ಯದ ಎಲ್ಲ ಕೆರೆಗಳು ಭರ್ತಿಯಾದರೆ ರೈತರು ಹರ್ಷಗೊಳ್ಳುತ್ತಾರೆ.
ಹಿರಿಯ ಗುರುಗಳಾದ ಶ್ರೀ ಶಿವಕುಮಾರ ಸ್ವಾಮೀಜಿ ಹಲವು ಕಷ್ಟಗಳನ್ನು ಎದುರಿಸಿ ಸಮಾಜ ಕಟ್ಟಿದ್ದಾರೆ. ಸಾಹಿತ್ಯ, ಸಾಂಸ್ಕøತಿಕ, ರಾಜಕೀಯವಾಗಿ ಕ್ರಾಂತಿ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ದೇವರಾಜ ಅರಸು, ಜಯಚಾಮರಾಜ ಒಡೆಯರ್ ಜೊತೆಗೆ ಗುರುಗಳ ಜೊತೆಗೆ ಆತ್ಮೀಯತೆ ಇದ್ದರೂ ಅದು ವ್ಯಾವಹಾರಿಕವಾಗಿರಲಿಲ್ಲ. ಜನರ ಪರವಾಗಿ ಕೆಲಸ ಮಾಡಿದ್ದಾರೆ.

| ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:B.Y.VijayendraBasavaraja BommaiBasavaraja HorattiChitradurgaD. SudhakarDr.Sri.Shivamurthy Shivacharya SwamijiH.AnjaneyaIswara KhandreKannada Latest NewsSirigereTaralabaluಈಶ್ವರ ಖಂಡ್ರೆಎಚ್.ಆಂಜನೇಯಕನ್ನಡ ಲೇಟೆಸ್ಟ್ ಸುದ್ದಿಚಿತ್ರದುರ್ಗಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಡಿ.ಸುಧಾಕರ್ತರಳಬಾಳುಬಸವರಾಜ ಬೊಮ್ಮಾಯಿಬಸವರಾಜ ಹೊರಟ್ಟಿಬಿ.ವೈ.ವಿಜಯೇಂದ್ರಸಿರಿಗೆರೆ
Share This Article
Facebook Email Print
Previous Article ಕಾರು ಅಪಘಾತದಲ್ಲಿ ಮೃತಪಟ್ಟವರು ದಾವಣಗೆರೆ ದಂಪತಿ ಲಾರಿ-ಕಾರು ನಡುವೆ ಅಪಘಾತ | ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜು
Next Article ಕಾರು ಅಪಘಾತದಲ್ಲಿ ಮೃತಪಟ್ಟವರು ದಾವಣಗೆರೆ ದಂಪತಿ ಕಾರು ಅಪಘಾತದಲ್ಲಿ ಮೃತಪಟ್ಟವರು ದಾವಣಗೆರೆ ದಂಪತಿ
Leave a Comment

Leave a Reply Cancel reply

Your email address will not be published. Required fields are marked *

Lip mask and lip balm
ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
Life Style
Accumulation of water around the heart
ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
Life Style
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
ಬಾಮೈದನನ್ನೇ ಕೊಲೆ ಮಾಡಿದ್ದ ಅಕ್ಕ ಭಾವನಿಗೆ ಜೀವಾವಧಿ ಶಿಕ್ಷೆ
ಮುಖ್ಯ ಸುದ್ದಿ
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
Dina Bhavishya
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up