By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಬಬ್ಬೂರು ಕೃಷಿ ತರಬೇತಿ ಕೇಂದ್ರಕ್ಕೆ ರಾಜ್ಯಮಟ್ಟದ ಅವಾರ್ಡ್‌ | ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಆರ್‌.ರಜನಿಕಾಂತ್‌
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಬಬ್ಬೂರು ಕೃಷಿ ತರಬೇತಿ ಕೇಂದ್ರಕ್ಕೆ ರಾಜ್ಯಮಟ್ಟದ ಅವಾರ್ಡ್‌ | ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಆರ್‌.ರಜನಿಕಾಂತ್‌

ಮುಖ್ಯ ಸುದ್ದಿ

ಬಬ್ಬೂರು ಕೃಷಿ ತರಬೇತಿ ಕೇಂದ್ರಕ್ಕೆ ರಾಜ್ಯಮಟ್ಟದ ಅವಾರ್ಡ್‌ | ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಆರ್‌.ರಜನಿಕಾಂತ್‌

chitradurganews.com
Last updated: 20 April 2025 19:39
chitradurganews.com
2 months ago
Share
State award for Babburu tryning center
ಬಬ್ಬೂರು ಕೃಷಿ ತರಬೇತಿ ಕೇಂದರಕ್ಕೆ ರಾಜ್ಯಮಟ್ಟದ ಪುರಸ್ಕಾರ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 21 APRIL 2025

ಚಿತ್ರದುರ್ಗ: ಜಿಲ್ಲೆಯ ರೈತರಿಗೆ ಕೃಷಿ ಮಾಹಿತಿ ಒದಗಿಸುವ, ತರಬೇತಿ ನೀಡುವ ಕೃಷಿ ಇಲಾಖೆಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕ್ರಿಯಾಶೀಲತೆ ಕಾರಣಕ್ಕೆ ಕೃಷಿ ಇಲಾಖೆಯಿಂದ ಕೊಡಮಾಡುವ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ.

ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲೂಕು ಬಬ್ಬೂರು ಫಾರಂ ನಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಇಡೀ ವರ್ಷ ನಡೆದ ಚಟುವಟಿಕೆಗಳನ್ನು ಆಧರಿಸಿ ಈ ಪ್ರಶಸ್ತಿ ನೀಡಲಾಗಿದೆ.

ಇದನ್ನೂ ಓದಿ: 60 ಸಾವಿರದತ್ತ ಅಡಿಕೆ ಧಾರಣೆ | ಇಂದಿನ ಚನ್ನಗಿರಿ ಮಾರುಕಟ್ಟೆ ರೇಟ್‌

ಬೆಂಗಳೂರಿನಲ್ಲಿ ಏ.16 ಮತ್ತು 17 ರಂದು ನಡೆದ ರಾಜ್ಯ ಮಟ್ಟದ ಮುಂಗಾರು ಹಂಗಾಮಿಕ ಕಾರ್ಯಾಗಾರದಲ್ಲಿ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಬಬ್ಬೂರು ಕೃಷಿ ತರಬೇತಿ ಕೇಂದ್ರಕ್ಕೆ ರಾಜ್ಯಮಟ್ಟದಲ್ಲಿ ದ್ವಿತೀಯ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಕೃಷಿ ತರಬೇತಿಯಲ್ಲಿ ರೈತರನ್ನು ತೊಡಗಿಸಿಕೊಳ್ಳುತ್ತಿರುವ ರೀತಿ, ಸಾಮಾಜಿಕ ಜಾಲಾತಾಣ, ಸೋಷಿಯಲ್‌ ಮೀಡಿಯಾ, ಪತ್ರಿಕಾ ಮಾಧ್ಯಮಗಳನ್ನು ಬಳಸಿಕೊಂಡು ಹೆಚ್ಚು ರೈತರನ್ನು ತಲುಪಿ, ಸ್ವಯಂ ತರಬೇತಿಗೆ ರೈತರೇ ಆಸಕ್ತಿಯಿಂದ ನೊಂದಣಿ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ತರಬೇತಿ ಕೇಂದ್ರಕ್ಕೆ ಈ ಪುರಸ್ಕಾರ ದೊರೆತಿದೆ.

ಇದನ್ನೂ ಓದಿ: ರೈತರಿಗೆ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬಬ್ಬೂರು ಫಾರಂನ ಮುಖ್ಯಸ್ಥ ಹಾಗೂ ಸಹಾಯಕ ಕೃಷಿ ನಿರ್ದೇಶಕ ರಜನಿಕಾಂತ.ಆರ್‌. ಜಂಟಿ ಕೃಷಿ ನಿರ್ದೇಶಕ ಡಾ.ಮಂಜುನಾಥ ಬಿ., ಉಪ ಕೃಷಿ ನಿರ್ದೇಶಕರಾದ ಡಾ.ಬಿ.ಎನ್.ಪ್ರಭಾಕರ್ ಮತ್ತು ಕೆ.ಎಸ್. ಶಿವಕುಮಾರ ಅವರೊಂದಿಗೆ ಕೃಷಿ ಸಚಿವ ಎನ್.ಚೆಲುವರಾಯ ಸ್ವಾಮಿ, ಕೃಷಿ ಆಯುಕ್ತರಾದ ವೈ.ಎಸ್.ಪಾಟೀಲ್ ಹಾಗೂ ಕೃಷಿ ನಿರ್ದೇಶಕರಾದ ಡಾ.ಜಿ.ಟಿ ಪುತ್ರ ಇವರ ಸಮ್ಮುಖದಲ್ಲಿ ಪ್ರಶಸ್ತಿ ಸ್ವೀಕರಿಸಲಾಗಿದೆ.

ಆರ್‌.ರಜನಿಕಾಂತ್‌
ಆರ್‌.ರಜನಿಕಾಂತ್‌

ಯಶಸ್ಸಿನ ಕಥೆ ಬಿಚ್ಟಿಟ್ಟ ಅಧಿಕಾರಿ ರಜನಿಕಾಂತ್‌:

ಮುಂಗಾರು ಹಂಗಾಮಿನ ರಾಜ್ಯ ಮಟ್ಟದ ಕಾರ್ಯಾಗಾರಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸುಮಾರು ೫೦೦ ಜನ ಕೃಷಿ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದು, ಜಿಲ್ಲೆಯಿಂದ ತೆರಳಿದ್ದ, ಬಬ್ಬೂರು ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಜನಿಕಾಂತ್‌ ಅವರಿಗೆ ತರಬೇತಿ ಕೇಂದ್ರದ ಯಶಸ್ನಿ ಅನುಭವ ಹಂಚಿಕೊಳ್ಳಲು ಅವಕಾಶ ದೊರೆತಿದೆ.

ಇದನ್ನೂ ಓದಿ: ರೈತರಿಗೆ ಸಹಜ ಕೃಷಿ – ಸಂತೃಪ್ತ ಜೀವನಕ್ಕೆ ದಾರಿ ಕಾರ್ಯಾಗಾರ ಉದ್ಘಾಟನೆ 

ಈ ವೇಳೆ, ರೈತರಿಗೆ ತರಬೇಯಿ ನೀಡಲು ಉತ್ತಮ ಸಂಪನ್ಮೂಲ ವ್ಯಕ್ತಿಗಳ ಆಯ್ಕೆ, ಆಸಕ್ತ ರೈತರ ನೊಂದಣಿ ಹಾಗೂ ವ್ಯಾಪಕ ಪ್ರಚಾರ, ಸುಸಜ್ಜಿತ ವಸತಿ, ಊಟೋಪಚಾರ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮುಂದುವರೆದು ಮಾತನಾಡಿದ ಅವರು, ಕೃಷಿ ಭಾಗ್ಯ, ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಮತ್ತು ಅಟಲ್ ಭೂಜಲ ಯೋಜನೆಗಳ ಮೂಲಕ ವಿವಿಧ ತಾಂತ್ರಿಕತೆಗಳ ಅನುಷ್ಟಾನ, ಸುಸ್ಥಿರ ಕೃಷಿ, ನೈಸರ್ಗಿಕ ಕೃಷಿ, ಸಾವಯವ ಕೃಷಿ, ಮಣ್ಣು ಮತ್ತು ನೀರು ಸಂರಕ್ಷಣೆ, ಸಮಗ್ರ ಕೃಷಿ ಪದ್ದತಿ, ಕೃಷಿ ಮತ್ತು ತೋಟಗಾರಿಕೆ ಬೆಳೆಗಲ್ಲಿ ಸುಧಾರಿತ ಬೇಸಾಯ ಕ್ರಮಗಳು, ಪಶು ಸಂಗೋಪನೆ, ಜೇನು ಸಾಕಾಣಿಕೆ, ಆಹಾರ ಮತ್ತು ಆರೋಗ್ಯ, ಆರೋಗ್ಯಕರ ಜೀವನ ಶೈಲಿ, ಒತ್ತಡ ನಿರ್ವಹಣೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ನಿರಂತರ ತರಬೇತಿಗಳು ನಡೆಯುತ್ತಿವೆ.

ಇದನ್ನೂ ಓದಿ:  ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿ | ಸುಧಾರಿತ ಅಡಿಕೆ ಬೇಸಾಯ ತರಬೇತಿ | ಆಸಕ್ತ 50 ರೈತರಿಗೆ ಅವಕಾಶ

ನೇರವಾಗಿ ಭಾಗವಹಿಸಲು ಸಾಧ್ಯವಾಗದ ರೈತರಿಗೆ ಆನ್‌ಲೈನ್‌ ಮೂಲಕ ತರಬೇತಿ ವ್ಯವಸ್ಥೆ ಮಾಡಿಕೊಂಡಿದ್ದು, ಯೂಟ್ಯೂಬ್‌, ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಮಾಧ್ಯಮಗಳನ್ನು ಸಮರ್ಥವಾಗಿ ಉಪಯೋಗಿಸಿಕೊಳ್ಳಲಾಗುತ್ತಿದ ಎಂದು ವಿವರಿಸಿದರು.

ತರಬೇತಿ ಕೇಂದ್ರದಲ್ಲಿ ಸುಸಜ್ಜಿತ ವಸತಿ ವ್ಯವಸ್ಥೆ ಇದ್ದು, ಉಚಿತ ತರಬೇತಿ ಜೊತೆಗೆ ಬೆಳಗಿನ ಉಪಹಾರ, ರಾಗಿ ಅಂಬಲಿ, ಟೀ/ಕಾಫಿ ಬದಲು ಕಷಾಯ/ಶರಬತ್ತು, ಮಧ್ಯಾಹ್ನದ ಊಟದಲ್ಲಿ ಗಾಣದ ಎಣ್ಣೆಯಿಂದ ತಯಾರಿಸಿದ ರುಚಿಕರ, ಪೋಷಕಾಂಶಭರಿತ ಊಟ, ಮಜ್ಜಿಗೆ, ಬಾಳೆಹಣ್ಣು ನೀಡಲಾಗುತ್ತಿದೆ ಎಂದು ರಜನಿಕಾಂತ್‌ ತಿಳಿಸಿದ್ದಾರೆ.

ಇದನ್ನೂ ಓದಿ: ತುಪ್ಪ ಅಥವಾ ಬೆಣ್ಣೆಯಲ್ಲಿ ಮಕ್ಕಳಿಗೆ ಯಾವುದು ಪ್ರಯೋಜನಕಾರಿ?

ಕೃಷಿ ತರಬೇತಿ ಕೇಂದ್ರದಲ್ಲಿ ಉತ್ತಮವಾದ ವಾತಾವರಣ ಕಲ್ಪಿಸಿದ್ದು, ರೈತಸ್ನೇಹಿ ಪರಿಸರದ ಕಾರಣಕ್ಕೆ ಯಶಸ್ಸು ದೊರೆತಿದೆ ಎಂದು ವಿವರಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Agriculture MinisterBabburBabbur Agricultural Training CentreChitradurgaChitradurga LatestChitradurga newsDepartment of AgriculturefeaturedHiriyurKannada NewsN. CheluvarayaswamyR. RajinikanthState Level Awardಆರ್‌.ರಜನಿಕಾಂತ್‌ಎನ್.ಚೆಲುವರಾಯಸ್ವಾಮಿಕನ್ನಡ ಸುದ್ದಿಕೃಷಿ ಇಲಾಖೆಕೃಷಿ ಸಚಿವಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಬಬ್ಬೂರುಬಬ್ಬೂರು ಕೃಷಿ ತರಬೇತಿ ಕೇಂದ್ರರಾಜ್ಯಮಟ್ಟದ ಪ್ರಶಸ್ತಿಹಿರಿಯೂರು
Share This Article
Facebook Email Print
Previous Article ನಿಮ್ಮ ಮುಖವನ್ನು ಆಗಾಗ್ಗೆ ತೊಳೆಯುವುದು ಸರಿಯೇ? 
Next Article Leapord ರೈತರಿಗೆ ತಲೆನೋವಾಗಿದ್ದ ಚಿರತೆ ಸೆರೆ | ಬೋನಿನೊಳಗೆ ಆರ್ಭಟಿಸಿ ಆತಂಕ ಮೂಡಿಸಿದ ಒಂಟಿ ಚಿರತೆ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up