Connect with us

    ರಾಜ್ಯಮಟ್ಟದ ಸರ್ವ ಧರ್ಮೀಯ ವಧು ವರರ ಸಮಾವೇಶ | 21ರಂದು ಬೆಂಗಳೂರಿನಲ್ಲಿ ಆಯೋಜನೆ

    ಮುಖ್ಯ ಸುದ್ದಿ

    ರಾಜ್ಯಮಟ್ಟದ ಸರ್ವ ಧರ್ಮೀಯ ವಧು ವರರ ಸಮಾವೇಶ | 21ರಂದು ಬೆಂಗಳೂರಿನಲ್ಲಿ ಆಯೋಜನೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 16 JANUARY 2024
    ಚಿತ್ರದುರ್ಗ (CHITRADURGA): ಇಲ್ಲಿನ ಬಸವೇಶ್ವರ ವಧು ವರರ ಮಾಹಿತಿ ಕೇಂದ್ರದಿಂದ ಜ.21 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸರ್ವಧರ್ಮ ವಧು ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ.

    ಇದನ್ನೂ ಓದಿ: ಅಡಿಕೆ ಬೆಳೆಗೆ ಹನಿ ನೀರಾವರಿ, ನರೇಗಾ ಸೌಲಭ್ಯಕ್ಕೆ ಸಚಿವರ ಒಪ್ಪಿಗೆ

    ಅಂದು ಬೆಳಿಗ್ಗೆ 11ಗಂಟೆಗೆ ಬೆಂಗಳೂರಿನ ಗಾಂಧಿನಗರದ, ಎರಡನೇ ಮುಖ್ಯ ರಸ್ತೆಯ ಮಹಾರಾಷ್ಟ್ರ ಮಂಡಳದ ಸಭಾಂಗಣದಲ್ಲಿ ಸಮಾವೇಶ ನಡೆಯಲಿದೆ. ಬೆಂಗಳೂರು ಸರ್ಪ ಭೂಷಣ ಶಿವಯೋಗಿಗಳ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಬೆಳಗಾವಿ ಜಿಲ್ಲೆ ಶಿರಸಂಗಿ ಮಹಲಿಂಗೇಶ್ವರ ಮಠದ ಶ್ರೀ ಬಸವ ಮಹಾಂತ ಸ್ವಾಮೀಜಿ ಸಮಾವೇಶದ ಸಾನಿಧ್ಯವಹಿಸಲಿದ್ದಾರೆ.

    ಇದನ್ನೂ ಓದಿ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ | ಸ್ಥಳದಲ್ಲೇ ಮೃತಪಟ್ಟ ಸುಚಿತ್ರಾ

    ಬಸವೇಶ್ವರ ವಧು ವರರ ಮಾಹಿತಿ ಕೇಂದ್ರವು 1996-97ರಲ್ಲಿ ಪ್ರಾರಂಭಗೊಂಡು ಈವರೆಗೂ ರಾಜ್ಯದ ವಿವಿಧೆಡೆ ಸಮಾವೇಶ ಆಯೋಜಿಸಿ ಯಶಸ್ವಿಯಾಗಿದೆ. ಒಂದು ಜಾತಿ, ಜನಾಂಗ, ಧರ್ಮಕ್ಕೆ ಸೀಮಿತವಾಗಿರದೆ ಎಲ್ಲರನ್ನೊಳಗೊಂಡ ವಧು ಹಾಗೂ ವರರ ಪರಸ್ಪರ, ಭೇಟಿ ಚರ್ಚೆ ನಡೆದು ಮುಂದೆ ಒಪ್ಪಿಕೊಂಡು ಕಲ್ಯಾಣ ಮಹೋತ್ಸವಗಳು ನಡೆಯಲು ಒಂದು ವೇದಿಕೆಯಾಗಿದೆ.

    ಎಷ್ಟೋ ಮದುವೆಗಳು ಈಗಾಗಲೇ ನಡೆದಿವೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಮಾಹಿತಿ ಕೇಂದ್ರದ ಸಂಚಾಲಕ ಹಾಗೂ ವ್ಯವಸ್ಥಾಪಕ ಜೆ.ಎಂ.ಜಂಬಯ್ಯ (9980658625) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top