
CHITRADURGA NEWS | 22 SEPTEMBER 2024
ಚಿತ್ರದುರ್ಗ: ದ್ವಾರಬಾಗಿಲು ಏಕಾಏಕಿ ಕುಸಿದು ಬಿದ್ದ ಪರಿಣಾಮ ವ್ಯಕ್ತಿ ತೀವ್ರ ಗಾಯಗೊಂಡಿರುವ ಘಟನೆ ಹೊಸದುರ್ಗದ ಶ್ರೀರಂಗಪುರ ಗ್ರಾಮದಲ್ಲಿ ನಡೆದಿದೆ.
ಹೊಸದುರ್ಗ ತಾಲ್ಲೂಕಿನ ಕಸಬಾ ಹೋಬಳಿಯ ಶ್ರೀರಂಗಪುರ ಗ್ರಾಮದಲ್ಲಿನ ಕಲ್ಲಿನ ದ್ವಾರ ನಿರ್ಮಿಸಲಾಗಿದೆ. ಆದರೆ ಶನಿವಾರ ಏಕಾಏಕಿ ಮುರಿದು ಬಿದ್ದ ಪರಿಣಾಮ ನೀರುಗಂಟಿ ಬಸವರಾಜ್ ತೀವ್ರ ಗಾಯಗೊಂಡಿದ್ದಾರೆ.
ಕ್ಲಿಕ್ ಮಾಡಿ ಓದಿ: ಅತ್ತೆ, ಮಾವನ ಕೊಲೆ ಪ್ರಕರಣ | ಅಳಿಯ ಎಸ್ಕೇಪ್ | ಇಬ್ಬರ ಬಂಧನ
ಜೆಸಿಬಿ ಯಂತ್ರದ ಸಹಾಯದಿಂದ ಅವರ ಮೇಲೆ ಬಿದ್ದಿದ್ದ ಕಲ್ಲುಗಳನ್ನು ತೆರವುಗೊಳಿಸಿ ರಕ್ಷಿಸಲಾಗಿದೆ. ಅವರ ಕೈ ಮತ್ತು ಕಾಲು ಮುರಿದು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗೆ ಹೊಸದುರ್ಗ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
