ರೆಡ್‍ಕ್ರಾಸ್ ಸಂಸ್ಥೆಗೆ ನಿವೇಶನ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭರವಸೆ 

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ರೆಡ್ ಕ್ರಾಸ್ ಸಂಸ್ಥೆಯಿಂದ ಸಭೆ

CHITRADURGA NEWS | 12 JUNE 2024

ಚಿತ್ರದುರ್ಗ: ಜಿಲ್ಲೆಯ ರೆಡ್‍ಕ್ರಾಸ್ ಸಂಸ್ಥೆಗೆ ಶೀಘ್ರದಲ್ಲಿ ನಿವೇಶನವನ್ನು ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭರವಸೆ ನೀಡಿದರು.

ಇದನ್ನೂ ಓದಿ: ರೇಣುಕಸ್ವಾಮಿ ಹತ್ಯೆಗೆ ಉಜ್ಜಯಿನಿ ಜಗದ್ಗುರು ಖಂಡನೆ | ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ರೆಡ್‍ಕ್ರಾಸ್ ಸಂಸ್ಥೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,

ಚಿತ್ರದುರ್ಗದಲ್ಲಿ ರೆಡ್‍ಕ್ರಾಸ್ ಸಂಸ್ಥೆ ಉತ್ತಮವಾದ ಕೆಲಸವನ್ನು ಮಾಡುತ್ತಿದೆ, ನೊಂದವರ ಧ್ವನಿಯಾಗಿ ಅವರ ಕಷ್ಟಗಳಿಗೆ ಸ್ಪಂಧಿಸುತ್ತಿದೆ. ಕರೋನ ಸಮಯದಲ್ಲಿ ಉತ್ತಮವಾದ ಕೆಲಸವನ್ನು ಮಾಡುವುದರ ಮೂಲಕ ಜನ ಮನ್ನಣೆಯನ್ನು ಪಡೆದಿದೆ.

ಇಲ್ಲಿ ನಾನು ಎ.ಸಿ.ಯಾದಾಗಿನಿಂದಲೂ ಸಹಾ ನೋಡಿದ್ದೇನೆ, ನಿಮಗೆ ಕಚೇರಿ ಮಾಡಲು ಜಾಗದ ಕೊರತೆ ಇದೆ ಎಂದು ನನಗೆ ಗೊತ್ತಿದೆ ಇದರ ಬಗ್ಗೆ ನಾನು ಸುಮ್ಮನೇ ಇಲ್ಲ ಜಾಗವನ್ನು ನೋಡಲಾಗುತ್ತಿದೆ ಶೀಘ್ರವಾಗಿ ನಿಮಗೆ ಜಾಗವನ್ನು ನೀಡುವ ಭರವಸೆಯನ್ನು ಜಿಲ್ಲಾಧಿಕಾರಿಗಳು ಸಂಸ್ಥೆಯವರಿಗೆ ನೀಡಿದರು.

ಇದನ್ನೂ ಓದಿ: ಕೊಲೆಪಾತಕಿ ನಟ ದರ್ಶನ್‌ಗೆ ಧಿಕ್ಕಾರ | ಕೋಟೆನಾಡಲ್ಲಿ ಕಟ್ಟೆಒಡೆದ ಜನಾಕ್ರೋಶ

ಚಿತ್ರದುರ್ಗ ರಾಜ್ಯದ ಮಧ್ಯ ಭಾಗದಲ್ಲಿ ಇದೆ. ಇಲ್ಲಿ ರಾ.ಹೆ.4 ಮತ್ತು 13 ಹಾದು ಹೋಗುತ್ತದೆ ಅಪಘಾತಗಳು ಸಹಾ ಹೆಚ್ಚಾಗಿ ಆಗುತ್ತದೆ ಅಲ್ಲದೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವವರ ಸಂಖ್ಯೆ ಸಹಾ ಹೆಚ್ಚಾಗುತ್ತಿದೆ.

ಈ ಹಿನ್ನಲೆಯಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಜವಾಬ್ದಾರಿಯ ಸಹಾ ಹೆಚ್ಚಾಗಿದೆ. ಚಿತ್ರದುರ್ಗದಲ್ಲಿ ಈ ಸಂಸ್ಥೆ ಉತ್ತಮವಾಗಿ ಕೆಲಸವನ್ನು ಮಾಡುತ್ತಿದೆ, ಇದಕ್ಕೆ ನಮ್ಮೆಲ್ಲ ಸಹಕಾರ ಇದೆ, ಇನ್ನೂ ಮುಂದೆಯೂ ಸಹಾ ಉತ್ತಮವಾದ ಕೆಲಸವನ್ನು ಮಾಡುವಂತೆ ಸಲಹೆಯನ್ನು ನೀಡಿದರು.

ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ಗಾಯತ್ರಿ ಶಿವರಾಂ ಮಾತನಾಡಿ, ರೆಡ್‍ಕ್ರಾಸ್ ಸಂಸ್ಥೆಗೆ ದೇಶದಲ್ಲಿ ರಾಷ್ಟ್ರಪತಿಗಳು, ರಾಜ್ಯದಲ್ಲಿ ರಾಜ್ಯಪಾಲರು, ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿರುತ್ತಾರೆ. ಈ ಮುಂಚೆ ಸಣ್ಣದಾಗಿ ಪ್ರಾರಂಭವಾದ ಈ ಸಂಸ್ಥೆ ಈಗ 220 ದೇಶಗಳಲ್ಲಿ ಇದೆ.

ಇದನ್ನೂ ಓದಿ: ಜಗಳ ಬಿಡಿಸಲು ಹೋದ ವ್ಯಕ್ತಿ ಕಪಾಳಕ್ಕೆ ಹೊಡೆತ | ಸ್ಥಳದಲ್ಲೇ ಸಾವು

ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗದಲ್ಲಿ 2000ರಲ್ಲಿ ಪ್ರಾರಂಭವಾಯಿತು. ಈಗ ಈ ಸಂಸ್ಥೆಗೆ 25 ವರ್ಷ ಆಚರಣೆಯಲ್ಲಿದೆ, ಆದರೆ ನಮಗೆ ಜಾಗ ಸಮಸ್ಯೆ ಉಂಟಾಗಿದೆ ಈ ಸಂಸ್ಥೆಗೆ ಸರಿಯಾದ ಜಾಗ ಇಲ್ಲ ನಮಗೆ ಬಂದ ಸಾಮಾನುಗಳನ್ನು ಸಂಗ್ರಹ ಮಾಡಲು ಸಹಾ ಜಾಗದ ಕೊರತೆ ಇದೆ. ಈ ಹಿನ್ನಲೆಯಲ್ಲಿ ನಮಗೆ ಉತ್ತಮವಾದ ಜಾಗವನ್ನು ನೀಡುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.

ರಕ್ತದಾನ ಶಿಬಿರಗಳ ಮೂಲಕ ರಕ್ತನಿಧಿ ಕೇಂದ್ರಕ್ಕೆ ರಕ್ತವನ್ನು ಸಂಗ್ರಹ ಮಾಡಿ ನೀಡಲಾಗಿದೆ. ಈ ಉತ್ತಮ ಕೆಲಸಗಳಿಗಾಗಿ ನಮ್ಮ ಸಂಸ್ಥೆಗೆ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಕೋವಿಡ್ ಸಮಯದಲ್ಲಿ 108 ದಿನಗಳ ಕಾಲ ಆಸ್ಪತ್ರೆಗೆ ಬಂದ ರೋಗಿಗಳಿಗೆ ಮತ್ತು ಸಂಬಂಧಿಗಳಿಗೆ ಆಹಾರವನ್ನು ವಿತರಣೆ ಮಾಡಲಾಗಿತ್ತು ಎಂದರು.

ಈ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಗೆ ಹೈಜನಿಕ್ ಕಿಟ್ ಹಾಗೂ ಕೋವಿಡ್ ಸಮಯದಲ್ಲಿ ಮೃತ ಪಟ್ಟ ಓರ್ವ ಕುಟುಂಬಕ್ಕೆ ಹೊಲಿಗೆ ಯಂತ್ರ ಮತ್ತು ರೆಡ್‍ಕ್ರಾಸ್ ಸಂಸ್ಥೆಯ ಸದಸ್ಯರಿಗೆ ಐ.ಡಿ.ಕಾರ್ಡ್ ಗಳನ್ನು ವಿತರಣೆ ಮಾಡಲಾಯಿತು.

ಇದನ್ನೂ ಓದಿ: ಜಿಲ್ಲೆಯಲ್ಲಿ ಕೃಷಿ ಖುಷಿ | 25 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ, 35 ಸಾವಿರ ಮೆಟ್ರಿಕ್ ಟನ್ ಬಿತ್ತನೆ ಬೀಜ ಲಭ್ಯ 

ಈ ಸಂದರ್ಭದಲ್ಲಿ ಕಾರ್ಯದರ್ಶಿ ಮಜಹರುಲ್ಲಾ ಉಪ ಸಭಾಪತಿ ಅರುಣ್ ಕುಮಾರ್ ನಿರ್ದೇಶಕರಾದ ಮಹಮದ್ ಆಲಿ, ಕಾರ್ತಿಕ್,ಸುರೇಶ್ ಬಾಬು, ಸಾದಾ ಸುರೇಶ್, ಶಿವರಾಮ್,ಚೇತನ್,ಹನುಮಂತಪ್ಪ ಪೂಜಾರ್ ಸೇರಿದಂತೆ ಇನ್ನಿತರರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version