CHITRADURGA NEWS | 22 JULY 2024
ಚಿತ್ರದುರ್ಗ: ಎಸ್ಎಸ್ಎಲ್ಸಿ ವಿದ್ಯಾರ್ಥಿ ಆತ್ಮಹತ್ಯೆ (self death) ಮಾಡಿಕೊಂಡಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನಲ್ಲಿ ನಡೆದಿದೆ.
ಹೊಳಲ್ಕೆರೆ ಪಟ್ಟಣದ ಖಾಸಗಿ ಶಾಲೆಯೊಂದರಲ್ಲಿ ತಾಲ್ಲೂಕಿನ ರಂಗಾಪುರ ಗ್ರಾಮದ ಚಂದ್ರಶೇಖರ ಎಂಬುವವರ ಪುತ್ರ ಓದುತ್ತಿದ್ದ ಪ್ರಜ್ವಲ್ (15) ಮೃತ ವಿದ್ಯಾರ್ಥಿ.
ಇದನ್ನೂ ಓದಿ: ನನಸಾಗದ ನೆಲ್ಯಾಡಿ– ಚಿತ್ರದುರ್ಗ ಚತುಷ್ಪಥ ಹೆದ್ದಾರಿ | ಯೋಜನೆ ಕೈಬಿಟ್ಟ ಎನ್ಎಚ್ಎಐ

ಶನಿವಾರ ಸಂಜೆ ಓದಿಕೊಳ್ಳುತ್ತೇನೆ ಎಂದು ಪಕ್ಕದಲ್ಲೇ ಇದ್ದ ಅವರ ಮತ್ತೊಂದು ಮನೆಗೆ ಹೋದವನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಾಲೆಯಲ್ಲಿ ಈಚೆಗೆ ನಡೆಸಿದ್ದ ತರಗತಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ಹಿನ್ನೆಲೆಯಲ್ಲಿ ಪೋಷಕರನ್ನು ಕರೆದುಕೊಂಡು ಬಾ ಎಂದು ಶಿಕ್ಷಕರು ಹೇಳಿದ್ದರು ಎನ್ನಲಾಗಿದೆ.
ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
