CHITRADURGA NEWS | 27 MARCH 2026
ಚಿತ್ರದುರ್ಗ: ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ನವಮಿ ಅಂಗವಾಗಿ ಜಿಲ್ಲೆಯಾದ್ಯಂತ ಶ್ರೀರಾಮ, ಆಂಜನೇಯ ದೇವಸ್ಥಾನಗಳಲ್ಲಿ ಶ್ರದ್ಧಾ ಭಕ್ತಿಯಿಂದ ಶ್ರೀರಾಮನವಮಿ ಆಚರಿಸಲಾಯಿತು.
ಇದನ್ನೂ ಓದಿ: ಅಡಿಕೆ ಧಾರಣೆ | 27 ಮಾರ್ಚ್ | ರಾಜ್ಯದ ಅಡಿಕೆ ಮಾರುಕಟ್ಟೆಗಳ ಸಮಗ್ರ ವಿವರ
ನವಮಿಯ ಅಂಗವಾಗಿ ವಿಶೇಷ ಪೂಜೆ, ಅಲಂಕಾರ, ಶ್ರೀರಾಮ ತಾರಕ ಮಂತ್ರ ಪಠಣ, ಪಾನಕ, ಕೋಸಂಬರಿ ವಿತರಣೆಯಂತಹ ಕಾರ್ಯಗಳು ದೇಗುಲಗಳಲ್ಲಿ ಬೆಳಗಿನಿಂದ ಸಂಜೆವರೆಗೆ ಜರುಗಿದವು.

ನಗರದ ಬೆಂಗಳೂರು ರಸ್ತೆಯಲ್ಲಿರುವ ಕಣಿವೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆಂಜನೇಯ ಸ್ವಾಮಿಗೆ ಬೆಣ್ಣೆ ಅಲಂಕಾರ ಮಾಡಲಾಗಿತ್ತ. ಶ್ರೀರಾಮ, ಸೀತಾ ಮಾತೆ, ಲಕ್ಷ್ಮಣ, ಹನುಮಂತ ದೇವರ ವಿಗ್ರಹಗಳನ್ನು ಪಲ್ಲಕ್ಕಿಯಲ್ಲಿಟ್ಟು ಮೆರವಣಿಗೆ ಮಾಡಲಾಯಿತು.
ಬೆಳಗ್ಗೆಯಿಂದ ರಾತ್ರಿವರೆಗೆ ಭಕ್ತರಿಗೆ ಅನ್ನ ಸಂತರ್ಪಣೆ, ಪಾನಕ, ಕೋಸಂಬರಿ ವಿತರಣೆ ಮಾಡಲಾಯಿತು. ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಇದನ್ನೂ ಓದಿ: ಮೊಬೈಲ್ ಬಿಟ್ಟು ಕ್ರೀಡೆ, ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಿ | ಡಾ.ಯುವರಾಜ್
ಕೆಳಗೋಟೆಯಲ್ಲಿರುವ ಅಂಬಾಭವಾನಿ ದೇವಸ್ಥಾನದ ಆವರಣದಲ್ಲಿರುವ ಶ್ರೀರಾಮನ ದೇವಾಲಯದಲ್ಲಿ ರಾಮ, ಸೀತೆ, ಲಕ್ಷ್ಮಣ, ಆಂಜನೇಯನಿಗೆ ಮಲ್ಲಿಗೆ, ಸುಗಂಧರಾಜ, ಕನಕಾಂಬರ, ಸೇವಂತಿಗೆ ಸೇರಿದಂತೆ ವಿವಿಧ ಬಗೆಯ ಹೂವುಗಳಿಂದ ಸಿಂಗರಿಸಿ ಶ್ರದ್ದಾಭಕ್ತಿಯಿಂದ ಪೂಜೆ ಸಲ್ಲಿಸಲಾಯಿತು.
ನಗರದ ಡಿಎಚ್ಓ ಕಚೇರಿ ಮುಂಭಾಗದ ಆರೋಗ್ಯ ಆಂಜನೇಯ ಸ್ವಾಮಿ, ಸ್ಟೇಡಿಯಂ ರಸ್ತೆಯ ಆಂಜನೇಯ ಸ್ವಾಮಿ, ಕೆಳಗೋಟೆ, ತಮಟಕಲ್ಲು, ಜೋಗಿಮಟ್ಟಿ ರಸ್ತೆ, ಜೆಸಿಆರ್, ಚಳ್ಳಕೆರೆ ಗೇಟ್, ಬುರುಜನಹಟ್ಟಿ, ಸೇರಿದಂತೆ ಎಲ್ಲೆಲ್ಲೂ ಯುವಕರು ಶಾಮಿಯಾನ ಹಾಕಿ ಪಾನಕ ಕೋಸಂಬರಿ ವಿತರಣೆ ಮಾಡಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
