CHITRADURGA NEWS | 09 MAY 2025
ಚಿತ್ರದುರ್ಗ: 2025ರ ಎಸ್ಎಸ್ಎಲ್ಸಿ ಪರೀಕ್ಷೆ-01 ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ-02 ನ್ನು ಇದೇ ಮೇ.26 ರಿಂದ ಜೂನ್ 02 ರವರೆಗೆ ನಡೆಸಲಾಗುತ್ತಿದೆ.
ಪ್ರಪ್ರಥಮ ಬಾರಿಗೆ ಪರೀಕ್ಷೆ ನೊಂದಣಿಯಾಗುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಅಂತಿಮ ಮೇ.10 ಕೊನೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಅನುತ್ತೀರ್ಣಗೊಂಡಿರುವ 13,579 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಳ್ಳುವುದು.
ಶೇ.75 ಹಾಜರಾತಿ ಕೊರತೆಯಿಂದಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ -01 ರಿಂದ ಹೊರಗುಳಿದ 15 ವರ್ಷ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ-02ಕ್ಕೆ ನೊಂದಾಯಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
Also Read: ಗ್ರಾಮ ಪಂಚಾಯತಿ ಉಪಚುನಾವಣೆ | ವೇಳಾಪಟ್ಟಿ ಪ್ರಕಟ
ಈ ಮೇಲಿನಂತೆ ಇಲಾಖೆಯು ಅವಕಾಶ ಕಲ್ಪಿಸಿರುವುದರಿಂದ ಜಿಲ್ಲೆಯಲ್ಲಿನ ಎಲ್ಲಾ ಪೋಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಮಕ್ಕಳನ್ನು ಪರೀಕ್ಷೆ-02ಕ್ಕೆ ನೋಂದಾಯಿಸಿ ಪರೀಕ್ಷೆ ಬರೆಸಲು ಕ್ರಮವಹಿಸುವಂತೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
