By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Sirigere Swamiji: ಸಿರಿಗೆರೆ ಶ್ರೀಗಳ ನಿರ್ಧಾರಕ್ಕೆ ನಮ್ಮ ಬೆಂಬಲ | ಸಮಸ್ಯೆಗಳಿದ್ದರೆ ಮಠಕ್ಕೆ ಬನ್ನಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Sirigere Swamiji: ಸಿರಿಗೆರೆ ಶ್ರೀಗಳ ನಿರ್ಧಾರಕ್ಕೆ ನಮ್ಮ ಬೆಂಬಲ | ಸಮಸ್ಯೆಗಳಿದ್ದರೆ ಮಠಕ್ಕೆ ಬನ್ನಿ

ಮುಖ್ಯ ಸುದ್ದಿ

Sirigere Swamiji: ಸಿರಿಗೆರೆ ಶ್ರೀಗಳ ನಿರ್ಧಾರಕ್ಕೆ ನಮ್ಮ ಬೆಂಬಲ | ಸಮಸ್ಯೆಗಳಿದ್ದರೆ ಮಠಕ್ಕೆ ಬನ್ನಿ

News Desk Chitradurga News
Last updated: 15 August 2024 09:29
News Desk Chitradurga News
11 months ago
Share
TARABALU 2
ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 15 AUGUST 2024
ಚಿತ್ರದುರ್ಗ: ತರಳಬಾಳು ಮಠದ ವಿಚಾರವಾಗಿ ಕೆಲವರು ಟಿವಿ ಮತ್ತು ಪತ್ರಿಕೆಗಳಲ್ಲಿ ತಪ್ಪು ಮಾಹಿತಿಗಳನ್ನು ಪ್ರಚುರಪಡಿಸುತ್ತಿದ್ದಾರೆ. ಇದು ಮಠಕ್ಕೆ ಶೋಭೆ ತರುವಂತದ್ದಲ್ಲ ಎಂದು ಸಿರಿಗೆರೆ ಸಮೀಪದ ದೊಡ್ಡಾಲಗಟ್ಟ ಗ್ರಾಮಸ್ಥರು ತಿಳಿಸಿದ್ದಾರೆ.

ಸಿರಿಗೆರೆ ಸಮೀಪದ ದೊಡ್ಡಾಲಗಟ್ಟ ಗ್ರಾಮದ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ನಡೆದ ಗೋವಿಂದರಾಜನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡಿದ್ದರು.

ಕ್ಲಿಕ್ ಮಾಡಿ ಓದಿ: ವಿಧಾನಸೌಧದ ಮುಂದೆ ಚಳ್ಳಕೆರೆ ಯುವಕನ ಆಟಾಟೋಪ | ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್‌

ಈ ವೇಳೆ ಮಾತನಾಡಿದ ಭಕ್ತರು, ಸಮಸ್ಯೆಗಳಿದ್ದರೆ ಮಠಕ್ಕೆ ಬಂಧು ಶ್ರೀಗಳ ಬಳಿ ಮಾತನಾಡಬಹುದು. ಹೀಗೆ ಹಾದಿಬೀದಿಯಲ್ಲಿ ಮಾತಾಡಿ ಮಠದ ಘನತೆಗೆ ಧಕ್ಕೆ ತರಬಾರದು. ಶ್ರೀಗಳು ಮತ್ತು ಮಠದ ಬಗ್ಗೆ ಗ್ರಾಮಸ್ಥರಿಗೆ ಅಪಾರ ಶ್ರದ್ಧೆ ಇದೆ. ಶ್ರೀಗಳು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ತಿಳಿಸಿದರು.

ಬಳಿಕ ಮಾತನಾಡಿದ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ , ತುಂಗಭದ್ರಾ ನದಿ ಮೈದುಂಬಿ ಹರಿಯುತ್ತಿದ್ದು, ಭರಮಸಾಗರ ಏತ ನೀರಾವರಿ ವ್ಯಾಪ್ತಿಯ ಎಲ್ಲ ಕೆರೆಗಳಿಗೆ ನೀರು ಹರಿಸುವ ಕೆಲಸ ಆಗುತ್ತಿದೆ ಎಂದರು.

srigere sri
ಸಿರಿಗೆರೆ ಸಮೀಪದ ದೊಡ್ಡಾಲಗಟ್ಟ ಗ್ರಾಮದ ರಂಗನಾಥ ದೇವಾಲಯದಲ್ಲಿ ನಡೆದ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು

ಭರಮಸಾಗರ ಏತ ನೀರಾವರಿ ಯೋಜನೆಗೆ ಭರಮಣ್ಣ ನಾಯಕನ ಕೆರೆಯು ಡ್ಯಾಂ ಇದ್ದಂತೆ. ಅದು ತುಂಬಿದರೆ ಸುತ್ತಲಿನ 42 ಕೆರೆಗಳ ವ್ಯಾಪ್ತಿಗೆ ಸೇರುವ ರೈತ ಸಮುದಾಯ ನಿಶ್ಚಿಂತರಾಗಿ ಇರಬಹುದು. ಏತ ನೀರಾವರಿ ಕಾಮಗಾರಿಯಲ್ಲಿ ಕೆಲವು ತಾಂತ್ರಿಕ ಲೋಪಗಳು ಕಂಡುಬಂದಿರುವುದರಿಂದ ಕೆಲವು ಕೆರೆಗಳಿಗೆ ನೀರು ಬರುತ್ತಿಲ್ಲ ಎನ್ನುವ ದೂರುಗಳು ಇವೆ. ಅವುಗಳನ್ನು ಸರಿಪಡಿಸಿ ದೊಡ್ಡಾಲಗಟ್ಟ ವ್ಯಾಪ್ತಿಯ ಕೆರೆಗಳನ್ನು ಸಹ ತುಂಬಿಸಲಾಗುವುದು ಎಂದರು.

ಕ್ಲಿಕ್ ಮಾಡಿ ಓದಿ: ಡಿಎಆರ್‌ ಡಿವೈಎಸ್‌ಪಿ ಎಸ್‌.ಎಸ್.ಗಣೇಶ್‌ಗೆ ಮುಖ್ಯಮಂತ್ರಿ ಪದಕ

ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಂ ನಾಗರಾಜಪ್ಪ, ಮುಖಂಡರಾದ ಬಿ.ಜೆ.ಗಿರಿಯಪ್ಪ, ಕೆ.ಓಂಕಾರಪ್ಪ, ಜಿ.ಬಿ.ರಂಗಪ್ಪ, ಉಮಾಪತಿ, ಓಬವ್ವನಾಗತಿಹಳ್ಳಿ ಮಂಜಣ್ಣ, ವಿಜಯ್‌ ಕುಮಾರ್‌, ಬಿ.ಟಿ.ನಾಗರಾಜ್‌, ಎಸ್‌.ರವಿ, ಎಸ್‌.ಬಿ.ಸ್ವಾಮಿ, ಸುಧಾಕರ್‌ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:DecisionDoddalagattaMathproblemSirigeresupportSwamijiದೊಡ್ಡಾಲಗಟ್ಟನಿರ್ಧಾರಬೆಂಬಲಮಠಸಮಸ್ಯೆಸಿರಿಗೆರೆಸ್ವಾಮೀಜಿ
Share This Article
Facebook Email Print
Previous Article CM MEDEL CM Medal: ಡಿಎಆರ್‌ ಡಿವೈಎಸ್‌ಪಿ ಎಸ್‌.ಎಸ್.ಗಣೇಶ್‌ಗೆ ಮುಖ್ಯಮಂತ್ರಿ ಪದಕ
Next Article d.sudhakar Vanivilasa Sagar: ಬೆಂಗಳೂರಿನ ಒಡಲು ಸೇರಲಿದೆ ವಾಣಿವಿಲಾಸ ಸಾಗರ | ಮುನ್ಸೂಚನೆ ನೀಡಿದ ಸಚಿವ ಸುಧಾಕರ್
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up