CHITRADURGA NEWS | 11 AUGUST 2024
ಚಿತ್ರದುರ್ಗ: ಪಠ್ಯೇತರ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿ ದೇಶಾಭಿಮಾನ ಮೂಡುವುದಲ್ಲದೆ ಮಾನಸಿಕವಾಗಿ ಸದೃಢವಾಗಲಿದ್ದಾರೆಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಪುಟ್ಟಸ್ವಾಮಿ ತಿಳಿಸಿದರು.
ಕ್ಲಿಕ್ ಮಾಡಿ ಓದಿ: loan facility; ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ | ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಜಿಲ್ಲಾ ಸ್ಕೌಟ್ ಅಂಡ್ ಗೈಡ್ಸ್ ಸಂಸ್ಥೆಯಲ್ಲಿ ಪಿ.ಯು.ಕಾಲೇಜು ಉಪನ್ಯಾಸಕರಿಗೆ ನಡೆದ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಜೀವನದಲ್ಲಿ ಶಿಸ್ತು, ಶಾಂತಿ ಮೈಗೂಡಿಸಿಕೊಳ್ಳಬೇಕಾದರೆ ಸ್ಕೌಟ್ ಅಂಡ್ ಗೈಡ್ಸ್ ಶಿಕ್ಷಣ ಸಹಕಾರಿಯಾಗಲಿದೆ. ಜಿಲ್ಲೆಯ ಪ್ರತಿ ಪಿ.ಯು.ಕಾಲೇಜಿನಲ್ಲಿ ರೋವರ್ ಅಂಡ್ ರೇಂಜರ್ ಘಟಕ ತೆರೆಯಲು ಸಹಕಾರ ನೀಡುತ್ತೇನೆ ಎಂದರು.
ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜಿನಪ್ಪ ಮಾತನಾಡಿ, ಹಿಂದುಳಿದ ಜಿಲ್ಲೆ ಚಿತ್ರದುರ್ಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೋವರ್ ಮತ್ತು ರೇಂಜರ್ ಘಟಕಗಳು ಆರಂಭವಾಗಬೇಕು. ಯುವ ಜನಾಂಗದಲ್ಲಿ ಸಂಸ್ಕøತಿ, ಸಂಸ್ಕಾರ, ಗುರು-ಹಿರಿಯರನ್ನು ಗೌರವಿಸುವ ಗುಣ ಬೆಳೆಸಬೇಕಿದೆ ಎಂದು ಹೇಳಿದರು.
ಕ್ಲಿಕ್ ಮಾಡಿ ಓದಿ: crop insurance; ಅಡಿಕೆ, ದಾಳಿಂಬೆ ಮತ್ತು ಮಾವು ಬೆಳೆವಿಮೆ ನೋಂದಣಿ | ಆಗಸ್ಟ್ 16 ಕೊನೆ ದಿನ
ಸ್ಕೌಟ್ ಅಂಡ್ ಗೈಡ್ಸ್ ಜಿಲ್ಲಾ ಸಂಸ್ಥೆ ಉಪಾಧ್ಯಕ್ಷ ಪರಮೇಶ್ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳಿಗೆ ರೋವರ್ ಮತ್ತು ರೇಂಜರ್ ಘಟಕಗಳನ್ನು ಕಡ್ಡಾಯವಾಗಿ ತೆರೆಯಬೇಕು. ಇತ್ತೀಚಿನ ದಿನಗಳಲ್ಲಿ ಯುವ ಜನಾಂಗ ಮೊಬೈಲ್ ಗೀಳಿಗೆ ಸಿಲುಕಿದ್ದು, ದೇಶಾಭಿಮಾನ, ಶಾಂತಿ, ಶಿಸ್ತು ಮರೆಯುತ್ತಿದ್ದಾರೆ. ಉಪನ್ಯಾಸಕರು ವಿದ್ಯಾರ್ಥಿಗಳನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಬೇಕೆಂದು ಸಲಹೆ ನೀಡಿದರು.
ಸ್ಕೌಟ್ ಅಂಡ್ ಗೈಡ್ಸ್ ಜಿಲ್ಲಾ ಸಂಸ್ಥೆಯ ಮುಖ್ಯ ಆಯುಕ್ತ ಕೆ.ರವಿಶಂಕರ್ ರೆಡ್ಡಿ ಶಿಬಿರದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಗೈಡ್ಸ್ ಆಯುಕ್ತರಾದ ಸವಿತಾ ಶಿವಕುಮಾರ್, ಸಹ ಕಾರ್ಯದರ್ಶಿ ಡಾ.ರಹಮತ್ವುಲ್ಲಾ, ಜಿಲ್ಲಾ ಸಂಘಟಕರಾದ ಕೆ.ಟಿ.ಮಲ್ಲೇಶಪ್ಪ, ಸಿ.ರವಿ, ಜಿಲ್ಲಾ ಸ್ಥಾನಿಕ ಆಯುಕ್ತ ಅನಂತರೆಡ್ಡಿ, ಹೆಚ್.ಟಿ.ತಿಪ್ಪೇಸ್ವಾಮಿ, ನರೇಂದ್ರಕುಮಾರ್ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number