
ಚಿತ್ರದುರ್ಗ ನ್ಯೂಸ್.ಕಾಂ: ಹೊಳಲ್ಕೆರೆ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಸಿಕ್ಕಿದ ಭಾರೀ ಮೊತ್ತದ ಹಣವನ್ನು ಬುಧವಾರ ತಡರಾತ್ರಿವರೆಗೆ ಪೊಲೀಸರು ಎಣಿಕೆ ಮಾಡಿದ್ದು, 7,99,96000 ರೂ. ಪತ್ತೆಯಾಗಿದೆ.
ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಖಚಿತ ಮಾಹಿತಿ ಮೇರೆಗೆ ಜಿಲ್ಲೆಯಾದ್ಯಂತ ಎಲ್ಲ ಪೊಲೀಸ್ ಠಾಣೆಗಳಿಗೆ ಅಲರ್ಟ್ ಮಾಡಲಾಗಿದೆ.
ಇದನ್ನೂ ಓದಿ: ದಾಖಲೆ ಇಲ್ಲದ 8 ಕೋಟಿ ರೂ. ಜಪ್ತಿ | ಹೊಳಲ್ಕೆರೆ ಪೊಲೀಸರ ಕಾರ್ಯಾಚರಣೆ

ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ಬಿಳಿ ಬಣ್ಣದ ಇನ್ನೋವಾ ಕಾರು ತಡೆದಾಗ ಅದರಲ್ಲಿ ಸುಮಾರು 8 ಕೋಟಿ ಹಣವನ್ನು ತಂಬಾಕು ಬ್ಯಾಗುಗಳಲ್ಲಿ ತುಂಬಿಡಲಾಗಿತ್ತು.
ಕಾರಿನಲ್ಲಿದ್ದ ಹಣ ಜಪ್ತಿ ಮಾಡಿ, ಚಾಲಕ ಹೊಳಲ್ಕೆರೆ ತಾಲ್ಲೂಕು ತೇಕಲವಟ್ಟಿ ಗೊಲರಹಟ್ಟಿಯ ಸಚಿನ್ ಹಾಗೂ ಹರೀಶ್ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ಸದ್ಯ ಕಾರು ಓಡಿಸುತ್ತಿದ್ದ ಸಚಿನ್ ನೀಡಿರುವ ಮಾಹಿತಿಯಂತೆ, ಶಿವಮೊಗ್ಗದ ಮಲ್ನಾಡ್ ಟ್ರೇಡರ್ಸ್ ನ ಸುರೇಶ್ ಎಂಬುವವರಿಗೆ ಸೇರಿದೆ.
ಅಡಕೆ ಖರೀಧಿಗಾಗಿ ಈ ಹಣವನ್ನು ಕೊಟ್ಟಿದ್ದರು, ಆದರೆ, ಅಡಕೆ ಖರೀಧಿ ಮಾಡಲಾಗದ ಕಾರಣ ವಾಪಾಸು ತಲುಪಿಸಲು ಹೋಗುತ್ತಿದ್ದೆವು ಎಂದು ಮಾಹಿತಿ ನೀಡಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸೂಕ್ತ ದಾಖಲಾತಿಗಳನ್ನು ನೀಡುವಂತೆ ಸುರೇಶ್ ಅವರಿಗೂ ನೋಟೀಸ್ ನೀಡಲಾಗಿದೆ. ಹತ್ತು ಲಕ್ಷಕ್ಕಿಂತ ಹೆಚ್ಚು ನಗದು ಹಣ ವಹಿವಾಟು ಮಾಡಿರುವ ಕಾರಣ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ.
ಪೂರ್ಣ ಮಾಹಿತಿ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತದೆ. ಹಣದ ಮೂಲ್ ಬಗ್ಗೆ ತನಿಖೆ ನಡೆಸಿ ಸಂಪೂರ್ಣ ಮಾಹಿತಿ ಪಡೆಯುವುದು ಬಾಕಿಯಿದೆ ಎಂದು ಹೇಳಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
