CHITRADURGA NEWS | 25 FEBRUARY 2025
ಚಿತ್ರದುರ್ಗ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ABVP) ಕರ್ನಾಟಕ ವತಿಯಿಂದ ಕೋಟೆನಾಡು ಚಿತ್ರದುರ್ಗದಲ್ಲಿ ರಾಜ್ಯ ಮಟ್ಟದ ವಿದ್ಯಾರ್ಥಿ ಬರಹಗಾರರ ಶಿಬಿರ-2025 ‘ಅರಳುವ ಪ್ರತಿಭೆ’ ಹಮ್ಮಿಕೊಳ್ಳಲಾಗಿದೆ.
ನಗರದ ಐತಿಹಾಸಿಕ ಮುರುಘಾ ಮಠದಲ್ಲಿ ಮಾರ್ಚ್ 7,8 ಮತ್ತು 9 ರಂದು ಮೂರು ದಿನಗಳ ಕಾಲ ಈ ಶಿಬಿರ ನಡೆಯಲಿದೆ.

ಇದನ್ನೂ ಓದಿ: ತಹಶೀಲ್ದಾರ್ ಡಾ.ನಾಗವೇಣಿ ವರ್ಗಾವಣೆ | ಚಿತ್ರದುರ್ಗಕ್ಕೆ ನೂತನ ತಹಶೀಲ್ದಾರ್
- ಶಿಬಿರದಲ್ಲಿ ಕಥೆ, ಕವನ, ಕಾದಂಬರಿ, ಪ್ರಬಂಧ, ಲೇಖನಗಳ ಕುರಿತು ತರಬೇತಿ ನೀಡಲಾಗುತ್ತದೆ.
- ಸಾಹಿತ್ಯ, ಪತ್ರಿಕೋದ್ಯಮ, ಬ್ಲಾಗಿಂಗ್ ಕುರಿತು ಪ್ರಾಯೋಗಿಕ ವಿವರಣ, ಈ ಶಿಬಿರಕ್ಕೆ 18 ರಿಂದ 30 ವಯೋಮಾನದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಬಹುದಾಗಿದೆ.
ಇದನ್ನೂ ಓದಿ: ನಿರುದ್ಯೋಗಿಗಳಿಗೆ ಶುಭ ಸುದ್ದಿ | ಚಿತ್ರದುರ್ಗದಲ್ಲಿ ಬೃಹತ್ ಉದ್ಯೋಗ ಮೇಳ
- ಶಿಬಿರದಲ್ಲಿ ಅನುಭವಿ, ಖ್ಯಾತ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ಕಾರ್ಯಾಗಾರ ನಡೆಸಿಕೊಡಲಿದ್ದಾರೆ.
- ಮೂರು ದಿನಗಳ ಕಾಲ ನಡೆಯುವ ಈ ಶಿಬಿರಕ್ಕೆ 100 ಶುಲ್ಕ ನಿಗಧಿ ಮಾಡಲಾಗಿದೆ.
- 2025 ಮಾರ್ಚ್ 7 ರಂದು ಮಧ್ಯಾಹ್ನ 12 ಗಂಟೆಗೆ ಶಿಬಿರಾರ್ಥಿಗಳು ಆಗಮಿಸಬೇಕು. ಅಂದು ಸಂಜೆ 4 ಗಂಟೆಗೆ ಉದ್ಘಾಟನೆಯಾಗಲಿದೆ.
- ಶಿಬಿರಕ್ಕೆ 75 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಮೊದಲು ನೊಂದಣಿ ಮಾಡಿಸಿಕೊಂಡವರಿಗೆ ಆಧ್ಯತೆ ನೀಡಲಾಗುತ್ತದೆ.
ಮಾರ್ಚ್ 4 ನೊಂದಣಿಗೆ ಕೊನೆಯ ದಿನವಾಗಿದ್ದು, ನೊಂದಣಿಯನ್ನು ಆನ್ಲೈನ್ ಅಥವಾ ದೂರವಾಣಿ ಕರೆ ಮೂಲಕವೂ ಮಾಡಬಹುದಾಗಿದೆ ಎಂದು ಎಬಿವಿಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ಮುಖ್ಯಮಂತ್ರಿಗೆ ಪತ್ರ ಬರೆದ ಸಚಿವ ಡಿ.ಸುಧಾಕರ್ | ಪತ್ರದ ಪೂರ್ಣ ವಿವರ ಇಲ್ಲಿದೆ
ಹೆಚ್ಚಿನ ಮಾಹಿತಿಗೆ 6363044610/7760515161/7337669656/9986572664 ಸಂಪರ್ಕಿಸಬಹುದಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
