
CHITRADURGA NEWS | 14 APRIL 2026
ಚಿತ್ರದುರ್ಗ: ದುಶ್ಚಟಗಳಿಂದ ದೂರವಿದ್ದು, ಗುಣಮಟ್ಟದ ಆಹಾರ ಪದ್ಧತಿ ಅನುಸರಿಸಿ, ಜೀವನ ಶೈಲಿ ಬದಲಾವಣೆಯೊಂದಿಗೆ ಹವ್ಯಾಸ ಬದಲಾಯಿಸಿ ಅದೃಷ್ಟ ಬದಲಾಗುತ್ತದೆ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಹೇಳಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
ನಗರದ ಸರ್ಕಾರಿ ಕಲಾ (ಸ್ವಾಯತ್ತ) ಕಾಲೇಜಿನಲ್ಲಿ ಈಚೆಗೆ ಆರೋಗ್ಯ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಎನ್ಎಸ್ಎಸ್ ಘಟಕ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಂತ್ರಜ್ಞಾನದ ಬೆಳವಣಿಗೆಗಳು ಜನರ ಜೀವಿತಾವಧಿಯನ್ನು ಹೆಚ್ಚಿಸುತ್ತಿವೆ. ಆರೋಗ್ಯಕ್ಕಾಗಿ ಒಟ್ಟಾಗಿ ವಿಜ್ಞಾನದೊಂದಿಗೆ ನಿಲ್ಲೋಣ, ರೋಗ ಮುಕ್ತ ಸಮಾಜ ನಿರ್ಮಿಸಲು ಶ್ರಮಿಸೋಣ, ಸ್ವಚ್ಛತೆಯಿಂದ ಆರೋಗ್ಯ ವೃದ್ಧಿ, ಸಾಂಕ್ರಾಮಿಕ ರೋಗಗಳು ಹಾಗೂ ಅಸಾಂಕ್ರಾಮಿಕ ರೋಗಗಳಾದ ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್ ಹಾವಳಿ ಹೆಚ್ಚಾಗದಂತೆ ಜೀವನ ಶೈಲಿ ಬದಲಾವಣೆ ಮಾಡಿಕೊಂಡು ಸದೃಢ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ದಾಪುಗಾಲು ಹಾಕಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
ರೋಗಗಳು ದೇವರ ಕಾಟ, ಪಾಪ ಪುಣ್ಯದ ಫಲವಲ್ಲ, ಉತ್ತಮ ಆರೋಗ್ಯ ಅಭ್ಯಾಸಗಳಿಂದ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಿ ರೋಗಗಳು ಸುಳಿಯದಂತೆ ತಡೆಯಬಹುದು ಎಂದು ಕಿವಿಮಾತು ಹೇಳಿದರು.
ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲರಾದ ಪ್ರೊ. ತಾರಿಣಿ ಶುಭದಾಯಿನಿ ಮಾತನಾಡಿ, ಆರೋಗ್ಯವೇ ಮಹಾಭಾಗ್ಯ ಆರೋಗ್ಯ ಹೊಂದಿದ್ದರೆ ಏನೆಲ್ಲಾ ಸಾಧಿಸಬಹುದು. ಆರೋಗ್ಯ ಇಲಾಖೆ ಅಧಿಕಾರಿಗಳು ಮಾರ್ಗದರ್ಶನ ನೀಡಿದಂತೆ ನಾವುಗಳೆಲ್ಲರೂ ಪಾಲಿಸಿ ಆರೋಗ್ಯವಂತ ದೇಶ ನಿರ್ಮಾಣ ಮಾಡಲು ಪ್ರಯತ್ನಿಸೋಣ ಎಂದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಂಚಾಲಕ ಪ್ರದೀಪ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಎನ್ಎಸ್ಎಸ್ ಘಟಕದ ಅಧಿಕಾರಿ ಬಸವರಾಜ್ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಕಾರ್ಯಕ್ರಮವಾಗಿದ್ದು, ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಇದನ್ನೂ ಓದಿ: ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ
ಎನ್ಎಸ್ಎಸ್ ಘಟಕದ ಪ್ರಸಾದ್, ಉಪನ್ಯಾಸಕರಾದ ಡಾ.ಸೌಮ್ಯ, ಇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
