CHITRADURGA NEWS | 20 AUGUST 2024
ಚಿತ್ರದುರ್ಗ: ಕೇಂದ್ರ ಬಜೆಟ್ನಲ್ಲಿ ನೈರುತ್ಯ ರೈಲ್ವೆಗೆ ₹6,493.87 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ, ಇದರಲ್ಲಿ ಹೊಸ ಮಾರ್ಗ ನಿರ್ಮಾಣಕ್ಕೆ ₹1,448.89 ಕೋಟಿ ನಿಗದಿಪಡಿಸಲಾಗಿದೆ. ರೈಲು ಹಳಿ ದ್ವಿಪಥವಾಗಿ ಮೇಲ್ದರ್ಜೆಗೇರಿಸಲು ₹1,241 ಕೋಟಿ, ಪ್ರಯಾಣಿಕರ ಸೌಲಭ್ಯಗಳ ಅಭಿವೃದ್ಧಿಗೆ ₹961.22 ಕೋಟಿ ನಿಗದಿಪಡಿಸಲಾಗಿದೆ.
ತುಮಕೂರು–ದಾವಣಗೆರೆ (ಚಿತ್ರದುರ್ಗ ಮಾರ್ಗವಾಗಿ) ಹೊಸ ಮಾರ್ಗಕ್ಕೆ ₹ 150 ಕೋಟಿ ಮೀಸಲಿಡಲಾಗಿದೆ. ಉಳಿದಂತೆ ಹಾಸನ– ಬೆಂಗಳೂರು (ಶ್ರವಣಬೆಳಗೊಳ ಮಾರ್ಗವಾಗಿ), ಹುಬ್ಬಳ್ಳಿ–ಅಂಕೋಲಾ ಹಾಗೂ ಬೆಳಗಾವಿ–ಧಾರವಾಡ (ಕಿತ್ತೂರು ಮಾರ್ಗವಾಗಿ) ನೂತನ ಮಾರ್ಗ ನಿರ್ಮಾಣಕ್ಕಾಗಿ ತಲಾ ₹20 ಕೋಟಿ, ಗದಗ (ತಳಕಲ್) –ವಾಡಿ ಮಾರ್ಗಕ್ಕಾಗಿ ₹200 ಕೋಟಿ, ಬಾಗಲಕೋಟೆ–ಕುಡಚಿ, ಗದಗ–ಯಲವಿಗಿ, ಶಿವಮೊಗ್ಗ–ಶಿಕಾರಿಪುರ–ರಾಣೆಬೆನ್ನೂರು ಮಾರ್ಗಗಳಿಗೆ ತಲಾ (₹150 ಕೋಟಿ), ಕಡೂರು–ಚಿಕ್ಕಮಗಳೂರು–ಹಾಸನ (₹70 ಕೋಟಿ), ತುಮಕೂರು–ರಾಯದುರ್ಗ (ಕಲ್ಯಾಣದುರ್ಗ ಮಾರ್ಗವಾಗಿ) ₹250 ಕೋಟಿ, ಮಾರಿಕುಪ್ಪಮ್–ಕುಪ್ಪಮ್ (₹60 ಕೋಟಿ), ಮಲಗೂರು–ಪಾಲಸಮುದ್ರಮ್ (₹21 ಕೋಟಿ), ಮುನಿರಾಬಾದ್–ಮಹಬೂಬನಗರ (₹100 ಕೋಟಿ) ಹೊಸ ಮಾರ್ಗಕ್ಕೆ ಮೀಸಲಿಡಲಾಗಿದೆ.
ಕ್ಲಿಕ್ ಮಾಡಿ ಓದಿ: ಪೈಪೋಟಿ ನಡುವೆ ಅವಿರೋಧ ಆಯ್ಕೆ | ನಗರಸಭೆಯಲ್ಲಿ ಒಗ್ಗಟ್ಟು ಪ್ರದರ್ಶನ

ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಯಂತಹ ಕಾಮಗಾರಿಗೆ ₹349.40 ಕೋಟಿ ಮತ್ತು ಸಂಚಾರ ಸೌಲಭ್ಯಕ್ಕೆ ₹145.84 ಕೋಟಿ ಮೀಸಲಿಡಲಾಗಿದೆ. ಅಮೃತ ಭಾರತ ಯೋಜನೆಯಡಿ 51 ನಿಲ್ದಾಣಗಳ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರಿನ ಕಂಟೋನ್ಮೆಂಟ್ ಮತ್ತು ಯಶವಂತಪುರ ನಿಲ್ದಾಣಗಳ ಅಭಿವೃದ್ಧಿ ಕಾರ್ಯ ಆರಂಭವಾಗಿವೆ. ರೈಲ್ವೆ ಸಚಿವಾಲಯದ ಅನುಮತಿ ಮೇರೆಗೆ ಬೆಂಗಳೂರು ವಿಭಾಗದ ಗುಬ್ಬಿ ಮತ್ತು ಶ್ರವಣಬೆಳಗೊಳ ನಿಲ್ದಾಣವನ್ನು ಈಚೆಗಷ್ಟೇ ಯೋಜನೆಗೆ ಸೇರಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮಾನತು | ಕರ್ತವ್ಯ ಲೋಪದ ಆರೋಪ
ಗದಗ–ಹೊಟಗಿ (₹170 ಕೋಟಿ), ಬೈಯಪ್ಪನಹಳ್ಳಿ–ಹೊಸೂರು ಹಾಗೂ ಬೆಂಗಳೂರು ಕಂಟೋನ್ಮೆಂಟ್–ವೈಟ್ಫೀಲ್ಡ್ (ನಾಲ್ಕು ಮಾರ್ಗಕ್ಕಾಗಿ) ತಲಾ (₹200 ಕೋಟಿ), ಹೊಸಪೇಟೆ–ತಿನೈಘಾಟ್–ವಾಸ್ಕೊ ಡ ಗಾಮಾ (₹400 ಕೋಟಿ), ಹುಬ್ಬಳ್ಳಿ–ಚಿಕ್ಕಜಾಜೂರು, ಅರಸೀಕೆರೆ–ತುಮಕೂರು ಹಾಗೂ ಯಲಹಂಕ–ಪೆನುಕೊಂಡ ಮಾರ್ಗಕ್ಕೆ ತಲಾ ₹20 ಕೋಟಿ, ಯಶವಂತಪುರ–ಚನ್ನಸಂದ್ರ ಹಾಗೂ ಪೆನುಕೊಂಡ–ಧರ್ಮಾವರಮ್ ಮಾರ್ಗ ದ್ವಿಪಥಕ್ಕಾಗಿ ₹100 ಕೋಟಿ ಮೀಸಲಿರಿಸಲಾಗಿದೆ’ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
