CHITRADURGA NEWS | 20 APRIL 2025
ಚಿತ್ರದುರ್ಗ: ರಾಷ್ಟ್ರಮಟ್ಟದ ಜೆಇಇ 2ನೇ ಹಂತದ ಮೇನ್ಸ್ ಪರೀಕ್ಷೆಯಲ್ಲಿ ಎಸ್ ಆರ್ ಎಸ್ ಪಿಯು ಕಾಲೇಜು 40ನೇ ರ್ಯಾಂಕ್ ಪಡೆದುಕೊಂಡಿದೆ.
Also Read: ಚಳ್ಳಕೆರೆ ಗೇಟ್ ಬಳಿ ಬಸ್ ತಂಗುದಾಣ ನಿರ್ಮಾಣಕ್ಕೆ ಕ್ರಮ ವಹಿಸಿ | ಡಿಸಿ

ನಗರದ ಎಸ್ ಆರ್ ಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್ನಲ್ಲಿ ನಡೆದ ಜೆಇಇ 2ನೇ ಹಂತದ ಮೇನ್ಸ್ ಪರೀಕ್ಷೆಯಲ್ಲಿ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಅತ್ಯುತ್ತಮ ರ್ಯಾಂಕ್ ಗಳಿಸುವ ಮೂಲಕ ಜೆಇಇ ಅಡ್ಡಾನ್ಸ್ಡ್ ಪರೀಕ್ಷೆಗೆ ಅರ್ಹತೆ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಈ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಐಐಟಿ ಮುಂಬ್ಯೆ, ಖರಗ್ಪುರ್, ಲಕ್ನೊ ದಲ್ಲಿ ತರಬೇತಿ ಪಡೆಯುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಒಟ್ಟು 40 ವಿದ್ಯಾರ್ಥಿಗಳು ಜೆಇಇ ಮೇನ್ಸ್ ನಿಂದ ಐಐಟಿ ಅಡ್ಡಾನ್ಸ್ಡ್ ಗೆ ಅರ್ಹತೆ ಪಡೆದಿದ್ದಾರೆ.
ಕೆ.ಪಿ. ಪೂಜಿತ್ ಕುಲಾಲ್ 40ನೇ ಆಲ್ ಇಂಡಿಯಾ ರ್ಯಾಂಕ್, ಎನ್.ವೈ.ಆನಂದ್ 354, ಪ್ರಜ್ವಲ್ 1600, ಎ.ಮಹಾಲಕ್ಷ್ಮಿ 1702, ಪ್ರವೀಣ್ ತಳವಾರ-1965, ನೀಲಾಂಬಿಕಾ ತಳವಾರ 3683, ಟಿ.ಎಂ.ರಕ್ಷೀತಾ 4209, ಆದಿತ್ಯ ಎಸ್ ರಾಮ್ 4372, ಬಿ.ನಯನ 4411, ಟಿ.ಛಾಯಾ 4751, ಕೆ.ಪಿ.ಸ್ನೇಹ 4902ನೇ ಆಲ್ ಇಂಡಿಯಾ ರ್ಯಾಂಕ್ ಗಳಿಸುವ ಮೂಲಕ ಐಐಟಿ ಅಡ್ಡಾನ್ಸ್ಡ್ ಗೆ ಅರ್ಹತೆ ಪಡೆದಿದ್ದಾರೆ.
Also Read: ಜೆಎಂಐಟಿ ಬಳಿ Sky walk | ಟೆಂಡರ್ ಪ್ರಕ್ರಿಯೆ ನಡೆಸಿ, ಕಾಮಗಾರಿ ಪ್ರಾರಂಭಿಸಿ | ಡಿಸಿ ವೆಂಕಟೇಶ್
ರ್ಯಾಂಕ್ ಪಡೆದವರು ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.
ಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಕಾರ್ಯದರ್ಶಿಗಳಾದ ಸುಜಾತ ಲಿಂಗಾರೆಡ್ಡಿ, ಉಪಾಧ್ಯಕ್ಷ ಬಿ.ಎಲ್.ಅಮೋಘ್ ಸೇರಿದಂತೆ ಕಾಲೇಜು ಸಿಬ್ಬಂದಿಯವರು ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
