
CHITRADURGA NEWS | 15 DECEMBER
ಚಿತ್ರದುರ್ಗ: ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಡಿಸೆಂಬರ್ 16 ಸೋಮವಾರ ಶ್ರೀ ನೀಲಕಂಠೇಶ್ವರ ದೇವರ ಕಾರ್ತಿಕ ಮಹೋತ್ಸವ ವಿಜೃಂಭಣೆಯಿಂದ ಜರುಗಲಿದೆ.
ಸೋಮವಾರ ಸಂಜೆ 7 ಗಂಟೆಗೆ ದೀಪಾರಾಧನೆ ನಂತರ ಶ್ರೀ ನೀಲಕಂಠೇಶ್ವರಸ್ವಾಮಿ ಪಲ್ಲಕ್ಕಿ ಉತ್ಸವದ ಮೆರವಣಿಗೆ ಗಾಂಧಿ ವೃತ್ತದ ವರೆಗೆ ನಡೆಯಲಿದೆ.
ಇದನ್ನೂ ಓದಿ: ವಿವಿ ಸಾಗರಕ್ಕೆ ಮತ್ತೆ ಆರಂಭವಾಯ್ತು ಒಳಹರಿವು | ಇಂದಿನ ನೀರಿನ ಮಟ್ಟ ಎಷ್ಟು ?
ನಂತರ ಅಷ್ಟೋತ್ತರ ಬಿಲ್ವಾರ್ಜನೆ ಹಾಗೂ ಮಹಾ ಮಂಗಳಾರತಿ ನಡೆಯಲಿದೆ. ನಂತರ ಪ್ರಸಾದ ವ್ಯವಸ್ಥೆ ಇರುತ್ತದೆ. ಸಮಸ್ತ ಭಕ್ತಾದಿಗಳು ಭಾಗವಹಿಸಲು ವೀರಶೈವ ಸಮಾಜದ ಪ್ರಕಟಣೆ ತಿಳಿಸಿದೆ.
ನೀಲಕಂಠೇಶ್ವರನಿಗೆ ಭಸ್ಮಾಲಂಕಾರ:
ಶ್ರೀ ನೀಲಕಂಠೇಶ್ವರ ಸ್ವಾಮಿ ಕಾರ್ತಿಕ ಮಹೋತ್ಸವದ ಅಂಗವಾಗಿ ಇಂದು ಭಾನುವಾರ ಶಿವಲಿಂಗಕ್ಕೆ ಭಸ್ಮಾಲಂಕಾರ ಮಾಡಲಾಗಿತ್ತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
