CHITRADURGA NEWS | 16 JUNE 2025
ಚಿತ್ರದುರ್ಗ: ಭಾರತೀಯ ಸಂಸ್ಕೃತಿ, ಪರಂಪರೆಯ ಧ್ಯೋತಕವಾಗಿ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಯೋಗ ದಿನೇ ದಿನೇ ಜಾಗತಿಕ ಮನ್ನಣೆ ಗಳಿಸುತ್ತಿದೆ.
ಈಗ ಅಂತಾರಾಷ್ಟ್ರ ಮಟ್ಟದಲ್ಲೂ ಯೋಗ ಸಮ್ಮೇಳನ, ಸ್ಪರ್ಧೆಗಳನ್ನು ಆಯೋಜಿಸುತ್ತಿದ್ದು, ಅಲ್ಲಿಯೂ ಭಾರತೀಯರು ಪಾರಮ್ಯ ಮೆರೆಯುತ್ತಿದ್ದಾರೆ.

ಇದನ್ನೂ ಓದಿ: ಉಚಿತ ಯೋಗ ತರಬೇತಿ ಶಿಬಿರ | ಹಿರಿಯ ವೈದ್ಯಾಧಿಕಾರಿ ಡಾ.ವಿಜಯಲಕ್ಷ್ಮಿ ಉದ್ಘಾಟನೆ
ಇದಕ್ಕೆ ಕೋಟೆನಾಡಿನ ಕುವರಿ ಶ್ರೀಧಾ ಕೂಡಾ ಸೇರ್ಪಡೆ ಆಗಿರುವುದು ಜಿಲ್ಲೆಯ ಮಟ್ಟಿಗೆ ಹೆಮ್ಮೆಯ ಸಂಗತಿ.
ವಿಯೇಟ್ನಾಂ ದೇಶದ ವೊಚಿಗನ್ ನಗರದಲ್ಲಿ ಜೂ.7 ರಂದು ನಡೆದ ಎರಡನೇ ಅಂತರಾಷ್ಟ್ರೀಯ ಯೋಗ ಸಮ್ಮೇಳನ ಹಾಗೂ ಸ್ಪರ್ಧೆಯಲ್ಲಿ ಕೋಟೆನಾಡಿನ ಪ್ರತಿಭೆ ಎಚ್.ಎಂ.ಶ್ರೀಧಾ ಚಿನ್ನದ ಪದಕ ಗೆದ್ದಿದ್ದಾರೆ.
ಇದನ್ನೂ ಓದಿ: NEET RESULT | SLV PU ಕಾಲೇಜಿಗೆ ದಾಖಲೆಯ ಫಲಿತಾಂಶ
ವಿಯೇಟ್ನಾಂ, ಆಸ್ಟ್ರೇಲಿಯಾ, ಕಾಂಬೋಡಿಯಾ ಹಾಗೂ ಭಾರತದ ಸ್ಪರ್ಧಿಗಳ ನಡುವೆ ನಡೆದ ಸ್ಪರ್ಧೆಯಲ್ಲಿ ಚಿತ್ರದುರ್ಗದ ಶ್ರೀಧಾ ವಿಜೇತರಾಗಿದ್ದಾರೆ.
ವಿ ಯೋಗ ವರ್ಲ್ಡ್ ಸಂಸ್ಥೆಯಿಂದ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಚಿತ್ರದುರ್ಗದ ಶ್ರೀಧಾ ಅವರ ಯೋಗ ಗುರು ಅನಿಲ್ಕುಮಾರ್ ರಾಯ್ಕರ್ ಕೂಡಾ ಭಾಗವಹಿಸಿದ್ದರು.
ಇದನ್ನೂ ಓದಿ: ಸೈನಸ್ಗೆ ಯಾವ ಯೋಗ ಹೆಚ್ಚು ಪರಿಣಾಮಕಾರಿ?
ಈ ಯೋಗ ಸ್ಪರ್ಧೆಯ ಸೀನಿಯರ್ ವಿಭಾಗದಲ್ಲಿ ಅನಿಲ್ ಕುಮಾರ್ ರಾಯ್ಕರ್ ಕೂಡಾ ಚಿನ್ನದ ಪದಕ ಗಳಿಸಿದ್ದಾರೆ.

ಈ ಮೂಲಕ ಗುರು ಹಾಗೂ ಶಿಷ್ಯೆ ಇಬ್ಬರೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಪರಾಕ್ರಮ ಮೆರೆದಿದ್ದಾರೆ.
ಇದನ್ನೂ ಓದಿ: ಮಗುವಿಗೆ ದಡಾರ ಬಂದಾಗ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂದು ತಿಳಿಯಿರಿ
ಚಿತ್ರದುರ್ಗ ನಗರದ ಮೆದೇಹಳ್ಳಿ ರಸ್ತೆಯಲ್ಲಿರುವ ಬಸವೇಶ್ವರ ಟ್ರೇಡಿಂಗ್ ಕಂಪನಿಯ ಪಾಲುದಾರರಾದ ಕೊಟ್ರೇಶ್ ಶೆಟ್ಟಿ ಅವರ ಮೊಮ್ಮಗಳಾಗಿರುವ ಶ್ರೀಧಾ ತಂದೆ ಮಲ್ಲಿಕಾರ್ಜುನ್ ಹಾಗೂ ತಾಯಿ ಪೃಥ್ವಿ.
ಸದ್ಯ ದಾವಣಗೆರೆಯಲ್ಲಿ ಎಸ್ಸೆಸ್ಸೆಲ್ಸಿ ಅಧ್ಯಯನ ಮಾಡುತ್ತಿದ್ದು, ತನ್ನ 8ನೇ ವಯಸ್ಸಿನಿಂದಲೇ ಯೋಗಾಭ್ಯಾಸದಲ್ಲಿ ತೊಡಗಿ ಅನೇಕ ಪ್ರಶಸ್ತಿ ಪುರಸ್ಕಾರ ಪಡೆದುಕೊಂಡಿದ್ದಾರೆ.
ಶ್ರೀಧಾ 20ಕ್ಕೂ ಹೆಚ್ಚು ಕಠಿಣ ಯೋಗಾಸನಗಳು ಸೇರಿದಂತೆ 200ಕ್ಕೂ ಹೆಚ್ಚು ಆಸನಗಳನ್ನು ಸುಲಲಿತವಾಗಿ ಮಾಡುವ ಕಲೆ ಕರಗತ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ವೀರಶೈವ ಅರ್ಬನ್ ಕ್ರೆಡಿಟ್ ಕೊ-ಆಪರೇಟಿವ್ ಬ್ಯಾಂಕ್ 89 ಲಕ್ಷ ನಿವ್ವಳ ಲಾಭ
ಕಳೆದ 8 ವರ್ಷಗಳಿಂದಲೂ ನಿತ್ಯ ಒಂದು ಗಂಟೆ ಯೋಗಾಭ್ಯಾಸಕ್ಕೆ ಮೀಸಲಿಟ್ಟಿದ್ದು, 2018ರಲ್ಲಿ ಮೈಸೂರು ದಸರಾ ಉತ್ಸವದಲ್ಲಿ ಯೋಗ ಪ್ರದರ್ಶನ ನೀಡಿ ಮೆಚ್ಚುಗೆ ಪಡೆದುಕೊಂಡಿದ್ದಾರೆ.
ಇದೇ ವರ್ಷ ಕಡೂರಿನ ಶ್ರೀ ರಾಘವೇಂದ್ರ ಯೋಗ ಸಂಸ್ಥೆಯಿಂದ ಆಯೋಜಿಸಿದ್ದ 6ನೇ ರಾಜ್ಯಮಟ್ಟದ ಯೋಗಾಸನ ಚಾಂಪಿಯನ್ಶಿಪ್ನಲ್ಲೂ ಪ್ರಥಮ ಸ್ಥಾನ ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
