ಹೊಸದುರ್ಗ ಸ್ಥಬ್ದ | ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್‌

ಹೊಸದುರ್ಗ ಮುಖ್ಯ ರಸ್ತೆ ಬಂದ್‌ ಆಗಿರುವುದು.

CHITRADURGA NEWS | 28 JUNE 2025

ಹೊಸದುರ್ಗ: ಭದ್ರಾ ಜಲಾಶಯದಿಂದ ಹೊಸದುರ್ಗಕ್ಕೆ ಕುಡಿಯುವ ನೀರು ತರಲು ಅಡ್ಡಿ ಮಾಡುತ್ತಿರುವುದನ್ನು ವಿರೋಧಿಸಿ ಕರೆ ಕೊಟ್ಟಿರುವ ಬಂದ್‌ಗೆ ಹೊಸದುರ್ಗ ಪಟ್ಟಣ ಸ್ಥಬ್ದವಾಗಿದೆ.

ಬೆಳಗಿನಿಂದಲೇ ಬೀದಿ ಬದಿ ವ್ಯಾಪಾರಿಗಳು, ಅಂಗಡಿ ಮುಂಗಟ್ಟುಗಳು, ಆಟೋ ಸೇರಿದಂತೆ ಎಲ್ಲಾ ವಾಹನಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಭದ್ರಾ ಜಲಾಶಯದಿಂದ ಹೊಸದುರ್ಗ ಪಟ್ಟಣ ಹಾಗೂ ತಾಲೂಕಿನ 346 ಗ್ರಾಮಗಳ ಕುಡಿಯುವ ನೀರಿನ ಯೋಜನೆಗೆ ದಾವಣಗೆರೆಯ ಕೆಲ ರೈತರು ಅಡ್ಡಿಪಡಿಸಿದ್ದನ್ನು ವಿರೋಧಿಸಿ ಹೊಸದುರ್ಗ ಪಟ್ಟಣ ಬಂದ್‌ ಕರೆ ಕೊಡಲಾಗಿದೆ.

ಹೊಸದುರ್ಗದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್.

ಬಂದ್‌ಗೆ ಬೆಳಗ್ಗೆಯೇ ಉತ್ತಮ ಸ್ಪಂಧನೆ ಸಿಕ್ಕಿದ್ದು, ಪಟ್ಟಣದ ಮುಖ್ಯ ರಸ್ತೆ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಅಂಗಡಿ, ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್‌ ಆಗಿವೆ.

ಇದನ್ನೂ ಓದಿ: ಕುಡಿಯುವ ನೀರಿನ ರಾಜಕೀಯ | ಭದ್ರಾ ನೀರು ಹರಿಸಲು ಅಡ್ಡಿ | ಅವಳಿ ಜಿಲ್ಲೆಗಳಲ್ಲಿ ಬೀದಿಗಿಳಿದು ಹೋರಾಟ

ಜಿಲ್ಲೆ, ತಾಲೂಕಿನ ರೈತರು, ಕಾರ್ಮಿಕರು, ಕನ್ನಡ ಪರ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು, ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳು ಈ ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.

ಹೊಸದುರ್ಗ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್.

ಶಾಸಕ ಬಿ.ಜಿ.ಗೋವಿಂದಪ್ಪ ಅವರ ನೇತೃತ್ವದಲ್ಲಿ ರೈತ ಮುಖಂಡರು ಕರೆ ಕೊಟ್ಟಿರುವ ಈ ಬಂದ್‌ ಮೂಲಕ ಕುಡಿಯುವ ನೀರಿಗೆ ಅಡ್ಡಿ ಪಡಿಸುತ್ತಿರುವವರಿಗೆ ಉತ್ತರ ಕೊಡುವ ಕೆಲಸ ಆಗುತ್ತಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version