CHITRADURGA NEWS | 21 JUNE 2024
ಚಿತ್ರದುರ್ಗ: ನಗರದ ಭೋವಿ ಗುರುಪೀಠದ ಆವರಣದಲ್ಲಿ ಜುಲೈ 18 ರಂದು ರಾಜ್ಯಮಟ್ಟದ ಬೃಹತ್ ಭೋವಿ ಜನೋತ್ಸವ ನಡೆಯಲಿದೆ. ಅಂದು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ಜನ್ಮದಿನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರವೇರಲಿವೆ.
ಜನೋತ್ಸವ ಕುರಿತು ಬೆಂಗಳೂರಿನ ಜಸ್ಮಾ ಭವನದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಸಾನಿಧ್ಯವಹಿಸಿ ಮಾತನಾಡಿದ, ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ‘ಸಮಾಜ ಸಂಘಟನೆಯಲ್ಲಿ ಬಲಿತ ಹಾಗೂ ದಲಿತ ಎರಡು ವರ್ಗಗಳಿಗೂ ಶಕ್ತಿ ತುಂಬುವ ಚೇತನವಿದೆ. ಸಂಘಟನೆಗೊಂಡ ಸಮಾಜ ಮಾತ್ರ ಎಲ್ಲಾ ರಂಗಗಳಲ್ಲಿಯೂ ಮುಖ್ಯವಾಹಿನಿಗೆ ಬಂದಿದೆ. ಇದನ್ನರಿತು ಬಾಬಾ ಸಾಹೇಬರ ನುಡಿಯಂತೆ ಶಿಕ್ಷಣ, ಸಂಘಟನೆ, ಹೋರಾಟಕ್ಕೆ ಆದ್ಯತೆ ನೀಡಬೇಕು’ ಎಂದರು.
‘ಎಲ್ಲಾ ರಂಗಗಳ ಸಾಧಕರನ್ನು ಗುರುತಿಸುವ ಹಾಗೂ ಪ್ರೋತ್ಸಹಿಸುವ ಕ್ಷೇತ್ರವಾಗಿ ಭೋವಿ ಗುರುಪೀಠ ಕಾರ್ಯನಿರ್ವಹಿಸುತ್ತಿದೆ. ಭೋವಿ ಸಮಾಜದ ಭೂತ, ವರ್ತಮಾನ, ಭವಿಷ್ಯ ದಿಕ್ಸೂಚಿ ಮಹಾಸಂಗಮವೇ ಭೋವಿ ಜನೋತ್ಸವ ಸಮಾರಂಭ’ ಎಂದು ತಿಳಿಸಿದರು.


‘ಭೋವಿ ಜನೋತ್ಸವ ಎನ್ನುವುದು ಹಿಂದೆ ಸಣ್ಣದಾಗಿ ಶುರುವಾದ ಕಾರ್ಯಕ್ರಮ, ಅವತ್ತು ಇಷ್ಟೇಲ್ಲ ಆಗುತ್ತದೆ ಎನ್ನುವ ಬಗ್ಗೆ ಯೋಚನೆಯೇ ಇರಲಿಲ್ಲ. ಆದರೆ, ಈಗ ದೊಡ್ಡ ಮಟ್ಟದಲ್ಲಿ ನಡೆಯತ್ತಿದೆ. ಕಳೆದ ವರ್ಷ ಸರಳವಾಗಿ ಕಾರ್ಯಕ್ರಮ ನಡೆದಿತ್ತು. ಈ ಬಾರಿ ಅದನ್ನು ಮತ್ತಷ್ಟು ಅರ್ಥಪೂರ್ಣಗೊಳಿಸಬೇಕಿದೆ’ ಎಂದರು.
ಕ್ಲಿಕ್ ಮಾಡಿ ಓದಿ: ಕಲ್ಲು ಗಣಿ ಗುತ್ತಿಗೆ ಮಂಜೂರಾತಿಗೆ 160 ಅರ್ಜಿ ಬಾಕಿ| ಜಿಲ್ಲಾಧಿಕಾರಿ ಟಿ.ವೆಂಕಟೇಶ್
‘ಸಚಿವ ಶಿವರಾಜ್ ತಂಗಡಗಿ ಅವರ ಸಮಾಜಪರ ಕಾಳಜಿಯನ್ನು ಮುಕ್ತ ಕಂಠದಿಂದ ಬಣ್ಣಿಸಿದ ಶ್ರೀಗಳು, ಸಮಾಜದ ಒಬ್ಬರು ಸಚಿವರಾಗಿದ್ದಕ್ಕೆ ಸಾಕಷ್ಟು ಅವಕಾಶಗಳು ಸಮಾಜಕ್ಕೆ ಸಿಕ್ಕಿವೆ. ಎಲ್ಲದಕ್ಕೂ ಸ್ಪಂದನೆ ಮಾಡುವ ಸಕರಾತ್ಮಕ ಮನೋಭಾವ ತಂಗಡಗಿ ಅವರದ್ದು. ಅದರಿಂದಲೇ ಸಾಕಷ್ಟು ಕೆಲಸಗಳಾಗಿವೆ’ ಎಂದು ತಿಳಿಸಿದರು.
‘ಅವರದ್ದು ನಿಷ್ಠುರ, ಗಟ್ಟಿಯಾಗಿ ನಿಲ್ಲುವ ಸ್ವಭಾವ. ಸರ್ಕಾರದಿಂದ ಎಲ್ಲವನ್ನು ಕೊಡಿಸುವ ಗುಣ ಅವರಲ್ಲಿದೆ. ಸರ್ಕಾರದ ಮಟ್ಟದಲ್ಲಿ ಏನಾದರೂ ತೆಗೆದುಕೊಂಡರೆ ಅದನ್ನು ಅವರು ಈಡೇರಿಸದೇ ಬಿಡುವುದಿಲ್ಲ. ಇವರು ಅವರು ಸಚಿವರಾಗಿದ್ದು ಭೋವಿ ಸಮಾಜದಿಂದಲ್ಲ, ತಮ್ಮ ವೈಯಕ್ತಿಕ ಶಕ್ತಿಯಿಂದ. ಆದರೆ ನಮಗೆ ನಮ್ಮವರೊಬ್ಬರು ಸಚಿವರಾಗಿದ್ದಾರೆ ಎನ್ನುವುದು ಹೆಮ್ಮೆ. ಜಗತ್ತಿಗೆ ಸೂರ್ಯ ಬೆಳಕು ನೀಡುವ ಹಾಗೆ ತಂಗಡಗಿ ಅವರು ಸಮಾಜಕ್ಕೆ ಬೆಳಕು. ಅವರು ಒಬ್ಬ ಪ್ರಬುದ್ಧ ರಾಜಕಾರಣಿ’ ಎಂದರು.

ಸಚಿವ ಶಿವರಾಜ್ ತಂಗಡಗಿ ಮಾತನಾಡಿ, ‘ಭೋವಿ ಸಮಾಜವನ್ನು ಕಟ್ಟುವ ಕೆಲಸ ಬಹು ಕ್ಲಿಷ್ಟಕರ. ಆದರೆ ಭೋವಿ ಗುರುಪೀಠದ ಜಗದ್ಗುರುಗಳು ಕಾಲಿಗೆ ಚಕ್ರ ಕಟ್ಟಿಕೊಂಡು ಸಮಾಜವನ್ನು ಸಂಘಟಿಸಿದರು. ಈ ಪರಿಣಾಮ ನಾನಿಂದು ಮಂತ್ರಿಯಾಗಿರುವೆ’ ಎಂದು ತಿಳಿಸಿದರು.
‘ಭೋವಿ ನಿಗಮ ಸ್ಥಾಪನೆಯಾಗಿದೆ. ಶಾಸಕರ ಸಂಖ್ಯೆ ಹೆಚ್ಚಾಗುತ್ತಿದೆ. ನಿಗಮ ಮಂಡಳಿಗಳ ಆಯಾಕಟ್ಟಿನ ಜಾಗದಲ್ಲಿ ಅಧ್ಯಕ್ಷರು ನಿರ್ದೇಶಕರು ನೇಮಕಗೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳ ಆಪ್ತವಲಯದ ಶ್ರೀಗಳಾಗಿ ಗುರುತಿಸಿಕೊಂಡಿದ್ದಾರೆ. ಪರಿಣಾಮ ಕೆಪಿಎಸ್ಸಿ ಸದಸ್ಯರ ನೇಮಕವಾಗುತ್ತಿದೆ. ಇಮ್ಮಡಿ ಶ್ರೀಗಳ ಸಮಾಜ ಬದ್ಧತೆಯಿಂದಾಗಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ ಹಾಗೂ ಧಾರ್ಮಿಕವಾಗಿ ಸಮುದಾಯ ಬಲಗೊಳ್ಳುತ್ತಿದೆ’ ಎಂದರು.
ಕ್ಲಿಕ್ ಮಾಡಿ ಓದಿ: ಸಾಹಿತಿಗಳು ರಾಜಕಾರಣಿಗಳೇ ಎಂದಿದ್ದು ತಪ್ಪು | ಸಾಣೇಹಳ್ಳಿ ಶ್ರೀ
ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಮಾಜಿ ಅಧ್ಯಕ್ಷ ಸೀತರಾಮ್, ವಕೀಲ ಶಂಕರಪ್ಪ, ಹಾವೇರಿ ಜಿಲ್ಲಾಧ್ಯಕ್ಷ ರವಿ ಪೂಜಾರ್, ಸಮಾಜದ ಮುಖಂಡರಾದ ಎಂ.ರಾಮಪ್ಪ, ತಿಪ್ಪಣ್ಣ, ಪರುಸಪ್ಪ ಅಮರಾವತಿ, ಕೃಷ್ಣಪ್ಪ, ಬಸವರಾಜ್, ಸೂಚಪ್ಪದೇವರಮನೆ, ಲಕ್ಷ್ಮಣ್ ಭೋವಿ, ರವಿಗುಂಚ್ಕರ್, ಮಂಜಪ್ಪ ಎಚ್.ನರೇಶ್ ಮಲೆನಾಡು, ವೆಂಕಟರಾಮ್, ದಯಾನಂದ್ ಭೀಮಣ್ ಕಳಸದ್, ಹನುಮಂತಪ್ಪ, ಸುಭಾಷ್, ವೈ.ತಿಮ್ಮರಾಜು, ವೀರೇಶ್ ಕ್ಯಾತಿನಕೊಪ್ಪ, ದೇಶಾದ್ರಿ ಹೊಸಮನೆ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
