AYYAPPA SWAMY; ಶ್ರೀ ಅಯ್ಯಪ್ಪ ಸ್ವಾಮಿ ಪ್ರತಿಷ್ಠಾಪನಾ ರಜತ ಮಹೋತ್ಸವ | ಸಚಿವ ಡಿ.ಸುಧಾಕರ್ ಭಾಗೀ

ಶ್ರೀ ಅಯ್ಯಪ್ಪ ಸ್ವಾಮಿ ಪ್ರತಿಷ್ಠಾಪನಾ ರಜತ ಮಹೋತ್ಸವ

CHITRADURGA NEWS | 08 JULY 2024

ಚಿತ್ರದುರ್ಗ: ಭಗವಂತನ ಸೇವೆಯನ್ನು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವ ಮೂಲಕ ಆತನನ್ನು ಒಲಿಸಿಕೊಳ್ಳಬಹುದಾಗಿದೆ. ನಮ್ಮ ಭಕ್ತಿಗೆ ಮೆಚ್ಚಿ ಭಗವಂತನೇ ಆರ್ಶೀವಾದವನ್ನು ಮಾಡಲಿದ್ದಾನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಇದನ್ನೂ ಓದಿ: VEERASHAIVA MAHASABHA; ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷರಾಗಿ ಮಹಡಿ ಶಿವಮೂರ್ತಿ ಅವಿರೋಧ ಆಯ್ಕೆ

ನಗರದ ಮೆದೆಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ರಜತ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವದಲ್ಲಿ ಎರಡನೇ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಭಾರತ ಸಾಧು ಸಂತರ ಬೀಡು. ಇಲ್ಲಿ ಎಲ್ಲಾ ಧರ್ಮ, ಜಾತಿ, ಜನಾಂಗದವರು ಸಹಬಾಳ್ವೆಯಿಂದ ಬದುಕನ್ನು ನಡೆಸುತ್ತಿದ್ದಾರೆ. ನಮಗೆಲ್ಲಾ ದೇವರು ಒಬ್ಬನೆ. ಆದರೆ ಆತನ ನಾಮಗಳು ಮಾತ್ರ ಹಲವು ಎಂದು ಪುರಾಣ, ಇತಿಹಾಸದಿಂದ ತಿಳಿದುಕೊಂಡಿದ್ದೇವೆ. ಒಂದೊಂದು ಸಮಾಜದವರು ಒಂದು ಹೆಸರಿನಲ್ಲಿ ಭಗವಂತನ ನಾಮಸ್ಮರಣೆ ಮಾಡುತ್ತಾ ಆರಾಧನೆ ಮಾಡುತ್ತಾರೆ ಎಂದರು.

ಭಾರತ ಧಾರ್ಮಿಕ ತಳಹದಿಯ ಮೇಲೆ ನಿಂತಿರುವ ದೇಶ. ಇಡೀ ದೇಶದಲ್ಲಿ ಭಗವಂತನ ಆರಾಧನೆ ನಡೆಯುತ್ತದೆ. ಅನೇಕ ದೇವರು, ಆಚರಣೆ, ನಂಬಿಕೆಗಳಿದ್ದರೂ ಎಲ್ಲವುಗೂ ಸಾರ ಶಾಂತಿ, ಅಹಿಂಸೆ, ಪರಸಹಿಷ್ಣುತೆಯೇ ಆಗಿದೆ ಎಂದರು.

ಇದನ್ನೂ ಓದಿ: FACILITY; ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಗೊಲ್ಲಹಳ್ಳಿ ಗ್ರಾಮಸ್ಥರ ಮನವಿ

ಚಿತ್ರದುರ್ಗದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಮಂಡಳಿಯವರು ಶ್ರದ್ಧೆ, ಭಕ್ತಿಯಿಂದ ಕಳೆದ 25 ವರ್ಷಗಳಿಂ ದಸೇವೆ ಮಾಡುತ್ತಾ ಬಂದಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದಿ ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾದ ಎಸ್.ಆರ್.ಲಕ್ಷ್ಮೀಕಾಂತರೆಡ್ಡಿ ಮಾತನಾಡಿ, ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿಯವರ ನಿಸ್ವಾರ್ಥ ಸೇವೆಯಿಂದ ರಾಜ್ಯದಲ್ಲಿ ಚಿತ್ರದುರ್ಗದ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ ಹೆಸರಾಗಿದೆ ಎಂದರು.

ಪ್ರತಿ ವರ್ಷ ಅಯ್ಯಪ್ಪ ಮಾಲೆಯನ್ನು ಹಾಕಿದ ಭಕ್ತಾಧಿಗಳಿಗೆ ಟ್ರಸ್ಟ್‍ನವರು ಅನ್ನದಾನ ಮಾಡುವುದರ ಮೂಲಕ ಅಯ್ಯಪ್ಪಸ್ವಾಮಿಯ ಸೇವೆಯನ್ನು ಮಾಡುತ್ತಿದ್ದಾರೆ. ಭಕ್ತಾಧಿಗಳ ಸಹಾಯ ಸಹಕಾರದಿಂದ ಈ ಕಾರ್ಯ ಕಳೆದ 25 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ ಎಂದರು.

ಡಿಸಿಸಿ ಬ್ಯಾಂಕ್ ನಿರ್ದೆಶಕ ದ್ಯಾಮಣ್ಣ ಮಾತನಾಡಿ, ನಾವೆಲ್ಲರೂ ಭಗವಂತನ ಆರಾಧಕರು ಆತನ ಆರಾಧನೆ ಮಾಡುವುದರ ಮೂಲಕ ಆತನ ಪ್ರೀತಿಗೆ ಭಕ್ತಾಧಿಗಳು ಪಾತ್ರಗಬೇಕಿದೆ. ಕಳೆದ 25 ವರ್ಷದ ಹಿಂದೆ ಪ್ರಾರಂಭವಾದ ಈ ದೇವಾಲಯ ಇಂದು ಹೆಮ್ಮರವಾಗಿ ಬೆಳೆದಿದೆ. ಸಂಕ್ರಾಂತಿಯಂದು ಇಲ್ಲಿ ನಡೆಯುವ ಕಾರ್ಯಕ್ರಮ ಜನ ಮನ್ನಣೆಯನ್ನು ಪಡೆದಿದೆ. ರಾ.ಹೆ.4 ರಿಂದ ದೇವಾಲಯಕ್ಕೆ ಬರುವ ದಾರಿ ಇಕ್ಕಾಟಾಗಿದೆ ಅದನ್ನು ವಿಸ್ತರಣೆ ಮಾಡುವಂತೆ ಸಚಿವರಲ್ಲಿ ಮನವಿ ಮಾಡಿದರು.

ಎಸ್.ಆರ್ .ಎಸ್.ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎಸ್.ಆರ್.ಲಿಂಗಾರೆಡ್ಡಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಡಿಸಿಸಿ ಬ್ಯಾಂಕ್ ನಿರ್ದೆಶಕರಾದ ನಿಶಾನಿ ಜಯ್ಯಣ್ಣ, ಟಿ.ಮಹಾಂತೇಶ್, ಉದ್ಯಮಿ ಎಸ್.ಎನ್.ಕಾಶಿವಿಶ್ವನಾಥ್ ಶ್ರೇಷ್ಠಿ, ಮೇದೇಹಳ್ಳಿ ಗ್ರಾ.ಪಂ.ಸದಸ್ಯರಾದ ನಿರಂಜನಮೂರ್ತಿ, ದುಗ್ಗಪ್ಪ, ಮೊತ್ಕೂರ್ ರಮೇಶ್, ಮಾಜಿ ಅಧ್ಯಕ್ಷರಾದ ವಿಜಯ ಕುಮಾರ್, ಉದ್ಯಮಿಗಳಾದ ಹರೀಶ್, ಮೋಹನ್‍ರಾಜ್, ಚಳ್ಳಕೆರೆಯ ರಘು, ಮಲ್ಲಿಕಾರ್ಜನ ಸ್ವಾಮಿ, ಮೋಹನ್ ಕುಮಾರ್, ಚಂದ್ರಶೇಖರ್, ಸೂರಪ್ಪ, ಮಂಜುನಾಥ್, ಪ್ರಧಾನ ಅರ್ಚಕರಾದ ಸತೀಶ್ ಶರ್ಮ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: PRIYANKA KHARGE ; ಜುಲೈ 10 ರಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರವಾಸ 

ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಾಳೆಯ ಕಾರ್ಯಕ್ರಮ:

ಬೆಳ್ಳಿಗೆ 6ಕ್ಕೆ ಸಂಹಾರ ತತ್ವ ಕಳಸ ಪೂಜೆ, ಕುಂಭೇಷ ಪೂಜೆ, ಪ್ರತಿಷ್ಠಾ ಹೋಮ, ಸಂಹಾರ ತತ್ವ ಕಳಶಾಭೀಷೇಕ ಜೀವಕಳಸ ಪೂಜೆ, ಜೀವೋದ್ವಾಸನೆ, ಲಕ್ಷ್ಮಿನಾರಾಯಣ ಹೃದಯ ಹೋಮ ಹಾಗೂ ಪೂರ್ಣಾವತಿ ಮಹಾ ಮಂಗಳಾರತಿ ಪೂಜಾ ನೆರವೇರುವುದು. ಸಂಜೆ ಶ್ರೀ ಲಕ್ಷ್ಮೀನಾರಾಯಣ ಹೃದಯ ಹೋಮ ಹಾಗೂ ಪೂರ್ಣಾಹುತಿ ಮಹಾಮಂಗಳಾರತಿ ನಡೆಯಲಿದೆ.

6.30ರ ಸಭಾ ಕಾರ್ಯ ಕ್ರಮವನ್ನು ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಾಜಂನ ರಾಜ್ಯಾಧ್ಯಕ್ಷ ಎನ್.ಜಯರಾಂ ಉದ್ಘಾಟಿಸುವರು. ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಜ್ಯೋತಿ ಬೆಳಗಿಸುವರು. ಉದ್ಯಮಿ ಮಲ್ಲಿಕಾರ್ಜನ ಸ್ವಾಮಿ, ನಗರಸಭೆ ಸದಸ್ಯ ಎಸ್.ಬಾಸ್ಕರ್, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಬದರಿನಾಥ್, ಗುತ್ತಿಗೆದಾರರ ಸಂಘದ ರಾಜ್ಯ ಉಪಾಧ್ಯಕ್ಷ ಆರ್.ಮಂಜುನಾಥ್, ಗ್ರಾ.ಪಂ.ಮಾಜಿ ಅದ್ಯಕ್ಷ ಎನ್.ಕುಮಾರ್, ವರ್ತಕರಾದ ಜಿ.ಆರ್.ಪ್ರತಾಪ್ ರೆಡ್ಡಿ, ಕೆಡಿಪಿ ಸದಸ್ಯ ಕೆಸಿ.ನಾಗರಾಜ್, ಆರ್,ತೇಜಸ್ವಿ ಮತ್ತಿತರರು ಭಾಗವಹಿಸಲಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version