CHITRADURGA NEWS | 14 AUGUST 2025
ಚಿತ್ರದುರ್ಗ: ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರ ನಿಯೋಗ, ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ, ನ್ಯಾ. ನಾಗಮೋಹನ್ದಾಸ್ ಅವರ ಜನಗಣತಿ ಲೋಪ ಸರಿಪಡಿಸಿ ಜನಸಂಖ್ಯಾವಾರು ಪ್ರತ್ಯೇಕ ಮೀಸಲಾತಿ ನೀಡಲು ಆಗ್ರಹಿಸಿತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 14 | ಹತ್ತಿ ರೇಟ್ ಎಷ್ಟಿದೆ?
ಮುಖ್ಯಮಂತ್ರಿಗಳಿಗೆ ನೀಡಿದ ಪತ್ರದ ವಿವರಣೆಯಲ್ಲಿ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ಆಯೋಗ ಸಲ್ಲಿಸಿರುವ ವರದಿಯಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿವೆ.
ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಭೋವಿ ಜನಾಂಗದ ಜನಸಂಖ್ಯೆಯ ನ್ಯೂನ್ಯತೆಗಳು ಸದರಿ ವರದಿಯಲ್ಲಿ ಪುಟ ಸಂಖ್ಯೆ 24ರಲ್ಲಿ ತಿಳಿಸಿರುವಂತೆ 2001-11 ರ ಜನಸಂಖ್ಯೆಯ ದಶಕವಾರು ಬೆಳವಣಿಗೆಯ ಪ್ರಮಾಣ 22.31% ರಷ್ಟಿದೆ. ಇದೇ ಮಾನದಂಡವನ್ನು 2011-2025 ಅಂದರೆ 15 ವರ್ಷಗಳ ನಂತರದ ಜನಸಂಖ್ಯೆ ನ್ಯಾ|| ನಾಗಮೋಹನ್ದಾಸ್ರವರ ವರದಿಯಂತೆ ರಾಜ್ಯದ ಪರಿಶಿಷ್ಟ ಜಾತಿ ಜನಸಂಖ್ಯೆ 1 ಕೋಟಿ 7ಲಕ್ಷ ಹಾಗೂ ಭೋವಿ ಜನಾಂಗದ ಜನಸಂಖ್ಯೆ 11,29,301 ಮಾತ್ರವಾಗಿದೆ.
ಸದಾಶಿವ ಆಯೋಗ ಹಾಗೂ 2011ರ ಜನಗಣತಿಯಲ್ಲಿ ಎರಡೂ ಸಮೀಕ್ಷೆ ಏಕಕಾಲದಲ್ಲಿ ನಡೆದರೂ ಸಹ ಪರಿಶಿಷ್ಟ ಜಾತಿ ಜನಸಂಖ್ಯೆ ವಿಚಾರದಲ್ಲಿ ದೊಡ್ಡ ಪ್ರಮಾಣದ ವ್ಯತ್ಯಾಸ ಇದೆ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದು, ಈ ಕಾರಣದಿಂದ ಹೊಸದಾಗಿ ಸಮೀಕ್ಷೆ ನಡೆಯಬೇಕಾಗಿದೆ ಎಂದು ಹೇಳಿರುವಾಗ ಪ್ರಸ್ತುತ ಲೋಪದೋಷ ಗಳನ್ನು ಸರಿಪಡಿಸಲು ಕೇಂದ್ರ ಸರ್ಕಾರ 2026ರ ಜನಗಣತಿ ಆಗುವವರೆವಿಗೂ ಕಾಯುವುದು ಸೂಕ್ತ ಎಂದು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು.
ಇದನ್ನೂ ಓದಿ: ನಟ ದರ್ಶನ್ ಬೇಲ್ ರದ್ದು | ಚಿತ್ರದುರ್ಗ ರೇಣುಕಾಸ್ವಾಮಿ ಅಪ್ಪ ಅಮ್ಮ ಮೊದಲ ಪ್ರತಿಕ್ರಿಯೆ
ವರದಿಯಲ್ಲಿ ತಿಳಿಸಿರುವಂತೆ ಈ ಎಲ್ಲಾ ಮಾನದಂಡಗಳಲ್ಲಿ ಭೋವಿ ಜನಾಂಗ, ಎಡಗೈ, ಬಲಗೈ ಹಾಗೂ ಬಂಜಾರ ಸಮಾಜಗಳಂತಹ ಅತ್ಯಂತ ಕಡಿಮೆ ಅಭಿವೃದ್ಧಿ ಹೊಂದಿದ್ದರು ಭೋವಿ ಸಮಾಜವನ್ನು ಮುಂದುವರೆದ ಗುಂಪಿಗೆ ಸೇರಿಸಲಾಗಿದೆ. ವರದಿಯಲ್ಲಿರುವ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ಉದ್ಯೋಗ ಸೂಚಕಗಳಿಗೂ ಹಾಗೂ ಮೀಸಲಾಗಿರುವ ಶೇ. ನಿಗದಿ ಪಡೆಸಿರುವುದಕ್ಕೂ ಯಾವುದೇ ತಾಳೇ ಇಲ್ಲದಿರುವುದು ಸ್ಪಷ್ಟವಾಗಿ ಕಂಡು ಬರುತ್ತದೆ.
ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸೂಚಕಗಳು ಮತ್ತು ವಿವಿಧ ಗುಂಪುಗಳಲ್ಲಿ ನಿಗದಿಪಡಿಸಿದ ಮೀಸಲಾತಿಯ ಪ್ರಮಾಣಗಳ ನಡುವೆ ಯಾವುದೇ ಪರಸ್ಪರ ಸಂಬಂಧವಿಲ್ಲ. ಸಮೀಕ್ಷೆಗೆ ಕೇಂದ್ರ ಸರ್ಕಾರದ ಜನಗಣತಿಯ ಸಮಯದಲ್ಲಿ ಅನುಸರಿಸಲಾಗುವ ವಿಧಾನವನ್ನು ಅನುಸರಿಸಿದರೆ ಮತದಾರರ ಪಟ್ಟಿಯನ್ನು ಮಾನದಂಡವಾಗಿ ಇಟ್ಟುಕೊಂಡು ಸಮೀಕ್ಷೆ ಮಾಡಿರುವುದೇ ಈ ಎಲ್ಲಾ ಗೊಂದಲಗಳಿಗೆ ಕಾರಣ ಎಂದಿದ್ದಾರೆ.
ತರಾತುರಿಯಲ್ಲಿ ಅಲ್ಪ ಸಮಯದಲ್ಲಿ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲು short cut methods ಗಳನ್ನು ಬಳಸಿ ಪ್ರಮಾದ ಎಸಗಲಾಗಿದೆ.
ಪರಿಶಿಷ್ಟ ಜಾತಿ ಕುಟುಂಬಗಳನ್ನು ಗುರುತಿಸಲು ಪಡಿತರ ಚೀಟಿಯನ್ನು ಒಂದು ಮಾನದಂಡವಾಗಿ ಬಳಸಲಾಗಿದೆ. ಆದರೆ ವರದಿಯಲ್ಲಿ ತಿಳಿಸಿರುವಂತೆ ಸುಮಾರು 7 ಲಕ್ಷ ಪರಿಶಿಷ್ಟ ಜಾತಿ ಕುಟುಂಬಗಳು ಪಡಿತರ ಚೀಟಿಯೇ ಹೊಂದಿಲ್ಲ ಅಂದ ಮೇಲೆ ಪರಿಶಿಷ್ಟ ಜಾತಿ ಕುಟುಂಬಗಳನ್ನು ಗುರುತಿಸುವಲ್ಲಿ ಲೋಪವಾಗಿ ಸುಮಾರು 30 ಲಕ್ಷ ಜನರನ್ನು ಕೈ ಬಿಡಲಾಗಿದೆ ಹಾಗೂ ಭೋವಿ ಜನಾಂಗದ ಸುಮಾರು 3.5 ಲಕ್ಷ ಜನರನ್ನು ಸಮೀಕ್ಷೆಯಿಂದ ಕೈಬಿಡಲಾಗಿದೆ.
ಇದನ್ನೂ ಓದಿ: ಆಗಸ್ಟ್ 16 ರಿಂದ ದಸರಾ ಕ್ರೀಡಾಕೂಟ
ಹಲವು ಮಾನದಂಡಗಳಲ್ಲಿ ಬಿ ಮತ್ತು ಸಿ ಗುಂಪು,ಡಿ ಗುಂಪಿಗಿಂತ ಸ್ಪಷ್ಟವಾಗಿ ಮಂದೆ ಇದೆ. ಡಿ ಗುಂಪಿನವರು 26 ಮಾನದಂಡಗಳಲ್ಲಿ 19 ಮಾನದಂಡಗಳಲ್ಲಿ ಹಿಂದೆ ಇದೆ. ಹೀಗಿರುವಾಗ ಆಯೋಗವು ಡಿ ಗುಂಪಿಗೆ ಕೇವಲ 4% ಮೀಸಲಾತಿ ನಿಗದಿ ಮಾಡಿರುವುದು ಮೇಲ್ನೋಟಕ್ಕೆ ಅವೈಜ್ಞಾನಿಕವಾಗಿದೆ.
ಭೋವಿ ಸಮಾಜವು 2026ರಲ್ಲಿ ಕೇಂದ್ರ ಸರ್ಕಾರ ನಡೆಸುವ ಜನಗಣತಿ ಆದಾರದ ಮೇಲೆ ಸಾಮಾಜಿಕ ಮತ್ತು ಆರ್ಥಿಕ ಸೂಚಕಗಳ ಆಧಾರದ ಮೇಲೆ ಒಳಮೀಸಲಾತಿಯನ್ನು ಕಲ್ಪಿಸಲು ಒತ್ತಾಯಿಸುತ್ತದೆ. ಹಾಗೂ ದೋಷ ಪೂರಿತ ನ್ಯಾ|| ನಾಗಮೋಹನದಾಸ್ ವರದಿಯನ್ನು ತಿರಸ್ಕರಿಸಲು ಒತ್ತಾಯಿಸಿದ್ದು ಒಳಮೀಸಲಾತಿ ನೀಡುವ ಸಮಯದಲ್ಲಿ ನಿಖರವಾದ ವೈಜ್ಞಾನಿಕ ಅಂಕಿಅಂಶಗಳನ್ನು ಪಡೆದು ಭೋವಿ ಸಮಾಜವನ್ನು ಪ್ರತ್ಯೇಕ ಗುಂಪಾಗಿ ಮಾಡಲು ಮನವಿ ಮಾಡಲಾಯಿತು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಸಚಿವ ಸಂಪುಟದಲ್ಲಿ ತಮ್ಮ ಮನವಿಯನ್ನು ಚರ್ಚಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ಚಿತ್ರದುರ್ಗ ನಿರ್ಮಿತಿ ಕೇಂದ್ರಕ್ಕೆ ದಂಡ ಹಾಕಿದ ಹೈಕೋರ್ಟ್
ನಿಯೋಗದಲ್ಲಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ, ವಿ.ಹನುಮಂತಪ್ಪ, ರವಿ ಪೂಜಾರಿ, ಜಯಶಂಕರ, ಮುರಳಿಧರ ಬಂಡೆ, ಮಂಜುಳ, ಗೀತಾ, ತಿಪ್ಪಣ್ಣ ಒಡೆಯರಾಜು, ಕೃಷ್ಣಪ್ಪ ಇತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
