ಚಿತ್ರದುರ್ಗ ನ್ಯೂಸ್:
ಹೊಸದುರ್ಗದ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶಾಂತವೀರ ಸ್ವಾಮೀಜಿ ತಮ್ಮ ಹೆಸರಿನ ಮುಂದೆ ಡಾ. ಎಂದು ಬಳಸದಂತೆ ಮಠದ ಭಕ್ತರು, ಸಾರ್ವಜನಿಕರು, ಪತ್ರಕರ್ತರಿಗೆ ಮನವಿ ಮಾಡಿಕೊಂಡಿದ್ದಾರೆ.
ಇತ್ತೀಚಿಗೆ ಗೌರವ ಡಾಕ್ಟರೇಟ್ ಎನ್ನುವುದು ವ್ಯಾಪಾರೀಕರಣ ಆಗಿರುವುದರಿಂದ ಅಸಮರ್ಥರು, ಹಣವಂತರು, ಹಣ ಕೊಟ್ಟು ಡಾ. ಪದವಿ (ಖರೀದಿ) ಪಡೆಯುತ್ತಿರುವುದು ಅತ್ಯಂತ ಖಂಡನೀಯ ಮತ್ತು ಅಸಹ್ಯ ತಂದಿದೆ. ಬೀದಿ ಬದಿಯ ತರಕಾರಿಯಂತೆ ಹತ್ತು ಇಪ್ಪತ್ತು ಸಾವಿರಕ್ಕೆ ಗೌರವ ಡಾಕ್ಟರೇಟ್ ಮಾರುತ್ತಿದ್ದಾರೆ ಹಾಗೂ ಪಡೆಯುತ್ತಿದ್ದಾರೆ.
ಇದು ಮಠಾಧೀಶರನ್ನು ಬಿಟ್ಟಿಲ್ಲ ಇಂತಹ ನಕಲಿಗಳಿಂದ ಅಸಲಿ ಸಮರ್ಥರು, ಅರ್ಹರಿಗೆ, ಆಗೌರವ ತರುವಂತಾಗಿದೆ.
ಈ ಕಾರಣದಿಂದ ನಮಗೆ ನೀಡಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ತಿರಸ್ಕರಿಸುತ್ತೇವೆ. ಇದೇ ವೇಳೆ ಡಾಕ್ಟರೇಟ್ ಪದವಿಗಾಗಿ ಎರಡು ದೇಶಗಳಿಂದ ಬಂದಿರುವ ಮನವಿಯನ್ನು ಸ್ವೀಕರಿಸುವುದಿಲ್ಲ ಎಂದು ಶ್ರೀಗಳು ಸ್ಪಷ್ಟಪಡಿಸಿದ್ದಾರೆ.
(ಚಿತ್ರದುರ್ಗ ಜಿಲ್ಲೆಯ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ Facebook page follow ಮಾಡಿ https://www.facebook.com/chitradurganews?mibextid=ZbWKwL)

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
