CHITRADURGA NEWS | 21 NOVEMBER 2024
ಚಿತ್ರದುರ್ಗ: ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಮಧ್ಯಕರ್ನಾಟಕ ರಾಜ್ಯ ಹಾಗೂ ಕೇಂದ್ರ ಸರ್ಕಾರ( ಉಪೇಕ್ಷೆ ಮಾಡಿರುವುದ ರೈತ ಸಂಘ ಗಂಭೀರವಾಗಿ ಪರಿಣಿಸಿದೆ. ಭದ್ರಾ ಮೇಲ್ದಂಡೆ(Upper Bhadra) ಕಾಮಗಾರಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ ರಾಜ್ಯವ್ಯಾಪಿ ಹೋರಾಟ ನಡೆಸಲಾಗುವುದೆಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

ಕ್ಲಿಕ್ ಮಾಡಿ ಓದಿ: ಮಹರ್ಷಿ ವಾಲ್ಮೀಕಿ ವಿಗ್ರಹ ಪ್ರತಿಷ್ಠಾಪನೆ ಸಂಭ್ರಮ | ವೇದಾವತಿಯಿಂದ ಗಂಗಾ ಪೂಜೆ
ಇಲ್ಲಿನ ಪತ್ರಕರ್ತರ ಸಾಂಸ್ಕೃತಿಕ ಭವನದಲ್ಲಿ ಗುರುವಾರ ಆಯೋಜಿಸಿದ್ದ ನುಲೇನೂರು ಶಂಕ್ರಣ್ಣ ನೆನಪು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕಾವೇರಿ ನೀರಿಗಾಗಿ ಈ ಭಾಗದ ಜನ ಮಂಡ್ಯ, ಮೈಸೂರು ರೈತರ ಕೂಗಿಗೆ ದನಿಯಾಗಿದ್ದಾರೆ. ಆದರೆ ಆ ಭಾಗದಿಂದ ಮಧ್ಯಕರ್ನಾಟಕದ ನೀರಾವರಿಗಳಿಗೆ ಬೆಂಬಲ ಲಭ್ಯವಾಗುತ್ತಿಲ್ಲ. ಹಾಗಾಗಿ ರೈತ ಸಂಘದಿಂದ ಭದ್ರಾ ಮೇಲ್ದಂಡೆ ಬೆಂಬಲಿಸಿ ಹೋರಾಟ ನಡೆಸಲಾಗುವುದೆಂದರು.
ರೈತರ ಸ್ವಾಧೀನದಲ್ಲಿರುವ ಭೂಮಿಯನ್ನು ವಕ್ಫ್ ಹೆಸರಿನಲ್ಲಿ ಕಸಿಯಲು ಅವಕಾಶ ಕೊಡುವುದಿಲ್ಲ. ರೈತರನ್ನು ಒಕ್ಕಲೆಬ್ಬಿಸುವ ಸಂದರ್ಭ ಸೃಷ್ಟಿಯಾಗದಂತೆ ಎಚ್ಚರವಹಿಸಲಾಗುವುದು. ಮುಂಬವರು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಕನಿಷ್ಟ ಒಂದು ಜಿಪಂ ಹಾಗೂ ಒಂದು ತಾಪಂ ಕ್ಷೇತ್ರ ಗೆಲ್ಲವು ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತಿದೆ. ಇದಕ್ಕಾಗಿ ಪ್ರತಿ ಹಳ್ಳಿಯಲ್ಲಿಯೂ ಕಾರ್ಯಕರ್ತರ ತಂಡ ರಚಿಸಲಾಗುವುದೆಂದರು.
ಕ್ಲಿಕ್ ಮಾಡಿ ಓದಿ: ಮಲ್ಲಿಕಾರ್ಜುನ ಖರ್ಗೆ ನಾಗಪುರದ RSS ಕಚೇರಿಗೆ ಬರಲಿ | ಗೋವಿಂದ ಕಾರಜೋಳ ಆಹ್ವಾನ
ಟಿ.ನುಲೇನೂರು ಶಂಕರಪ್ಪನವರದು ಅಪರೂಪದ ವ್ಯಕ್ತಿತ್ವ. ಎಲ್ಲಿಯೇ ರೈತರ ಮೇಲೆ ದೌರ್ಜನ್ಯ, ದಬ್ಬಾಳಿಕೆಯಾಗಲಿ ಅಲ್ಲಿ ಹೋರಾಟಕ್ಕೆ ಮುಂದಿರುತ್ತಿದ್ದರು. ಹಸಿರು ಟವಲ್ಗೆ ಧಕ್ಕೆಯಾಗದಂತೆ ವ್ಯಕ್ತಿತ್ವ ರೂಪಿಸಿಕೊಂಡಿದ್ದರು.ಈಗ ಹೆಗಲ ಮೇಲೆ ಹಸಿರು ಟವಲ್ ಹಾಕಿಕೊಂಡು ಅನೇಕರು ಮರಳು ದಂಧೆ ಸೇರಿದಂತೆ ಅನೇಕ ಅಕ್ರಮಗಳಲ್ಲಿ ತೊಡಗಿರುವುದು ನಮ್ಮ ಗಮನಕ್ಕೆ ಬಂದಿದೆ. ಜಾತಿ ಧರ್ಮ ಎತ್ತಿಕಟ್ಟಿ ಸಮಾಜ ಹೊಡೆಯುವ ಇಂದಿನ ಪರಿಸ್ಥಿತಿಯಲ್ಲಿ ರೈತರ ಮೇಲೆ ಮಹತ್ತರ ಜವಾಬ್ದಾರಿಯಿದೆ ಎಂದು ಹೇಳಿದರು.
ಶಂಕರಪ್ಪನವರಂತ ನೂರಾರು ರೈತರನ್ನು ಹುಟ್ಟುಹಾಕಿ ಚಳುವಳಿಗೆ ಶಕ್ತಿ ತುಂಬಬೇಕಿದೆ. ಹಸಿರು, ನೀಲಿ, ಕೆಂಪು ಟವಲ್ ಜೊತೆಗೂಡಿ ಕೆಲಸ ಮಾಡುತ್ತಿದೆ. ರೈತ ಚಳುವಳಿಗೆ ಭೌತಿಕ ಶಕ್ತಿ ತುಂಬಬೇಕಿದೆ. ಚಳುವಳಿಯ ಮೇಲೂ ಧಾರ್ಮಿಕ ಭಾವನೆ ಬೀರುತ್ತಿರುವುದು ನೋವಿನ ಸಂಗತಿ.
ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಮಾತನಾಡಿ, ಎಲ್ಲರೊಡನೆಯೂ ಉತ್ತಮ ಒಡನಾಟವಿಟ್ಟುಕೊಂಡಿದ್ದ ಟಿ.ನುಲೇನೂರು ಶಂಕರಪ್ಪ ರೈತ ಪರ ಚಳುವಳಿ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದರು.
ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್
ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗಕ್ಕೆ ಭದ್ರಾಮೇಲ್ದಂಡೆ ಯೋಜನೆಗಾಗಿ ನಡೆದ ಎಲ್ಲಾ ಹೋರಾಟಗಳಲ್ಲಿಯೂ ಮುಂಚೂಣಿಯಲ್ಲಿರುತ್ತಿದ್ದ ಶಂಕರಪ್ಪನವರಿಗೆ ಜಿಲ್ಲೆಗೆ ನೀರು ಹರಿಸಬೇಕೆಂಬ ಆಸೆಯಿತ್ತು. ಆದರೆ ವಿಧಿ ಇಷ್ಟು ಬೇಗೆ ಸೆಳೆದುಕೊಳ್ಳುತ್ತದೆಂದು ನಾವುಗಳ್ಯಾರು ಊಹಿಸಿರಲಿಲ್ಲ ಎಂದರು.
ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿ, ಭದ್ರಾ ಮೇಲ್ದಂಡೆ ಹೋರಾಟದಲ್ಲಿ ನುಲೇನೂರು ಶಂಕ್ರಪ್ಪ ಅವರದು ಅವಿರತ ಪ್ರಯತ್ನ.ಸಮಿತಿ ಅಧ್ಯಕ್ಷರಾಗಿ ಹೋರಾಟ ಮುನ್ನಡೆಸುವಾಗಲೇ ನಮ್ಮನ್ನು ಅಗಲಿ್ದ್ದು ನೋವಿನ ಸಂಗತಿ.
ಜಿಲ್ಲೆಯಲ್ಲಿ ಕೋಟಿಗಟ್ಟಲೆ ಅಡಿಕೆ ಬೆಳೆಯುವ ರೈತರಿದ್ದಾರೆ. ಕೊಳವೆ ಬಾವಿಗಳಲ್ಲಿ ನೀರು ಹೋಗಿ ತೊಂದರೆ ಅನುಭವಿಸಿದ್ದಾರೆ. ಆದರೆ ಭದ್ರಾ ಮೇಲ್ದಂಡೆ ಹೋರಾಟದ ಜೊತೆ ಹೆಜ್ಚೆ ಹಾಕಲು ಅವರೆಲ್ಲ ಹಿಂದೇಟು ಹಾಕುತ್ತಿರುವುದು ತರವಲ್ಲದ ನಡವಳಿಕೆ ಎಂದರು.
ಕ್ಲಿಕ್ ಮಾಡಿ ಓದಿ: ಭರಮಸಾಗರದಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ | ನ.24 ರಂದು ಸಮಾಲೋಚನಾ ಸಭೆ
ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷರುಗಳಾದ ಶಿವಾನಂದಕುಗ್ವೆ, ಗೋವಿಂದರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ವಸಂತಕುಮಾರ್, ಸಿಪಿಐ ಮುಖಂಡ ಜಿ.ಸಿ.ಸುರೇಶ್ಬಾಬು, ಕಮಲಮ್ಮ ನುಲೇನೂರು ಎಂ.ಶಂಕರಪ್ಪ, ರಾಜ್ಯ ಮಹಿಳಾ ಉಪಾಧ್ಯಕ್ಷೆ ಮಂಜುಳ ಹಕ್ಕಿ, ಬಸ್ತಿಹಳ್ಳಿ ಸುರೇಶ್ಬಾಬು, ಹಂಪಯ್ಯನಮಾಳಿಗೆ ಧನಂಜಯ, ಚಿಕ್ಕಪ್ಪನಹಳ್ಳಿ ಷಣ್ಮುಖ, ಎಂ.ಎನ್. ಅಹೋಬಲಪತಿ, ಕೆ.ಆರ್.ದಯಾನಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
