By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Holalkere: ಶಿವಗಂಗಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ಸಭೆ | ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಆರ್.ಗಿರೀಶ್ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Holalkere: ಶಿವಗಂಗಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ಸಭೆ | ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಆರ್.ಗಿರೀಶ್ ಭಾಗೀ

ಹೊಳಲ್ಕೆರೆ

Holalkere: ಶಿವಗಂಗಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ಸಭೆ | ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಆರ್.ಗಿರೀಶ್ ಭಾಗೀ

chitradurganews.com
Last updated: 24 September 2024 21:32
chitradurganews.com
9 months ago
Share
shivaganga socity
ಸರ್ವ ಸದಸ್ಯರ ಸಭೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 24 SEPTEMBER 2024

ಹೊಳಲ್ಕೆರೆ(Holalkere): ಸಹಕಾರ ಸಂಘದಲ್ಲಿ ಕೆಲಸ ಮಾಡುವುದು ಲಾಭದಾಯಕ ಹುದ್ದೆಯಲ್ಲ. ಸೇವಾ ಮನೋಭಾವನೆಯಿಂದ ಕೆಲಸ ಮಾಡುವವರ ಅಗತ್ಯ ಇದೆ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಮಾಧುರಿ ಗಿರೀಶ್ ಹೇಳಿದರು.

ಹೊಳಲ್ಕರೆ ತಾಲೂಕು ಶಿವಗಂಗಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದರು.

ಇದನ್ನೂ ಓದಿ: ಭೀಮಸಮುದ್ರ, ಚನ್ನಗಿರಿ, ಶಿವಮೊಗ್ಗದಲ್ಲಿ ಇಂದಿನ ಅಡಿಕೆ ರೇಟ್

ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವವರು ಕೈ, ಬಾಯಿ ಶುದ್ದವಾಗಿರಬೇಕಿದೆ. ಆಗ ಮಾತ್ರ ಸಹಕಾರ ಸಂಘ ಬೆಳೆಯಲು ಸಾಧ್ಯವಿದೆ. ಸಹಕಾರ ಸಂಘದ ಸದಸ್ಯನಾಗಿ ನನ್ನ ಜೀವನ ಇರುವವರೆಗೂ ಯಾವ ರೈತರಿಂದಲೂ ಏನನ್ನು ಅಪೇಕ್ಷೆ ಮಾಡದೆ ಪ್ರಮಾಣಿಕವಾಗಿ ಸೇವೆ ಮಾಡುತ್ತೇನೆ ಎಂದರು.

ಇಲ್ಲಿ ಜಾತಿ ತಾರತಮ್ಯ ಮಾಡದೆ ಎಲ್ಲರನ್ನೂ ಸಮಾನವಾಗಿ ಕಾಣುವ ಮೂಲಕ ಸಂಘವನ್ನು ಪ್ರಗತಿಪಥದತ್ತ ತೆಗೆದುಕೊಂಡು ಹೋಗಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಹಿಂದೂ ಮಹಾಗಣಪತಿ ಶೋಭಾಯಾತ್ರೆ | ವಾಹನ ಸಂಚರಿಸಬೇಕಾದ ಮಾರ್ಗ ಇಲ್ಲಿದೆ

ಸಹಕಾರ ಸಂಘದಲ್ಲಿ ಇರುವ ಆಡಳಿತ ಮಂಡಳಿಯವರು ತಮ್ಮ ಸಂಘದ ಬಗ್ಗೆ ಕಾಳಜಿ ವಹಿಸಿ ಸಾಮಾನ್ಯ ಸಭೆ, ಸಾಲ ನೀಡುವುದು ಮರುಪಾವತಿ ಮಾಡಿಸುವುದು, ವಹಿವಾಟು ನಡೆಸಬೇಕಿದೆ ಆಗ ಮಾತ್ರ ಡಿಸಿಸಿ ಬ್ಯಾಂಕ್‍ನಲ್ಲಿ ಮತದಾನಕ್ಕೆ ಅರ್ಹರಾಗುತ್ತಾರೆ. ಈ ಚುನಾವಣೆಯಲ್ಲಿ ಜಿಲ್ಲೆಯ ಸುಮಾರು 200 ಸಂಘಗಳು ಸರಿಯಾದ ರೀತಿಯಲ್ಲಿ ವಹಿವಾಟನ್ನು ನಡೆಸದೆ ಇದ್ದಿದ್ದರಿಂದ ಅವುಗಳು ಚುನಾವಣೆಯಲ್ಲಿ ಮತದಾನದಿಂದ ಅನರ್ಹವಾಗಿವೆ ಎಂದು ತಿಳಿಸಿದರು.

ಇದನ್ನೂ ಓದಿ: ಉಪನ್ಯಾಸಕರಿಲ್ಲದೆ ಸೊರಗುತ್ತಿದೆ ಸರ್ಕಾರಿ ವಿಜ್ಞಾನ ಕಾಲೇಜು

ಮನೆಯ ಹಿರಿಯರ ಮರಣದ ನಂತರ ಅವರ ಹೆಸರಿನಲ್ಲಿನ ಭೂಮಿಯನ್ನು ವರ್ಗಾವಣೆ ಮಾಡಿಸಿಕೊಂಡು ವ್ಯವಹಾರ ನಡೆಸಿರಿ. ಸಕಾಲಕ್ಕೆ ಸಾಲ ಮರುಪಾವತಿ ಮಾಡಿ. ಸಾಲ ಮನ್ನಾ ಆಗುತ್ತದೆ ಎನ್ನುವುದನು ತಲೆಯಿಂದ ತೆಗೆದು ಹಾಕಿ ಎಂದು ಸಲಹೆ ನೀಡಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ ಉತ್ತಮ ಕೆಲಸ ಮಾಡುತ್ತಿದೆ. ಬೇರೆ ಜಿಲ್ಲೆಗಳಲ್ಲಿ 1 ಲಕ್ಷಕ್ಕಿಂತ ಹೆಚ್ಚು ಸಾಲ ನೀಡುವುದಿಲ್ಲ. ಆದರೆ, ನಮ್ಮಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಾಲ ನೀಡಲಾಗುತ್ತಿದೆ. ಇದರ ಸದುಪಯೋಗ ಆಗಬೇಕು. ನಾನು ಡಿಸಿಸಿ ಬ್ಯಾಂಕ್ ನಿರ್ದೆಶಕನಾಗಲು ಸಂಘದ ಸದಸ್ಯರು ಸಹಕಾರ ನೀಡಿದ್ದಾರೆ.

ಇದನ್ನೂ ಓದಿ: ಬಿಎಸ್ಸಿ, ಜಿಎನ್‍ಎಂ ನರ್ಸಿಂಗ್ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ನಾನು ಮೂರು ಬಾರಿ ನಿರ್ದೇಶಕನಾಗಿದ್ದೇನೆ. ಇದರಲ್ಲಿ ಒಮ್ಮೆ ಮಾತ್ರ ಚುನಾವಣೆ ನಡೆದಿದೆ. ಎರಡು ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಇದಕ್ಕೆ ನಾನು ಆಭಾರಿ ಎಂದರು.

ಶಿವಗಂಗಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅದ್ಯಕ್ಷ ಎನ್.ಮೌನೇಶ್ ಉಪಾಧ್ಯಕ್ಷೆ ಪುಷ್ಷವತಿ, ಮುಖ್ಯ ಕಾರ್ಯನಿರ್ವಣಾಧಿಕಾರಿ ಜಿ.ಸಿ.ನಾಗರಾಜ್, ನಿರ್ದೇಶಕರಾದ ವೀರಭದ್ರಪ್ಪ, ಸತೀಶ್ ನಾಡಿಗ್, ಸುರೇಶ್, ಮಂಜುನಾಥ್, ಸುಜಾತ, ತಿಪ್ಪೆಸ್ವಾಮಿ.ಎಂ.ಬಿ, ರಾಜಪ್ಪ, ಮಾಜಿ ಅಧ್ಯಕ್ಷರಾದ ದಗ್ಗೆ ಶಿವಪ್ರಕಾಶ್, ಮಂಜಣ್ಣ, ಯೋಗೇಶ್, ಸದಸ್ಯರಾದ ಮಹೇಶಣ್ಣ, ಜಿ.ಆರ್.ರಾಜಪ್ಪ, ಎಚ್. ಕುಬೇರಪ್ಪ, ದಗ್ಗೆ ದೆವೇಂದ್ರಪ್ಪ, ಉಮೇಶ್ ಈಚಗಟ್ಟ ಮತ್ತಿತರರಿದ್ದರು.

ಇದನ್ನೂ ಓದಿ: ಶಿವಕುಮಾರ ಸ್ವಾಮೀಜಿ ಹುಟ್ಟೂರಿಗೆ ಭದ್ರೆ | ನೆರವೇರಿದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಂಕಲ್ಪ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chitradurga Latest NewsChitradurga newsChitradurga UpdatesDCC BankHolalkereMadhuri GirishPrimary Agricultural Farmers Cooperative SocietySivagangaSocietyಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ ನ್ಯೂಸ್ಡಿಸಿಸಿ ಬ್ಯಾಂಕ್‌ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಮಾಧುರಿ ಗಿರೀಶ್ಶಿವಗಂಗಾಸೊಸೈಟಿಹೊಳಲ್ಕೆರೆ
Share This Article
Facebook Email Print
Previous Article arecanut price list Arecanut: ಅಡಿಕೆ ಧಾರಣೆ | ಭೀಮಸಮುದ್ರ, ಚನ್ನಗಿರಿ, ಶಿವಮೊಗ್ಗದಲ್ಲಿ ಇಂದಿನ ಅಡಿಕೆ ರೇಟ್
Next Article ವಾಲ್ಮೀಕಿ ನಿಗಮದ ಅಧಿಕಾರಿ ದಿ.ಚಂದ್ರಶೇಖರನ್ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ  Valmiki Corporation; ವಾಲ್ಮೀಕಿ ನಿಗಮದ ಅಧಿಕಾರಿ ದಿ.ಚಂದ್ರಶೇಖರನ್ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ 
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up