
ಚಿತ್ರದುರ್ಗ ನ್ಯೂಸ್.ಕಾಂ
ಕನ್ನಡ ಭಾಷೆಯನ್ನು ಅಭಿವೃದ್ಧಿಗೊಳಿಸುವ ಕೆಲಸ ಸರ್ಕಾರಿ ಶಾಲೆಗಳಿಂದ ಆಗುತ್ತಿದೆ. ಈ ಕೆಲಸವನ್ನು ಸರ್ಕಾರ ಪ್ರೋತ್ಸಾಹಿಸುವ ಅಗತ್ಯವಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರಿ ಶಾಲೆಗಳು ಶಿಕ್ಷಣ ನೀಡುತ್ತಿವೆ. ಈ ನಿಟ್ಟಿನಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು. ಶಿಕ್ಷಕರ ಕೊರತೆ ನೀಗಿಸುವ ಕೆಲಸ ಆಗಬೇಕು ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶ್ರೀ.ಶಿವಮೂರ್ತಿ ಶಿವಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.
ಬೆಂಗಳೂರಿನ ಆರ್.ಟಿ. ನಗರದಲ್ಲಿರುವ ತರಳಬಾಳು ಧಾರ್ಮಿಕ ಮತ್ತು ಸಾಂಸ್ಕøತಿಕ ಕೇಂದ್ರದಲ್ಲಿ ಶ್ರೀಗಳನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ಶ್ರೀಗಳು, ಶಿಕ್ಷಣ ಕ್ಷೇತ್ರದ ಹಲವು ವಿಚಾರಗಳನ್ನು ಸುಧೀರ್ಘವಾಗಿ ಚರ್ಚಿಸಿದರು.
ಶಿಕ್ಷಣ ಇಲಾಖೆಯ ಆಡಳಿತದಲ್ಲಿ ಸುಧಾರಣೆ ಆಗಬೇಕು. ಶಾಲಾ ಮಾನ್ಯತೆ ಶಿಕ್ಷಕರ ನೇಮಕ, ವರ್ಗಾವಣೆ ಮುಂತಾದ ಎಲ್ಲಾ ವಿಚಾರಗಳಿಗೂ ಬೆಂಗಳೂರಿನ ಆಯುಕ್ತರ ಕಚೇರಿಯಿಂದಲೇ ಅನುಮತಿ ಪಡೆಯಬೇಕಿದೆ. ಇದರಿಂದ ಸುಧಾರಣೆ ತರಲು ಸಮಯ ವ್ಯರ್ಥವಾಗುತ್ತಿದೆ. ಈ ಪ್ರಕ್ರಿಯೆಗಳನ್ನು ಜಿಲ್ಲಾ ಹಂತದಲ್ಲೇ ಅಂತಿಮಗೊಳಿಸುವ ಸುಧಾರಣಾತ್ಮ ಕ್ರಮಗಳನ್ನು ಜಾರಿಗೊಳಿಸುವಂತೆ ಸ್ವಾಮೀಜಿ ಸಲಹೆ ನೀಡಿದರು.
ರಾಜ್ಯದಲ್ಲಿರುವ 4 ಸಾವಿರ ಶಾಲೆಗಳಲ್ಲಿ 10ಕ್ಕಿಂತ ಕಡಿಮೆ. ವಿದ್ಯಾರ್ಥಿಗಳು ಓದುತ್ತಿದ್ದಾರೆ. ಸರ್ಕಾರಿ ಶಾಲೆಗಳ ಬಲವರ್ಧನೆ ಮತ್ತು ಆಡಳಿತದಲ್ಲಿ ಸುಧಾರಣೆಗೆ ಶ್ರೀಗಳು ನೀಡಿದ ಸಲಹೆಗಳು ಸ್ವಾಗತಾರ್ಹ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಈ ವೇಳೆ ಮಾಯಕೊಂಡ ಶಾಸಕ ಬಸವಂತಪ್ಪ ಹಾಗೂ ಮಾಜಿ ಸಚಿವ ಎಚ್. ಆಂಜನೇಯ ಇದ್ದರು.
(ಚಿತ್ರದುರ್ಗ ಜಿಲ್ಲೆಯ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ Facebook page follow ಮಾಡಿ https://www.facebook.com/chitradurganews?mibextid=ZbWKwL)

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
