By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಯೋಗ ಸಮ್ಮೇಳನದಲ್ಲಿ ಬಂಗಾರ ಗೆದ್ದ ಕೋಟೆನಾಡಿನ ಶ್ರೀಧಾ | ವಿಯೇಟ್ನಾಂನಲ್ಲಿ ನಡೆದ ಸ್ಪರ್ಧೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಯೋಗ ಸಮ್ಮೇಳನದಲ್ಲಿ ಬಂಗಾರ ಗೆದ್ದ ಕೋಟೆನಾಡಿನ ಶ್ರೀಧಾ | ವಿಯೇಟ್ನಾಂನಲ್ಲಿ ನಡೆದ ಸ್ಪರ್ಧೆ

ಮುಖ್ಯ ಸುದ್ದಿ

ಯೋಗ ಸಮ್ಮೇಳನದಲ್ಲಿ ಬಂಗಾರ ಗೆದ್ದ ಕೋಟೆನಾಡಿನ ಶ್ರೀಧಾ | ವಿಯೇಟ್ನಾಂನಲ್ಲಿ ನಡೆದ ಸ್ಪರ್ಧೆ

chitradurganews.com
Last updated: 16 June 2025 11:02
chitradurganews.com
5 days ago
Share
SHREEDHA HM AND ANIL
ಯೋಗ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಶ್ರೀಧಾ.
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 16 JUNE 2025

ಚಿತ್ರದುರ್ಗ: ಭಾರತೀಯ ಸಂಸ್ಕೃತಿ, ಪರಂಪರೆಯ ಧ್ಯೋತಕವಾಗಿ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಯೋಗ ದಿನೇ ದಿನೇ ಜಾಗತಿಕ ಮನ್ನಣೆ ಗಳಿಸುತ್ತಿದೆ.

ಈಗ ಅಂತಾರಾಷ್ಟ್ರ ಮಟ್ಟದಲ್ಲೂ ಯೋಗ ಸಮ್ಮೇಳನ, ಸ್ಪರ್ಧೆಗಳನ್ನು ಆಯೋಜಿಸುತ್ತಿದ್ದು, ಅಲ್ಲಿಯೂ ಭಾರತೀಯರು ಪಾರಮ್ಯ ಮೆರೆಯುತ್ತಿದ್ದಾರೆ.

ಇದನ್ನೂ ಓದಿ: ಉಚಿತ ಯೋಗ ತರಬೇತಿ ಶಿಬಿರ | ಹಿರಿಯ ವೈದ್ಯಾಧಿಕಾರಿ ಡಾ.ವಿಜಯಲಕ್ಷ್ಮಿ ಉದ್ಘಾಟನೆ

ಇದಕ್ಕೆ ಕೋಟೆನಾಡಿನ ಕುವರಿ ಶ್ರೀಧಾ ಕೂಡಾ ಸೇರ್ಪಡೆ ಆಗಿರುವುದು ಜಿಲ್ಲೆಯ ಮಟ್ಟಿಗೆ ಹೆಮ್ಮೆಯ ಸಂಗತಿ.

ವಿಯೇಟ್ನಾಂ ದೇಶದ ವೊಚಿಗನ್‌ ನಗರದಲ್ಲಿ ಜೂ.7 ರಂದು ನಡೆದ ಎರಡನೇ ಅಂತರಾಷ್ಟ್ರೀಯ ಯೋಗ ಸಮ್ಮೇಳನ ಹಾಗೂ ಸ್ಪರ್ಧೆಯಲ್ಲಿ ಕೋಟೆನಾಡಿನ ಪ್ರತಿಭೆ ಎಚ್‌.ಎಂ.ಶ್ರೀಧಾ ಚಿನ್ನದ ಪದಕ ಗೆದ್ದಿದ್ದಾರೆ.

ಇದನ್ನೂ ಓದಿ: NEET RESULT | SLV PU ಕಾಲೇಜಿಗೆ ದಾಖಲೆಯ ಫಲಿತಾಂಶ

ವಿಯೇಟ್ನಾಂ, ಆಸ್ಟ್ರೇಲಿಯಾ, ಕಾಂಬೋಡಿಯಾ ಹಾಗೂ ಭಾರತದ ಸ್ಪರ್ಧಿಗಳ ನಡುವೆ ನಡೆದ ಸ್ಪರ್ಧೆಯಲ್ಲಿ ಚಿತ್ರದುರ್ಗದ ಶ್ರೀಧಾ ವಿಜೇತರಾಗಿದ್ದಾರೆ.

ವಿ ಯೋಗ ವರ್ಲ್ಡ್‌ ಸಂಸ್ಥೆಯಿಂದ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಚಿತ್ರದುರ್ಗದ ಶ್ರೀಧಾ ಅವರ ಯೋಗ ಗುರು ಅನಿಲ್‌ಕುಮಾರ್‌ ರಾಯ್ಕರ್‌ ಕೂಡಾ ಭಾಗವಹಿಸಿದ್ದರು.

ಇದನ್ನೂ ಓದಿ: ಸೈನಸ್‌ಗೆ ಯಾವ ಯೋಗ ಹೆಚ್ಚು ಪರಿಣಾಮಕಾರಿ? 

ಈ ಯೋಗ ಸ್ಪರ್ಧೆಯ ಸೀನಿಯರ್‌ ವಿಭಾಗದಲ್ಲಿ ಅನಿಲ್‌ ಕುಮಾರ್‌ ರಾಯ್ಕರ್‌ ಕೂಡಾ ಚಿನ್ನದ ಪದಕ ಗಳಿಸಿದ್ದಾರೆ.

SHREEDHA YOGA
ಶ್ರೀಧಾ ಯೋಗ ಪ್ರದರ್ಶನ

ಈ ಮೂಲಕ ಗುರು ಹಾಗೂ ಶಿಷ್ಯೆ ಇಬ್ಬರೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಪರಾಕ್ರಮ ಮೆರೆದಿದ್ದಾರೆ.

ಇದನ್ನೂ ಓದಿ: ಮಗುವಿಗೆ ದಡಾರ ಬಂದಾಗ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂದು ತಿಳಿಯಿರಿ

ಚಿತ್ರದುರ್ಗ ನಗರದ ಮೆದೇಹಳ್ಳಿ ರಸ್ತೆಯಲ್ಲಿರುವ ಬಸವೇಶ್ವರ ಟ್ರೇಡಿಂಗ್ ಕಂಪನಿಯ ಪಾಲುದಾರರಾದ ಕೊಟ್ರೇಶ್ ಶೆಟ್ಟಿ ಅವರ ಮೊಮ್ಮಗಳಾಗಿರುವ ಶ್ರೀಧಾ ತಂದೆ ಮಲ್ಲಿಕಾರ್ಜುನ್‌ ಹಾಗೂ ತಾಯಿ ಪೃಥ್ವಿ.

ಸದ್ಯ ದಾವಣಗೆರೆಯಲ್ಲಿ ಎಸ್ಸೆಸ್ಸೆಲ್ಸಿ ಅಧ್ಯಯನ ಮಾಡುತ್ತಿದ್ದು, ತನ್ನ 8ನೇ ವಯಸ್ಸಿನಿಂದಲೇ ಯೋಗಾಭ್ಯಾಸದಲ್ಲಿ ತೊಡಗಿ ಅನೇಕ ಪ್ರಶಸ್ತಿ ಪುರಸ್ಕಾರ ಪಡೆದುಕೊಂಡಿದ್ದಾರೆ.

ಶ್ರೀಧಾ 20ಕ್ಕೂ ಹೆಚ್ಚು ಕಠಿಣ ಯೋಗಾಸನಗಳು ಸೇರಿದಂತೆ 200ಕ್ಕೂ ಹೆಚ್ಚು ಆಸನಗಳನ್ನು ಸುಲಲಿತವಾಗಿ ಮಾಡುವ ಕಲೆ ಕರಗತ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ವೀರಶೈವ ಅರ್ಬನ್ ಕ್ರೆಡಿಟ್ ಕೊ-ಆಪರೇಟಿವ್ ಬ್ಯಾಂಕ್ 89 ಲಕ್ಷ ನಿವ್ವಳ ಲಾಭ

ಕಳೆದ 8 ವರ್ಷಗಳಿಂದಲೂ ನಿತ್ಯ ಒಂದು ಗಂಟೆ ಯೋಗಾಭ್ಯಾಸಕ್ಕೆ ಮೀಸಲಿಟ್ಟಿದ್ದು, 2018ರಲ್ಲಿ ಮೈಸೂರು ದಸರಾ ಉತ್ಸವದಲ್ಲಿ ಯೋಗ ಪ್ರದರ್ಶನ ನೀಡಿ ಮೆಚ್ಚುಗೆ ಪಡೆದುಕೊಂಡಿದ್ದಾರೆ.

ಇದೇ ವರ್ಷ ಕಡೂರಿನ ಶ್ರೀ ರಾಘವೇಂದ್ರ ಯೋಗ ಸಂಸ್ಥೆಯಿಂದ ಆಯೋಜಿಸಿದ್ದ 6ನೇ ರಾಜ್ಯಮಟ್ಟದ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲೂ ಪ್ರಥಮ ಸ್ಥಾನ ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga LatestChitradurga newsDavangereGold MedalIndiaInternational Yoga CompetitionKannada NewsSridhaVietnamYogaಅಂತಾರಾಷ್ಟ್ರೀಯ ಯೋಗ ಸ್ಪರ್ಧೆಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಚಿನ್ನದ ಪದಕದಾವಣಗೆರೆಭಾರತಯೋಗವಿಯೇಟ್ನಾಂಶ್ರೀಧಾ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಜೂನ್ 16 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು, ಆರೋಗ್ಯದಲ್ಲಿ ಎಚ್ಚರ
Next Article Power Cut chitradurga News (3) ನಾಳೆಯಿಂದ 14 ದಿನ ವಿದ್ಯುತ್ ವ್ಯತ್ಯಯ | ಯಾಕೆ ಗೊತ್ತಾ, ಈ ಮಾಹಿತಿ ಓದಿ…
Leave a Comment

Leave a Reply Cancel reply

Your email address will not be published. Required fields are marked *

APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
today bhavishya
Astrology: ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಆರ್ಥಿಕ ಲಾಭ ದೊರೆಯುತ್ತದೆ, ಪ್ರಯಾಣವನ್ನು ಮುಂದೂಡುವುದು ಉತ್ತಮ
Dina Bhavishya
arecanut price list
ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up