By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಂಗೋಲಿ ಸ್ಪರ್ಧೆ ಕಾರ್ಯಕ್ರಮ
    ಮುರುಘಾಮಠವು ಬಸವಾದಿ ಶರಣರ ತತ್ವ, ಚಿಂತನೆಗಳ ಪ್ರಯೋಗಶಾಲೆ | ಡಾ.ಬಸವಕುಮಾರ ಶ್ರೀ 
    8 hours ago
    ಕೃಷಿ ಹೊಂಡ
    ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
    21 hours ago
    ಮುರುಘಾ ಮಠ
    ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
    22 hours ago
    ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
    ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
    22 hours ago
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    6 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    5 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    7 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    12 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    7 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    5 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    gaining weight
    ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
    10 hours ago
    kidney problems
    ಕಿಡ್ನಿ ಸಮಸ್ಯೆ ಇರುವವರು ಈ 4 ಅಂಶಗಳನ್ನು ಸಮತೋಲನದಲ್ಲಿಡಬೇಕು
    11 hours ago
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    1 day ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    1 day ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    2 days ago
Reading: 18 ವರ್ಷದ ಬಳಿಕ ಆಗ್ನೇಯ ಶಿಕ್ಷಕರ ಕ್ಷೇತ್ರ ಕಾಂಗ್ರೆಸ್ ವಶಕ್ಕೆ | ವೈಎಎನ್‌ಗೆ ಸೋಲಿನ ದಾರಿ ತೋರಿಸಿದ ಡಿಟಿಎಸ್‌ | ‘ಈ ಗೆಲುವು ನಿಮ್ಮದು’ ಎಂದು ಪೋಸ್ಟ್ ಹಾಕಿದ ಶ್ರೀನಿವಾಸ್‌
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

18 ವರ್ಷದ ಬಳಿಕ ಆಗ್ನೇಯ ಶಿಕ್ಷಕರ ಕ್ಷೇತ್ರ ಕಾಂಗ್ರೆಸ್ ವಶಕ್ಕೆ | ವೈಎಎನ್‌ಗೆ ಸೋಲಿನ ದಾರಿ ತೋರಿಸಿದ ಡಿಟಿಎಸ್‌ | ‘ಈ ಗೆಲುವು ನಿಮ್ಮದು’ ಎಂದು ಪೋಸ್ಟ್ ಹಾಕಿದ ಶ್ರೀನಿವಾಸ್‌

News Desk Chitradurga News
Last updated: 7 June 2024 10:37
News Desk Chitradurga News
2 years ago
Share
MLC DTS-YAN
ಡಿ.ಟಿ.ಶ್ರೀನಿವಾಸ್‌ - ವೈ.ಎ.ನಾರಾಯಣಸ್ವಾಮಿ
SHARE

CHITRADURGA NEWS | 07 JUNE 2024
ಚಿತ್ರದುರ್ಗ:‌ ಬಿಜೆಪಿ ಭದ್ರಕೋಟೆಯಾಗಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರವನ್ನು ‘ಕೈ’ ಪಡೆ ವಶಕ್ಕೆ ಪಡೆದಿದೆ. ಮೈತ್ರಿ ಅಭ್ಯರ್ಥಿಯಾಗಿ ಗೆಲುವಿನ ಹುಮ್ಮಸ್ಸಿನಲ್ಲಿ ಅಖಾಡಕ್ಕೆ ಧುಮುಕಿದ್ದ ಬಿಜೆಪಿಯು ವೈ.ಎ.ನಾರಾಯಣಸ್ವಾಮಿ ಅವರಿಗೆ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಡಿ.ಟಿ.ಶ್ರೀನಿವಾಸ್‌ 18 ವರ್ಷದ ಬಳಿಕ ಸೋಲಿನ ದಾರಿ ತೋರಿಸಿದ್ದಾರೆ.

ಆಗ್ನೇಯ ಶಿಕ್ಷಕರ ಕ್ಷೇತ್ರ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಬೆಂಗಳೂರಿನ ಕಲಾ ಕಾಲೇಜು ಆವರಣದಲ್ಲಿ ಗುರುವಾರ ಬೆಳಿಗ್ಗೆ 8ಗಂಟೆಗೆ ಆರಂಭವಾಗಿತ್ತು. ಶುಕ್ರವಾರ ಮುಂಜಾನೆ ಫಲಿತಾಂಶ ಘೋಷಣೆಯಾಗಿದೆ.

ಚಿತ್ರದುರ್ಗ(ಮೊಳಕಾಲ್ಮುರು, ಚಳ್ಳಕೆರೆ, ಚಿತ್ರದುರ್ಗ, ಹೊಳಲ್ಕೆರೆ, ಹಿರಿಯೂರು, ಹೊಸದುರ್ಗ), ಚಿಕ್ಕಬಳ್ಳಾಪುರ (ಗೌರಿಬಿದನೂರು, ಬಾಗೇಪಲ್ಲಿ, ಗುಡಿಬಂಡೆ, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಚಿಂತಾಮಣಿ), ಕೋಲಾರ (ಶ್ರೀನಿವಾಸಪುರ, ಮುಳಬಾಗಿಲು, ಕೋಲಾರ, ಮಾಲೂರು, ಬಂಗಾರಪೇಟೆ, ಕೆ.ಜಿ.ಎಫ್‌), ತುಮಕೂರು (ಪಾವಗಡ, ಮಧುಗಿರಿ, ಶಿರಾ, ಚಿಕ್ಕನಾಯಕನಳ್ಳಿ, ತಿಪಟೂರು, ತುರುವೆಕೆರೆ, ಕುಣಿಗಲ್‌, ಗುಬ್ಬಿ, ತುಮಕೂರು, ಕೊರಟಗೆರೆ) ಹಾಗೂ ದಾವಣಗೆರೆ ಜಿಲ್ಲೆ (ದಾವಣಗೆರೆ, ಹರಿಹರ, ಜಗಳೂರು ತಾಲೂಕು) ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಸೇರಿವೆ.

ಕ್ಲಿಕ್ ಮಾಡಿ ಓದಿ: ಕೋಟೆನಾಡಿಗೆ ಐದು ದಿನ ‘ಯೆಲ್ಲೊ ಅಲರ್ಟ್’ | ಭಾರಿ ಮಳೆಯಾಗುವ ಸಾಧ್ಯತೆ

ಈ ಜಿಲ್ಲೆಯ ವ್ಯಾಪ್ತಿಯುಳ್ಳ ಕ್ಷೇತ್ರದ ಚುನಾವಣೆ ಜೂನ್‌ 3ರಂದು ನಡೆದಿತ್ತು. ಐದು ಜಿಲ್ಲೆಗಳಿಂದ ಶೇ 95.27ರಷ್ಟು ಮತದಾನವಾಗಿದೆ. ಇಲ್ಲಿ ಮತದಾರರಾಗಿರುವ ಪ್ರೌಢಶಾಲಾ ಶಿಕ್ಷಕರು, ಪಿಯು ಕಾಲೇಜುಗಳ ಉಪನ್ಯಾಸಕರು, ಪದವಿ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳ ಬೋಧಕ ವರ್ಗದವರು ಪಕ್ಷಕ್ಕಿಂತ ವ್ಯಕ್ತಿಗೆ ಮಣೆ ಹಾಕಿರುವುದು ಫಲಿತಾಂಶದಲ್ಲಿ ಬಿಂಬಿತವಾಗಿದೆ.

ಇದು ಪ್ರಾಶಸ್ತ್ಯದ ಮತದಾನ ಆಗಿದ್ದ ಕಾರಣ ಫಲಿತಾಂಶ ವಿಳಂಭವಾಗಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದ ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಾಗ ಕಾಂಗ್ರೆಸ್‌ನ ಡಿ.ಟಿ. ಶ್ರೀನಿವಾಸ್ 2,733 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ವೈ.ಎ. ನಾರಾಯಣಸ್ವಾಮಿ 1,973 ಮತಗಳನ್ನು ಪಡೆದು 760 ಮತಗಳ ಹಿನ್ನಡೆ ಅನುಭವಿಸಿದ್ದರು. ಒಟ್ಟು 25,309 ಮತಗಳಲ್ಲಿ 24 ಸಾವಿರಕ್ಕೂ ಅಧಿಕ ಮತ ಚಲಾವಣೆ ಆಗಿತ್ತು.

ಕಳೆದ ಆಗ್ನೇಯ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ವೈ.ಎ.ನಾರಾಯಣಸ್ವಾಮಿ ಬಿಜೆಪಿಯಿಂದ ಸ್ಪರ್ಧಿಸಿದ್ದರೆ, ಕಾಂಗ್ರೆಸ್‍ನಿಂದ ಡಿ.ಟಿ.ಶ್ರೀನಿವಾಸ್, ಕಿಶನ್‌ ಎಂ.ಜಿ (ಕರ್ನಾಟಕ ರಾಷ್ಟ್ರ ಸಮಿತಿ), ಪಕ್ಷೇತರರು: ಜಿ.ಎಚ್‌.ಇಮ್ರಾಪುರ್, ಕಪನಿಗೌಡ, ಎನ್.ಇ.ನಟರಾಜ್, ವೈ.ಆರ್‌.ನಾರಾಯಣಸ್ವಾಮಿ, ವೈ.ಎಂ.ನಾರಾಯಣಸ್ವಾಮಿ, ವೈ.ಸಿ.ನಾರಾಯಣಸ್ವಾಮಿ, ಬಾಬು ಯೋಗೀಶ್‌ ಆರ್‌, ಲೋಕೇಶ್‌ ತಾಳಿಕಟ್ಟೆ, ವನಿತಾ ಎಸ್‌, ವಿನೋದ್‌ ಶಿವರಾಜ್, ಶ್ರೀನಿವಾಸ್‌ ಬಿ, ಸೈಯದ್‌ ಅಫ್ಕ್ ಅಹಮದ್ ಸೇರಿ 25 ಅಭ್ಯರ್ಥಿಗಳು ಕಣದಲ್ಲಿದ್ದರು. ಆದರೆ ನಾಲ್ಕನೇ ಬಾರಿ ಗೆಲುವಿನ ವಿಶ್ವಾಸದಲ್ಲಿದ್ದ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಅವರಿಗೆ ಶಿಕ್ಷಕ ಕ್ಷೇತ್ರದ ಮತದಾರರು ಮಣೆ ಹಾಕಿಲ್ಲ.

ಕ್ಲಿಕ್ ಮಾಡಿ ಓದಿ: ಮೂರನೇ ಸ್ಥಾನ ತಂದ ಮೂರು ಅಂಕ | ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನ ಎಫೆಕ್ಟ್‌

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಆರಂಭದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದ ವೈ.ಎ.ನಾರಾಯಣಸ್ವಾಮಿ, ನಂತರದ ದಿನಗಳಲ್ಲಿ ಅಧಿಕೃತವಾಗಿ ಬಿಜೆಪಿಯಿಂದ ಸ್ಪರ್ಧಿಸಿದರು. ಸತತ18 ವರ್ಷಗಳಿಂದ ಕ್ಷೇತ್ರವನ್ನು ಯಾರಿಗೂ ಬಿಟ್ಟುಕೊಟ್ಟಿರಲಿಲ್ಲ. ಈ ಬಾರಿ ಕೂಡ ಗೆಲುವಿನ ನಾಗಾಲೋಟ ತಡೆಯುವವರಿಲ್ಲ ಎನ್ನುವ ಉತ್ಸಾಹದಲ್ಲಿದ್ದರು.

MLC DTS
ಈ ಗೆಲುವು ನಿಮ್ಮದು ಎಂದು ಕೃತಜ್ಞತೆ ಸಲ್ಲಿಸಿದ ಡಿ.ಟಿ.ಶ್ರೀನಿವಾಸ್‌

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಜತೆಗೆ ತಮ್ಮ ಪ್ರಣಾಳಿಕೆಯಲ್ಲಿನ ಅಂಶಗಳನ್ನೂ ಮುಂದಿಟ್ಟು ಮತಯಾಚಿಸಿದ್ದರು. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಅವಧಿಯಲ್ಲಿ ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳ ಪರವಾಗಿ ತೆಗೆದುಕೊಂಡ ನೀತಿ-ನಿರ್ಣಯಗಳ ಬಗ್ಗೆಯೂ ಪ್ರಸ್ತಾಪಿಸಿದ್ದರು. ಅಷ್ಟೇ ಅಲ್ಲದೆ, ರಾಜ್ಯ ಸರ್ಕಾರದ ಗ್ಯಾರಂಟಿ ಅನುಷ್ಠಾನ, ಕಾನೂನು ಸುವ್ಯವಸ್ಥೆ ಕಾಪಾಡುವಿಕೆ ಸೇರಿದಂತೆ ವಿವಿಧ ಹಂತಗಳಲ್ಲಿ ವೈಫಲ್ಯ ಕಂಡಿರುವ ಬಗ್ಗೆಯೂ ಪ್ರಚಾರದ ಅಸ್ತ್ರವನ್ನಾಗಿ ಬಳಸಿಕೊಂಡಿದ್ದರು. ಜತೆಗೆ ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಕರ ಪರವಾಗಿ ಕೈಗೊಳ್ಳುವ ಯೋಜನೆಗಳ ಭರವಸೆಗಳನ್ನೂ ನೀಡಿದ್ದರು.

ಆದರೆ ಶಿಕ್ಷಕರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ನಾರಾಯಣಸ್ವಾಮಿ ವಿಫಲರಾಗಿದ್ದಾರೆ ಎನ್ನುವುದನ್ನು ಮತದಾರ ಮುಂದಿಡುವ ಪ್ರಯತ್ನ ಮಾಡಿದ್ದ ಶ್ರೀನಿವಾಸ್‌ ಲೆಕ್ಕಚಾರ ಸರಿಯಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿಯನ್ನೂ ಪ್ರಚಾರದ ಅಸ್ತ್ರವನ್ನಾಗಿ ಬಳಸಿಕೊಂಡಿದ್ದರು. ಅಲ್ಲದೆ, ಕಳೆದ ಬಾರಿಸೋತ ತಮಗೆ ಈ ಬಾರಿ ಅವಕಾಶ ನೀಡುವಂತೆ ಮನವಿ ಮಾಡಿದ್ದರು.

ಪ್ರಚಾರಕ್ಕೆ ಪತ್ನಿ ಹಾಗೂ ಮಾಜಿ ಶಾಸಕಿ ಪೂರ್ಣಿಮಾ ಕೂಡ ಸಾಥ್ ನೀಡಿದ್ದರು. ರಾಜ್ಯ ಗೊಲ್ಲರ ಸಂಘದ ಅಧ್ಯಕ್ಷರೂ ಆಗಿರುವ ಶ್ರೀನಿವಾಸ್ ಅವರಿಗೆ ದಾವಣಗೆರೆ, ಚಿತ್ರದುರ್ಗದಲ್ಲಿ ಸಮುದಾಯದ ಮತಗಳನ್ನೂ ಅವರು ನೆಚ್ಚಿಕೊಂಡಿದ್ದರು. ಅತಿಥಿ ಶಿಕ್ಷಕರ ಕಾಯಂ, ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಅನುದಾನಿತ ಪಟ್ಟಿಗೆ ಸೇರಿಸುವುದು, ಕಾಲ್ಪನಿಕ ವೇತನ, 7ನೇ ವೇತನ ಆಯೋಗ ಮತ್ತಿತರ ವಿಚಾರಗಳನ್ನೂ ಪ್ರಚಾರದ ವೇಳೆ ಪ್ರಸ್ತಾಪಿಸಿದ್ದರು.

ಬಿಜೆಪಿಯ ನಾರಾಯಣಸ್ವಾಮಿ ಅವರು ಮೈತ್ರಿ ಅಭ್ಯರ್ಥಿಯಾಗಿದ್ದರಿಂದ ಜೆಡಿಎಸ್‌ನಿಂದ ಯಾವುದೇ ಅಭ್ಯರ್ಥಿಯನ್ನೂ ಈ ಬಾರಿ ಕಣಕ್ಕಿಳಿಸಿರಲಿಲ್ಲ. ಬದಲಿಗೆ ನಾರಾಯಣಸ್ವಾಮಿ ಅವರಿಗೆ ಪೂರ್ಣ ಬೆಂಬಲ ವ್ಯಕ್ತಪಡಿಸಿತ್ತು. ಬಿಜೆಪಿ ಹಾಗೂ ಜೆಡಿಎಸ್‌ನ ನಾಯಕರು ಜಂಟಿಯಾಗಿ ಪ್ರಚಾರ ನಡೆಸಿದ್ದರು. ಅಂತಿಮವಾಗಿ ವಿಜಯ ಮಾಲೆ ಕಾಂಗ್ರೆಸ್‌ನ ಡಿ.ಟಿ. ಶ್ರೀನಿವಾಸ ಒಲಿದಿದೆ.

ಕ್ಲಿಕ್ ಮಾಡಿ ಓದಿ: ಜಿಲ್ಲಾ ಆಸ್ಪತ್ರೆಯಲ್ಲಿ ಹೃದಯ ತಪಾಸಣೆ ಕ್ಲಿನಿಕ್ ಪ್ರಾರಂಭ

ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಡಿ.ಟಿ.ಶ್ರೀನಿವಾಸ್‌ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಈ ಗೆಲುವು ನಿಮ್ಮದು ಎಂದು ಪೋಸ್ಟ್‌ ಹಾಕಿ ಶಿಕ್ಷಕ ಮತದಾರರಿಗೆ ಧನ್ಯವಾದ ಸಲ್ಲಿಸಿದ್ದಾರೆ.

‘ವಿಧಾನಪರಿಷತ್ ಚುನಾವಣೆ 2024ರ ಆಗ್ನೇಯ ಶಿಕ್ಷಕರ ಕ್ಷೇತ್ರದ ಎಲ್ಲ ನನ್ನ ಆತ್ಮೀಯ ಮತದಾರ ಶಿಕ್ಷಕ ಬಂಧುಗಳಿಗೆ ನಮ್ಮ ಅನಂತ ಅನಂತ ಧನ್ಯವಾದಗಳು. ನಮ್ಮ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಕಾಂಗ್ರೆಸ್‌ ಪಕ್ಷದ ಮುಖಂಡರುಗಳಿಗೆ ಹಾಗೂ ಕಾರ್ಯಕರ್ತರುಗಳಿಗೆ ನನ್ನ ವಿಶೇಷ ಧನ್ಯವಾದಗಳು. ನಮ್ಮ ಬೆಂಬಲವಾಗಿ ನಿಂತ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯ ಅವರಿಗೆ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ.ಶಿವಕುಮಾರ್‌ ಅವರಿಗೆ ಮತ್ತು ಸಚಿವ ಸಂಪುಟದ ಎಲ್ಲಾ ಸಚಿವರು ಶಾಸಕರುಗಳಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ವಿಶೇಷವಾಗಿ ಕೋಲಾರ,ಚಿಕ್ಕಬಳ್ಳಾಪುರ ತುಮಕೂರು,ಚಿತ್ರದುರ್ಗ,ದಾವಣಗೆರೆ ಭಾಗದ ಎಲ್ಲಾ ಶಾಸಕರುಗಳಿಗೆ ಹಾಗೂ ಜಿಲ್ಲಾ ಮಂತ್ರಿಗಳಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಮೊದಲ ಪ್ರಾಶಸ್ತ್ರದ ಮತಗಳಲ್ಲೇ ಗೆಲುವಿನ ನಗೆ ಬೀರಿದ್ದಾರೆ. 4,622 ಮತಗಳ ಅಂತರದಿಂದ ಗೆದ್ದಿದ್ದಾರೆ. ಸತತ 5ನೇ ಬಾರಿಗೆ ಆಯ್ಕೆ ಬಯಸಿದ್ದ ಕಾಂಗ್ರೆಸ್‌ನ ಮರಿತಿಬ್ಬೇಗೌಡ ಸೋಲನುಭವಿಸಿದ್ದಾರೆ.

ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್‌ನ ಎಸ್ ಎಲ್ ಭೋಜೇಗೌಡ 5,267 ಮತಗಳಿಂದ ಗೆಲುವು ಸಾಧಿಸಿದರು. ಮೊದಲ ಪ್ರಾಶಸ್ತ್ರ ಮತಗಳಲ್ಲೇ ಗೆಲುವು ಪಡೆದ ಅವರು, 9,829 ಮತ ಗಳಿಸಿದರು. ಕಾಂಗ್ರೆಸ್ ಅಭ್ಯರ್ಥಿ ಕೆ ಕೆ ಮಂಜುನಾಥ್ ಕುಮಾರ್ 4,562 ಮತ ಪಡೆದರು. 19,479 ಮತಳು ಚಲಾವಣೆ ಆಗಿದ್ದವು. ಅದರಲ್ಲಿ 821 ಮತಗಳು ಅಸಿಂಧುವಾಗಿದ್ದವು.

ಕಾಂಗ್ರೆಸ್‌ನ ಡಿ.ಟಿ.ಶ್ರೀನಿವಾಸ್‌ ಗೆಲುವು ಸಾಧಿಸುತ್ತಿದ್ದಂತೆ ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಮತದಾರರು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJPcongressJDSresultSouth East Teachers Constituencyಆಗ್ನೇಯ ಶಿಕ್ಷಕರ ಕ್ಷೇತ್ರಕಾಂಗ್ರೆಸ್ಜೆಡಿಎಸ್ಫಲಿತಾಂಶಬಿಜೆಪಿ
Share This Article
Facebook Email Print
Previous Article ಮಳೆ ಕೋಟೆನಾಡಿಗೆ ಐದು ದಿನ ಯೆಲ್ಲೊ ಅಲರ್ಟ್ | ಭಾರಿ ಮಳೆಯಾಗುವ ಸಾಧ್ಯತೆ
Next Article govt hosptial ಶೌಚಾಲಯದ ಬಳಿ ನವಜಾತ ಶಿಶು ಪತ್ತೆ | ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಘಟನೆ
Leave a Comment

Leave a Reply Cancel reply

Your email address will not be published. Required fields are marked *

ರಂಗೋಲಿ ಸ್ಪರ್ಧೆ ಕಾರ್ಯಕ್ರಮ
ಮುರುಘಾಮಠವು ಬಸವಾದಿ ಶರಣರ ತತ್ವ, ಚಿಂತನೆಗಳ ಪ್ರಯೋಗಶಾಲೆ | ಡಾ.ಬಸವಕುಮಾರ ಶ್ರೀ 
ಮುಖ್ಯ ಸುದ್ದಿ
gaining weight
ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
Life Style
kidney problems
ಕಿಡ್ನಿ ಸಮಸ್ಯೆ ಇರುವವರು ಈ 4 ಅಂಶಗಳನ್ನು ಸಮತೋಲನದಲ್ಲಿಡಬೇಕು
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up